ರಾಜ್ಯದಲ್ಲಿ ಕೋವಿಡ್ ನಿಂದ ಮೃತ ಪಟ್ಟ ಅಸಲಿ ಸಾವಿನ ಸಂಖ್ಯೆ ಬಹಿರಂಗ!
ಬೆಂಗಳೂರು, ಜೂನ್ 17: ಕೊರೊನಾ ಮಹಾಮಾರಿಯಿಂದ ಮೃತ ಪಟ್ಟವರ ನಿಜವಾದ ಸಂಖ್ಯೆಯನ್ನು ಕೇಂದ್ರ ಮತ್ತು ರಾಜ್ಯ ಸರಕಾರ ಮುಚ್ಚಿಡುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಲೇ ಇದೆ.
ವಿದೇಶಿ ಮಾಧ್ಯಮಗಳು ಕೂಡಾ ಭಾರತದಲ್ಲಿನ ಸಾವಿನ ಸಂಖ್ಯೆಯನ್ನು ಏನು ಸರಕಾರ ತೋರಿಸುತ್ತಿದೆಯೋ ಅದು ತಪ್ಪು ಲೆಕ್ಕ ಎಂದು ಟೀಕಿಸಿದ್ದವು. ಅದಕ್ಕೆ, ಕೇಂದ್ರ ಸರಕಾರ ಸ್ಪಷ್ಟನೆಯನ್ನು ನೀಡಿತ್ತು.
ವಿರೋಧ ಪಕ್ಷದವರು ಸಾವಿನ ಆಡಿಟ್ ನಡೆಯಬೇಕೆಂದು ಸರಕಾರವನ್ನು ಒತ್ತಾಯಿಸುತ್ತಲೇ ಇದೆ. ಈಗ, ಕಾಂಗ್ರೆಸ್ಸಿನ ಹಿರಿಯ ಮುಖಂಡ ಎಚ್.ಕೆ.ಪಾಟೀಲ್ ಕೂಡಾ ಸರಕಾರ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ನಿಂದ ಮೃತ ಪಟ್ಟವರ ಸಂಖ್ಯೆ ಸರಕಾರ ತೋರಿಸುತ್ತಿರುವುದು ಸತ್ಯಕ್ಕೆ ದೂರವಾದದು. ಕನಿಷ್ಟವೆಂದರೂ ಎಂಟರಿಂದ ಹತ್ತು ಪಟ್ಟು ಕಮ್ಮಿ ಲೆಕ್ಕವನ್ನು ಸರಕಾರ ತೋರಿಸುತ್ತಿದೆ ಎಂದು ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.

ಆಸ್ಪತ್ರೆಗಳು ಹಿಂದಿನ ಸಾವಿನ ಸಂಖ್ಯೆಯನ್ನು ಈಗ ತೋರಿಸುತ್ತಿದೆ
ರಾಜ್ಯದಲ್ಲಿ ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ, ಕೆಲವು ದಿನಗಳ ಹಿಂದೆ ಸಾವಿನ ಸಂಖ್ಯೆ ಹೆಚ್ಚಾಗಿದ್ದಾಗ, ಹಳೆಯ ಲೆಕ್ಕವನ್ನು ತೋರಿಸಲಾಗುತ್ತಿದೆ ಎಂದು ಖುದ್ದು ಆಯುಕ್ತ ಗೌರವ್ ಗುಪ್ತಾ ಒಪ್ಪಿಕೊಂಡಿದ್ದರು. ಆಸ್ಪತ್ರೆಗಳು ಹಿಂದಿನ ಸಾವಿನ ಸಂಖ್ಯೆಯನ್ನು ಈಗ ತೋರಿಸುತ್ತಿದೆ ಎಂದು ಗುಪ್ತಾ ಹೇಳಿದ್ದರು.

ಜೂನ್ 16ಕ್ಕೆ ಅನ್ವಯವಾಗುವಂತೆ 33,296 ಜನರು ಕೋವಿಡ್ ನಿಂದ ಮೃತ
"ಜೂನ್ 16ಕ್ಕೆ ಅನ್ವಯವಾಗುವಂತೆ 33,296 ಜನರು ಕೋವಿಡ್ ನಿಂದ ಮೃತ ಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ತನ್ನ ಬುಲೆಟಿನ್ ನಲ್ಲಿ ತೋರಿಸಿದೆ. ಕೋವಿಡ್ ನಿರ್ವಹಣೆಯಲ್ಲೂ ರಾಜ್ಯ ಸರಕಾರ ವಿಫಲಗೊಂಡಿತ್ತು. ಈಗ, ಸಾವಿನ ಅಸಲಿ ಸಂಖ್ಯೆಯನ್ನೂ ಮುಚ್ಚಿಡುತ್ತಿದೆ'ಎಂದು ಎಚ್.ಕೆ.ಪಾಟೀಲ್ ಆರೋಪಿಸಿದ್ದಾರೆ.

ರಾಜ್ಯ ಸರಕಾರದ ವಿರುದ್ದ ಗುರುತರ ಆರೋಪ
"ಮೊದಲನೇ ಅಲೆಯಲ್ಲಿ 23 ಸಾವಿರ ಜನ ಮೃತ ಪಟ್ಟಿದ್ದಾರೆಂದು ತೋರಿಸಲಾಗಿದೆ. ಒಟ್ಟು ನಮ್ಮ ರಾಜ್ಯದಲ್ಲಿ 3,27,985 ಜನರು ಸಾವನ್ನಪ್ಪಿದ್ದಾರೆಂದು ರಾಜ್ಯ ಸರ್ಕಾರದ ಮಾಹಿತಿ ಇದೆ. ಜನವರಿಯಿಂದ ಜೂನ್ ವರೆಗೂ ಈ ಅಂಕಿಅಂಶ ಎಲ್ಲೂ ತಾಳೆಯಾಗುತ್ತಿಲ್ಲ"ಎಂದು ಪಾಟೀಲ್ ಅವರು ಸರಕಾರದ ವಿರುದ್ದ ಗುರುತರ ಆರೋಪ ಮಾಡಿದ್ದಾರೆ.

ಸರಕಾರದ ವಿರುದ್ದ ಗಂಭೀರ ಆರೋಪ ಮಾಡಿದ ಎಚ್.ಕೆ.ಪಾಟೀಲ್
"ಕೊರೊನಾ ಮೊದಲನೇ ಮತ್ತು ಎರಡನೇ ಅಲೆಯಲ್ಲಿ ಸಾವನ್ನಪ್ಪಿದವರ ಡೆತ್ ಆಡಿಟ್ ಸಿಗದ ಹಾಗೆ ಮಾಡಲಾಗಿದೆ. ಒಟ್ಟು 87,082 ಸಾವಿರ ಸಾವು ಸಂಭವಿಸಿದೆ. ಎರಡೂವರೆ ಲಕ್ಷ ಸಾವನ್ನು ಮುಚ್ಚಿಟ್ಟಿದ್ದಾರೆ. ಇವರಿಗೆ ಮನುಷ್ಯತ್ವ ಅನ್ನೋದೇ ಇಲ್ಲ"ಎಂದು ಎಚ್.ಕೆ.ಪಾಟೀಲ್ ಟೀಕಿಸಿದ್ದಾರೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications