ಮೋದಿ ವಿರುದ್ಧ 'ನಾಲಾಯಕ್' ಹೇಳಿಕೆ ಸಮರ್ಥಿಸಿ ಚುನಾವಣಾ ಆಯೋಗಕ್ಕೆ ಉತ್ತರ ನೀಡಿದ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಮೇ. 05: ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ 'ನಾಲಾಯಕ್' ಎಂಬ ಹೇಳಿಕೆ ನೀಡಿದ್ದ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಬುಧವಾರ ನೋಟಿಸ್ ಜಾರಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಬುಧವಾರ ನೋಟಿಸ್ ಜಾರಿ ಮಾಡಿ ಉತ್ತರ ನೀಡುವಂತೆ ಗಡುವು ನೀಡಿತ್ತು. ಚುನಾವಣಾ ಆಯೋಗದ (ಇಸಿ) ನೋಟಿಸ್‌ಗೆ ನೀಡಿದ ಉತ್ತರದಲ್ಲಿ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರು ನೀತಿಯ ಮಾದರಿಯನ್ನು ಉಲ್ಲಂಘಿಸಿಲ್ಲ. ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಂಜಾರ ಸಮುದಾಯಕ್ಕ ನೀಡಿದ "ಖಾಲಿ" ವಾಕ್ಚಾತುರ್ಯವನ್ನು ಮಾತ್ರ ನಾಲಾಯಕ್ ಎಂದು ಉಲ್ಲೇಖಿಸಿರುವುದಾಗಿ ಹೇಳಿದ್ದಾರೆ.

Congress leader Priyank Kharge defends nalayak remark

ಚುನಾವಣಾ ಆಯೋಗದ ನೋಟಿಸ್‌ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ಹಾಲಿ ಶಾಸಕ ಮತ್ತು ಚಿತ್ತಾಪುರ ಕ್ಷೇತ್ರದ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರು ತಮ್ಮ ಮೂರು ಪುಟಗಳ ಸುದೀರ್ಘ ಉತ್ತರದಲ್ಲಿ, "ನನ್ನ ಮೇಲೆ ಮಾಡಿರುವ ಆರೋಪವನ್ನು ಪ್ರಧಾನಿಯ ಹಿನ್ನೆಲೆಯಲ್ಲಿ ನೋಡಬೇಕು. ಬಂಜಾರ ಸಮುದಾಯವನ್ನುದ್ದೇಶಿಸಿ ಕಲಬುರಗಿಯಲ್ಲಿ ನರೇಂದ್ರ ಮೋದಿಯವರ ಮಾತುಗಳನ್ನು ಗಮನಿಸಬೇಕು. ಮೋದಿ-ಬೊಮ್ಮಾಯಿ ಸರ್ಕಾರದ ಬಂಜಾರ-ಪರಿಶಿಷ್ಟ ಜಾತಿ-ವಿರೋಧಿ ನೀತಿಗಳಿಂದ ತೀವ್ರ ನೋವನ್ನುಂಟುಮಾಡಿದೆ. ಇವರುಗಳು SC-ಬಂಜಾರ ಸಮುದಾಯವನ್ನು ಬಾಯಿಗೆ ಬಡಿದು ಹಾಕಿಕೊಂಡಿರುವುದು ಬಿಟ್ಟು ಏನನ್ನೂ ಮಾಡಿಲ್ಲ" ಎಂದು ತಿಳಿಸಿದ್ದಾರೆ.

ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಪ್ರತಿಯೊಬ್ಬ ಸದಸ್ಯರಿಗೂ ಅತ್ಯಂತ ನೋವಿನ ಸಂಗತಿಯೆಂದರೆ, ಮಾರ್ಚ್ 14, 2023 ರಂದು ಸಂಸತ್ತಿಗೆ ನೀಡಿದ ಉತ್ತರದಲ್ಲಿ ಮೋದಿ ಸರ್ಕಾರವು ಅವರಿಗೆ ಹೆಚ್ಚಿನ ಮೀಸಲಾತಿಯನ್ನು ನಿಷ್ಕರುಣೆಯಿಂದ ತಿರಸ್ಕರಿಸಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Congress leader Priyank Kharge defends nalayak remark

"ಇದು ಕರ್ನಾಟಕ ರಾಜ್ಯದಾದ್ಯಂತ ಎಸ್‌ಸಿ ಮತ್ತು ಎಸ್‌ಟಿಗಳ ಮನಸನ್ನು ಘಾಸಿಗೊಳಿಸಿದೆ. ಇದು ನನಗೆ ಅತೀವ ನೋವು ತಂದಿದೆ. ವಿಶೇಷವಾಗಿ ಎಸ್‌ಸಿ ಮತ್ತು ಎಸ್‌ಟಿಗಳಿಗೆ ಮೀಸಲಾತಿಯನ್ನು ಶಿಫಾರಸು ಮಾಡಿದ ನಾಗಮೋಹನ್ ದಾಸ್ ಸಮಿತಿಯನ್ನು ಸಮಾಜದ ದೀನದಲಿತ ವರ್ಗಗಳಿಗೆ ನ್ಯಾಯ ಒದಗಿಸುವ ಸಲುವಾಗಿ ನಾನು ಕರ್ನಾಟಕದ ಆಗಿನ ಸಾಮಾಜಿಕ ನ್ಯಾಯ ಸಚಿವರನ್ನಾಗಿ ನೇಮಿಸಿದ್ದೇನೆ. ಅವರನ್ನು ಪೂರ್ಣ ಹಕ್ಕುಗಳನ್ನು ಘನತೆ ಮತ್ತು ಗೌರವಗಳೊಂದಿಗೆ ಸಮಾನವಾಗಿ ತರಲು ನಾನು ಪ್ರಯತ್ನ ಪಟ್ಟಿದ್ದೇನೆ" ಎಂದು ಚುನಾವಣಾ ಆಯೋಗಕ್ಕೆ ನೀಡಿರುವ ಉತ್ತರದಲ್ಲಿ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

"ಇನ್ನೂ ನೋವಿನ ಸಂಗತಿಯೆಂದರೆ, ಒಂದು ಕಡೆ ನಮ್ಮ, ಅಂದರೆ ಎಸ್‌ಸಿ ಮತ್ತು ಎಸ್‌ಟಿಯ ನ್ಯಾಯಯುತ ಬೇಡಿಕೆಗಳು ಮತ್ತು ಮೀಸಲಾತಿಯ ಹಕ್ಕನ್ನು ಮೋದಿ ಸರ್ಕಾರ ತಿರಸ್ಕರಿಸಿದೆ. ಇನ್ನೊಂದು ಕಡೆ, ನಾವು ಭಾರತದ ಪ್ರಧಾನಿಯಿಂದ ನಿಂದನೆ ಮತ್ತು ಅಪಹಾಸ್ಯಕ್ಕೊಳಗಾಗಿದ್ದೇವೆ" ಎಂದು ಅಸಮಾಧಾನ ವ್ಯಕ್ತಪಡಿಸಿ ಉತ್ತರ ಬರೆದಿದ್ದಾರೆ.

ಪ್ರಧಾನಿ ವಿರುದ್ಧದ 'ನಾಲಾಯಕ್' ಹೇಳಿಕೆ ನೀಡಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಆರೋಪದ ಮೇಲೆ ಪ್ರಿಯಾಂಕ್‌ಗೆ ಮೇ 3 ಬುಧವಾರದಂದು ಶೋಕಾಸ್ ನೋಟಿಸ್ ಜಾರಿ ಮಾಡಿರುವ ಚುನಾವಣಾ ಆಯೋಗ, ಗುರುವಾರ ಸಂಜೆ 5 ಗಂಟೆಯೊಳಗೆ ಉತ್ತರ ನೀಡುವಂತೆ ಸೂಚಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+