ಗುರುವಾರ ಕರ್ನಾಟಕಕ್ಕೆ ರಾಹುಲ್ ಗಾಂಧಿ; ಇಲ್ಲಿದೆ ಕಾರ್ಯಕ್ರಮ ಪಟ್ಟಿ
ಬೆಂಗಳೂರು, ಮಾರ್ಚ್ 30: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೊಂದು ವರ್ಷವಷ್ಟೇ ಬಾಕಿ ಇರುವಂತೆ ಕೇಂದ್ರದ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಕಣ್ಣು ರಾಜ್ಯದ ಮೇಲೆ ನೆಟ್ಟಿದೆ. ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಎರಡು ದಿನಗಳ ರಾಜ್ಯ ಪ್ರವಾಸದಲ್ಲಿ ಮೊದಲ ದಿನ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ 115ನೇ ಜನ್ಮದಿನದ ಅಂಗವಾಗಿ ಮಠಕ್ಕೆ ತೆರಳಿ ಗದ್ದುಗೆಗೆ ನಮಿಸಲಿದ್ದಾರೆ. ತದನಂತರದಲ್ಲಿ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಳ್ಳಲಿದ್ದಾರೆ.
ಗುರುವಾರ ಬೆಂಗಳೂರಿಗೆ ಆಗಮಿಸಲಿರುವ ರಾಹುಲ್ ಗಾಂಧಿ, ರಸ್ತೆ ಮಾರ್ಗವಾಗಿ ಸಂಜೆ 4 ಗಂಟೆ ವೇಳೆಗೆ ತುಮಕೂರಿಗೆ ತೆರಳಲಿದ್ದಾರೆ. ರಸ್ತೆ ಮಾರ್ಗವಾಗಿ ಆಗಮಿಸುವ ಅವರಿಗೆ ತುಮಕೂರು ಟೋಲ್ ಬಳಿಯಲ್ಲಿಯೇ ಅದ್ಧೂರಿ ಸ್ವಾಗತ ಕೋರಲಾಗುತ್ತದೆ.

ಏಪ್ರಿಲ್ 1ರಂದು ಶಾಸಕರು, ಮಾಜಿ ಶಾಸಕರೊಂದಿಗೆ ಸಭೆ:
ಮೊದಲ ದಿನ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದ ನಂತರದಲ್ಲಿ ರಾಹುಲ್ ಗಾಂಧಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಏಪ್ರಿಲ್ 1ರ ಶುಕ್ರವಾರ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಕಾಂಗ್ರೆಸ್ಸಿನ ಎಲ್ಲ ಶಾಸಕರು, ಮಾಜಿ ಶಾಸಕರು ಹಾಗೂ ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು, ಸಂಸತ್ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ಅಭ್ಯರ್ಥಿಗಳು, ಮಾಜಿ ಸಂಸದರು, ವಿವಿಧ ಘಟಕಗಳ ಅಧ್ಯಕ್ಷರ ಜತೆ ಸಭೆ ನಡೆಸಲಿದ್ದಾರೆ.

ಬೆಲೆ ಏರಿಕೆ ವಿರುದ್ಧ ಅಭಿಯಾನಕ್ಕೆ ಕರೆ:
ದೇಶದಲ್ಲಿ ಬೆಲೆ ಏರಿಕೆಗೆ ಸಂಬಂಧಿಸಿದಂತೆ ರಾಜ್ಯದಲ್ಲೂ ಅಭಿಯಾನ ನಡೆಸುವಂತೆ ಕಾಂಗ್ರೆಸ್ ನಾಯಕರಿಗೆ ಕರೆ ನೀಡಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಮಾರ್ಚ್ 31ರಂದು ರಾಜ್ಯದ ಕಾಂಗ್ರೆಸ್ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಈ ಅಭಿಯಾನದಲ್ಲಿ ಭಾಗವಹಿಸಬೇಕು. ನಿಮ್ಮ ಮನೆ ಎದುರಿನಲ್ಲಿ ನಿಮ್ಮ ನಿಮ್ಮ ವಾಹನಗಳನ್ನು, ಸಿಲಿಂಡರ್ ಅನ್ನು ಇರಿಸಿ ಅದಕ್ಕೆ ಹೂವಿನ ಹಾರವನ್ನು ಹಾಕಿ ಜಾಗಟೆ ಬಾರಿಸಬೇಕು. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಟ್ಯಾಗ್ ಮಾಡಿ ಪೋಸ್ಟ್ ಹಾಕುವಂತೆ ಸೂಚನೆ ನೀಡಲಾಗಿದೆ.

ಏಪ್ರಿಲ್ 1ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ:
ರಾಹುಲ್ ಗಾಂಧಿ ರಾಜ್ಯ ಪ್ರವಾಸದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಏಪ್ರಿಲ್ 1ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಏಪ್ರಿಲ್ 1ರಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರ 115ನೇ ಜನ್ಮದಿನಾಚರಣೆ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ತದನಂತರ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಸಂಸ್ಥೆಯ ಸಮಾರಂಭ ಹಾಗೂ ಬೆಂಗಳೂರಿನಲ್ಲಿ ಸಹಕಾರ ಇಲಾಖೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications