ನೀರಾವರಿ ನಿರ್ಲಕ್ಷಿಸಿದ ನಿರಾಶಾದಾಯಕ ಬಜೆಟ್: ಎಸ್.ಆರ್. ಪಾಟೀಲ್
ಬೆಂಗಳೂರು, ಮಾರ್ಚ್ 8: ವಿಧಾನಸಭೆಯಲ್ಲಿಂದು ಕರ್ನಾಟಕದ ಮುಖ್ಯಮಂತ್ರಿ, ಹಣಕಾಸು ಸಚಿವ ಬಿ.ಎಸ್ ಯಡಿಯೂರಪ್ಪ ಅವರು 2021-22ನೇ ಸಾಲಿನ ಕರ್ನಾಟಕ ಆಯವ್ಯಯ ಪತ್ರ ಮಂಡನೆ ಮಾಡಲು ಮುಂದಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿ, ಸದನದಿಂದ ಹೊರ ನಡೆದರು. ಬಜೆಟ್ ಭಾಷಣದ ಬಳಿಕ ಕಾಂಗ್ರೆಸ್ ಮುಖಂಡರು ಪ್ರತಿಕ್ರಿಯೆ ನೀಡುತ್ತಿದ್ದು, ಇದು ನಿರಾಶಾದಾಯಕ ಬಜೆಟ್ ಎನ್ನುತ್ತಿದ್ದಾರೆ.
ವಿಧಾನಸೌಧದಲ್ಲಿ ಮಾಜಿ ಸಚಿವ ಎಸ್.ಆರ್. ಪಾಟೀಲ್ ಪ್ರತಿಕ್ರಿಯಿಸಿ, ಸಿಎಂ ಮಂಡಿರುವ ಬಜೆಟ್ನಲ್ಲಿ ಯಾವುದೇ ಯೋಜನೆ, ಘೋಷಣೆ ಕಂಡು ಬಂದಿಲ್ಲ. ''ಬಕಾಸುರನ ಹೊಟ್ಟೆಗೆ ಹಿಡಿ ಅನ್ನ ಹಾಕಿದಂತಾಗಿದೆ'' ನೀರಾವರಿ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ, ಇದು ನಿರಾಶಾದಾಯಕ ಬಜೆಟ್ ಎಂದಿದ್ದಾರೆ.
ಸಾಲದ ಸುಳಿಯಲ್ಲಿ ಸರ್ಕಾರ ಸಿಲುಕಿದೆ
ಎತ್ತಿನಹೊಳೆ ಯೋಜನೆಗೆ ಹಣ ಮೀಸಲಿಟ್ಟಿಲ್ಲ, ಗ್ರಾಮೀಣಾಭಿವೃದ್ಧಿ ಹೆಚ್ಚಿನ ಮೊತ್ತ ಸಿಕ್ಕಿಲ್ಲ, 31ನೇ ಜಿಲ್ಲೆಯಾದ ವಿಜಯನಗರಕ್ಕೆ ಒಂದು ರೂಪಾಯಿ ಹಣ ಮೀಸಲಿಟ್ಟಿಲ್ಲ, ಸಾಲದ ಸುಳಿಯಲ್ಲಿ ಸರ್ಕಾರ ಸಿಲುಕಿದ್ದು, ಕೇವಲ ಇದು ಭಾಷಣದ ಬಜೆಟ್ ಆಗಿದೆ ಎಂದರು.

''ಮೋದಿಯವರು ರೈತರ ಆದಾಯ ದ್ವಿಗುಣ ಮಾಡ್ತಿವಿ ಅಂತ ಹೇಳಿರೋದನ್ನೇ ಬಜೆಟ್ನಲ್ಲಿ ಸಿಎಂ ಹೇಳಿದ್ದಾರೆ, ಆದ್ರೆ ಹಣವನ್ನೇ ನೀಡಿಲ್ಲ ರಾಜ್ಯ ಅಭಿವೃದ್ಧಿ ದೃಷ್ಟಿಯಿಂದ ಈ ಬಜೆಟ್ ಪೂರಕವಾಗಿಲ್ಲ, ಇದೊಂದು ಜನ ವಿರೋಧಿ ಸರ್ಕಾರ, ಜನ ವಿರೋಧಿ ಬಜೆಟ್, ಸಮಾಜದ ಎಲ್ಲಾ ವರ್ಗದವರಿಗೂ ಇದು ನಿರಾಶದಾಯಕ ಬಜೆಟ್"ಎಂದು ಹೇಳಿದರು.
ಪ್ರತಿಭಟನೆ ಏಕೆ?
ಯಡಿಯೂರಪ್ಪನವರದ್ದು ಜನ ಪರ ಸರ್ಕಾರವಲ್ಲ ಇದು, ಸಿ ಡಿ ಸರ್ಕಾರ, ಬಜೆಟ್ ಮಾಡುವ ಅರ್ಹತೆ, ನೈತಿಕತೆ ಈ ಸರ್ಕಾರಕ್ಕೆ ಇಲ್ಲ ಹೀಗಾಗಿ, ಬಜೆಟ್ ಮಂಡನೆ ಮಾಡಬಾರದು ಎಂದು ಕಪ್ಪು ಪಟ್ಟಿ ಧರಿಸಿ ವಿರೋಧ ವ್ಯಕ್ತಪಡಿಸಿದ್ದೇವೆ. ಸರ್ಕಾರದ ವಿರುದ್ಧ ಮೇಲ್ಮೆನೆ, ಕೆಳಮನೆಯಲ್ಲಿ ಪ್ರತಿಭಟನೆ ಮಾಡಿದ್ದೇವೆ ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications