Sonia Gandhi Karnataka Visit : ಕರ್ನಾಟಕಕ್ಕೆ ಇಂದು ಸೋನಿಯಾಗಾಂಧಿ; ಅ.6ರಂದು ಭಾರತ್ ಜೋಡೊ ಯಾತ್ರೆಯಲ್ಲಿ ಭಾಗಿ
ಬೆಂಗಳೂರು, ಅ.3: ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಾಗಲೇ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಭರ್ಜರಿ ರಂಗು ಪಡೆಯುತ್ತಿದೆ. ಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಗುತ್ತಿದೆ. ಈ ಮಧ್ಯೆ ಅ.6ರಂದು ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರೂ ಸಹ ಕರ್ನಾಟಕದಲ್ಲಿ ನಡೆಯುವ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೂಲಗಳ ಪ್ರಕಾರ ಸೋನಿಯಾಗಾಂಧಿ ಅವರು ಅ.3 ಸೋಮವಾರವೇ ಕರ್ನಾಟಕಕ್ಕೆ ಬರಲಿದ್ದಾರೆ. ಬೆಳಗ್ಗೆ 8 ಗಂಟೆಗೆ ಮೈಸೂರಿಗೆ ಅವರು ಬರಲಿದ್ದಾರೆ. ಅಲ್ಲಿಂದ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.
ಸದ್ಯ ಭಾರತ್ ಜೋಡೊ ಪಾದಯಾತ್ರೆ ಸೋಮವಾರ ಮೈಸೂರು, ಶ್ರೀರಂಗಪಟ್ಟಣ, ಮಂಡ್ಯ ಮೂಲಕ ಪಾಂಡವಪುರ ತಲುಪಿ ಅಲ್ಲಿ ವಿಶ್ರಾಂತಿ ಪಡೆಯಲಿದೆ. ಆಯುಧ ಪೂಜೆ ಮತ್ತು ವಿಜಯದಶಮಿ ಅಂಗವಾಗಿ ಅ.4ಮತ್ತು5 ರಂದು ಪಾದಯಾತ್ರೆಗೆ ವಿರಾಮ ನೀಡಲಾಗಿದೆ.

ಎರಡು ದಿನಗಳ ವಿರಾಮ ಸಂದರ್ಭದಲ್ಲಿ ರಾಹುಲ್ಗಾಂಧಿ ಮಡಿಕೇರಿ ಹೊರವಲಯದ ಮೇಕೇರಿ ಗ್ರಾಮದಲ್ಲಿರುವ ಕೂರ್ಗ್ ವೈಲ್ಡರ್ನೆಸ್ ರೆಸಾರ್ಟ್ನಲ್ಲಿ ಉಳಿದುಕೊಳ್ಳಲಿದ್ದಾರೆ. ಸೋನಿಯಾಗಾಂಧಿ ಅವರೂ ಸಹ ಎರಡು ದಿನ ಇದೇ ರೆಸಾರ್ಟ್ನಲ್ಲಿ ಉಳಿದುಕೊಳ್ಳಲಿದ್ದು, ಎರಡು ದಿನ ಕೊಡಗು ಜಿಲ್ಲೆ ಕಾಂಗ್ರೆಸ್ನ ಶಕ್ತಿ ಕೇಂದ್ರ ಆಗುವ ಸಾಧ್ಯತೆ ಇದೆ.
ಅ.6ರಂದು ಪಾದಯಾತ್ರೆಯಲ್ಲಿ ಸೋನಿಯಾಗಾಂಧಿ:
ಭಾರತ್ ಜೋಡೋ ಯಾತ್ರೆಯ ಅ.6ರಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರೂ ಸಹ ಕೆಲ ಕಾಲ ಹೆಜ್ಜೆ ಹಾಕಿ ಕಾರ್ಯಕರ್ತರಿಗೆ ಶಕ್ತಿ ತುಂಬಲಿದ್ದಾರೆ. ಈ ಸಂದರ್ಭದಲ್ಲಿ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯೂ ಇದೆ.
ಕಾಂಗ್ರೆಸ್ಗೆ ಸಂಕಷ್ಟ ಕಾಲದಲ್ಲಿ ಕರ್ನಾಟಕವೇ ಪುಷ್ಟಿ ನೀಡಿದೆ. ಈಗಲೂ ಸಹ ಕಾಂಗ್ರೆಸ್ ಸಂಕಷ್ಟದಲ್ಲಿಯೇ ಇದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ಗೆ ಬಲ ನೀಡಬೇಕು ಮಾಡಲಿದ್ದಾರೆ. ಅಲ್ಲದೆ, ರಾಜ್ಯ ಕಾಂಗ್ರೆಸ್ ನಾಯಕರು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಮುಂದಿನ ಚುನಾವಣೆಗೆ ಒಗ್ಗಟ್ಟಾಗಿ ಸಿದ್ಧವಾಗಬೇಕು ಎಂಬುದನ್ನು ಮನದಟ್ಟು ಮಾಡಲಿದ್ದಾರೆ ಎಂದೂ ಸಹ ಕಾಂಗ್ರೆಸ್ ಮೂಲಗಳು ತಿಳಿಸಿವೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications