ತೇಜಸ್ವಿನಿ ಮಾತನಾಡಿದರೆ ಬಣ್ಣ ಬಯಲಾಗುತ್ತದೆ: ಬಿಜೆಪಿಗೆ ಸಿದ್ದು ಎಚ್ಚರಿಕೆ
Recommended Video
ಬೆಂಗಳೂರು, ಮೇ 10: ಮಾಜಿ ಸಚಿವ, ಕುಂದಗೋಳ ಕ್ಷೇತ್ರದ ಕಾಂಗ್ರೆಸ್ ಮುಖಂಡ ಸಿ.ಎಸ್. ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರದ ಒತ್ತಡವೇ ಕಾರಣ ಎಂಬ ಬಿಜೆಪಿ ಮುಖಂಡ ಬಿ. ಶ್ರೀರಾಮುಲು ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ.
ತಮ್ಮ ಪಕ್ಷದ ಕುರಿತು ಮಾತನಾಡುವ ಮೊದಲು ನಿಮ್ಮ ಪಕ್ಷದಲ್ಲಿನ ಹುಳುಕನ್ನು ನೋಡಿಕೊಳ್ಳಿ ಎಂದು ಅವರು ತಿರುಗೇಟು ನೀಡಿದ್ದಾರೆ.
ಮಾಜಿ ಸಚಿವ ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಉಂಟಾದ ಗೊಂದಲ ಮತ್ತು ವಿರೋಧಗಳನ್ನು ಅವರು ಬಿಜೆಪಿ ನಾಯಕರಿಗೆ ನೆನಪಿಸಿದ್ದಾರೆ.

ತೇಜಸ್ವಿನಿ ಅನಂತ್ ಕುಮಾರ್ ಅವರು ಈ ರೀತಿಯ ಕಿರುಕುಳದ ಬಗ್ಗೆ ಮಾತನಾಡಿದರೆ ನಿಮ್ಮೆಲ್ಲರ ಬಣ್ಣ ಬಯಲಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಎಸ್.ಎಸ್.ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರದ ಕಿರುಕುಳ ಕಾರಣ ಎಂದು ನಾಲಗೆ ಹರಿಬಿಟ್ಟಿರುವ @BJP4Karnataka ನಾಯಕರೇ,
— Siddaramaiah (@siddaramaiah) 10 May 2019
ದಿ.ಅನಂತಕುಮಾರ್ ಪತ್ನಿಗೆ ನೀಡಿರುವ ಕಿರುಕುಳವನ್ನು ನೆನಪು ಮಾಡಿಕೊಳ್ಳಿ.
ಎಲ್ಲವನ್ನೂ ಸಹಿಸಿಕೊಂಡಿರುವ
ಧೈರ್ಯವಂತ ಹೆಣ್ಣುಮಗಳು ತೇಜಸ್ವಿನಿಯವರು ಬಾಯಿ ಬಿಟ್ಟರೆ ನಿಮ್ಮಬಣ್ಣ ಬಯಲಾಗಲಿದೆ.
ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರದ ಕಿರುಕುಳ ಕಾರಣ ಎಂದು ನಾಲಗೆ ಹರಿಬಿಟ್ಟಿರುವ ಬಿಜೆಪಿ ನಾಯಕರೇ, ದಿ.ಅನಂತಕುಮಾರ್ ಪತ್ನಿಗೆ ನೀಡಿರುವ ಕಿರುಕುಳವನ್ನು ನೆನಪು ಮಾಡಿಕೊಳ್ಳಿ. ಎಲ್ಲವನ್ನೂ ಸಹಿಸಿಕೊಂಡಿರುವ ಧೈರ್ಯವಂತ ಹೆಣ್ಣುಮಗಳು ತೇಜಸ್ವಿನಿಯವರು ಬಾಯಿ ಬಿಟ್ಟರೆ ನಿಮ್ಮ ಬಣ್ಣ ಬಯಲಾಗಲಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯ ಅವರ ಟ್ವೀಟ್ಗೆ ಅವರ ಹಿಂಬಾಲಕರು ಅಷ್ಟೇ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ಡಿ.ಕೆ. ರವಿ ಮತ್ತು ಎಸ್ಐ ಗಣಪತಿ ಅವರ ಸಾವು, ಇತರೆ ಅಧಿಕಾರಿಗಳಿಗೆ ಕಿರುಕುಳ ನೀಡಿದ್ದರ ಬಗ್ಗೆ ಏನು ಎಂದು ಬಿಜೆಪಿ ಅನುಯಾಯಿಯಗಳು ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅವರಿಗೆ ಕಿರುಕುಳ ನೀಡಿದ್ದು ಮರೆತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
ಹಾಗೆಯೇ ಸಿದ್ದರಾಮಯ್ಯ ಅವರ ಅಭಿಮಾನಿಗಳು ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications