ಕಿರಿಯರಿಗೆ ಮಣೆ ಹಾಕುತ್ತಿರುವುದಕ್ಕೆ ಎಚ್.ಎಂ. ರೇವಣ್ಣ ಅಸಮಾಧಾನ
ಬೆಂಗಳೂರು, ಜೂನ್ 5: ರಾಜ್ಯ ಸಚಿವ ಸಂಪುಟದಲ್ಲಿ ಹಿರಿಯರ ಬದಲು ಕಿರಿಯರಿಗೆ ಅವಕಾಶ ನೀಡುವ ನಿರ್ಧಾರಕ್ಕೆ ಕಾಂಗ್ರೆಸ್ನ ಹಿರಿಯ ನಾಯಕ ಎಚ್.ಎಂ. ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಖಾತೆ ಹಂಚಿಕೆ ಸಂಬಂಧ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ಆರಂಭವಾಗುವ ಮುನ್ನವೇ ಕಾಂಗ್ರೆಸ್ನ ಕೆಲವು ನಾಯಕರಲ್ಲಿ ಅಸಮಾಧಾನ ಭುಗಿಲೆದ್ದಿದೆ.
ಜೆಡಿಎಸ್ಗೆ ಇಂಧನ, ಹಣಕಾಸು ಸೇರಿದಂತೆ ಪ್ರಮುಖ ಖಾತೆಗಳನ್ನು ಬಿಟ್ಟುಕೊಡಲಾಗಿದೆ. ಅವರಲ್ಲಿ ಎಚ್.ಡಿ. ರೇವಣ್ಣ ಸೇರಿದಂತೆ ಎಲ್ಲ ಘಟಾನುಘಟಿ ನಾಯಕರು ಪ್ರಭಾವಿ ಖಾತೆಗಳನ್ನು ಪಡೆದುಕೊಳ್ಳಲಿದ್ದಾರೆ.
ಆದರೆ, ಕಾಂಗ್ರೆಸ್ನಲ್ಲಿ ಎರಡಕ್ಕಿಂತ ಹೆಚ್ಚು ಬಾರಿ ಸಚಿವರಾದವರಿಗೆ ಮತ್ತು ಆರಕ್ಕಿಂತ ಹೆಚ್ಚು ಬಾರಿ ಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡಬಾರದು ಎಂಬ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದರಿಂದ ಪಕ್ಷದ ಹಿರಿಯರಿಗೆ ಸರ್ಕಾರದ ಆಡಳಿತದಲ್ಲಿ ಯಾವುದೇ ಪಾತ್ರವಿರುವುದಿಲ್ಲ. ಕೇವಲ ಶಾಸಕರಾಗಿ ಉಳಿಯಬೇಕಾಗುತ್ತದೆ. ಮಿಗಿಲಾಗಿ ತಮಗಿಂತ ಕಿರಿಯ, ಅನನುಭವಿಗಳ ಎದುರು ಕೆಲಸ ಮಾಡಿಸಿಕೊಳ್ಳಲು ಕೈಕಟ್ಟಿ ನಿಲ್ಲಬೇಕಾಗುತ್ತದೆ ಎಂದು ಎಚ್.ಎಂ. ರೇವಣ್ಣ ಅವರು ಬೇಸರ ಹೊರಹಾಕಿದ್ದಾರೆ.
ಕಿರಿಯ ಶಾಸಕರಿಗೆ ಮಣೆ ಹಾಕುವ ಹೈಕಮಾಂಡ್ ನಿರ್ಧಾರದ ವಿಚಾರದಲ್ಲಿ ಪಕ್ಷದ ಹಿರಿಯ ನಾಯಕರಲ್ಲಿ ಅತೃಪ್ತಿ ಉಂಟಾಗಿದೆ. ಅನುಭವಿಗಳಾಗಿದ್ದೂ, ಯಾವುದೇ ಅಧಿಕಾರವಿಲ್ಲದೆ ಕೂರಬೇಕಾಗುತ್ತದೆ ಎಂದು ಅನೇಕ ನಾಯಕರಲ್ಲಿ ಅಸಮಾಧಾನ ಮೂಡಿದೆ ಎಂದು ಮೂಲಗಳು ತಿಳಿಸಿವೆ.
ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರೂ ಖಾತೆ ಹಂಚಿಕೆ ಸಂಬಂಧ ನೇರವಾಗಿ ತಮ್ಮ ಅಕ್ರೋಶ ಹೊರಹಾಕಿದ್ದರು. ಇಂಧನ ಖಾತೆಯನ್ನು ಬಯಸಿದ್ದ ಅವರಿಗೆ ಅದು ಕೈತಪ್ಪಿದೆ. ಇದರಿಂದ ಸಿಟ್ಟಿಗೆದ್ದ ಅವರು ಮುಜರಾಯಿ ಖಾತೆ ಕೊಡಿ, ದೇವಸ್ಥಾನ ಸುತ್ತಾಡಿಕೊಮಡು ಇರುತ್ತೇನೆ ಎಂದು ಖಾರವಾಗಿ ವರಿಷ್ಠರ ಮುಂದೆ ಹೇಳಿದ್ದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications