ಅತ್ತ ಸಿದ್ದರಾಮಯ್ಯ ಪ್ರಕೃತಿ ಚಿಕಿತ್ಸೆಗೆ: ಇತ್ತ, ಡಿ.ಕೆ.ಶಿವಕುಮಾರ್ ಬಣಕ್ಕೆ ಜಮೀರ್ ಅಹ್ಮದ್?
ಸಿದ್ದರಾಮಯ್ಯ ಭಾವೀ ಮುಖ್ಯಮಂತ್ರಿ ಮತ್ತು ಇದಾದ ನಂತರ ನಡೆದ ಜಾರಿ ನಿರ್ದೇಶನಾಲಯದ (ಇಡಿ) ದಾಳಿಯ ನಂತರ, ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಖಾನ್ ತಮ್ಮ ನಿಯತ್ತನ್ನು ಬದಲಾಯಿಸಿದರೇ ಎನ್ನುವ ಪ್ರಶ್ನೆ ಆಗಾಗ ಉದ್ಭವಾಗುತ್ತಲೇ ಇದೆ.
ಆದರೆ, ಸರಿಯಾದ ರಾಜಕೀಯ ದಾಳ ಉದುರಿಸುತ್ತಿರುವ ಮತ್ತು ಪಕ್ಷದ ಕಾರ್ಯಕರ್ತರಲ್ಲಿ ಬೇರೆ ಸಂದೇಶ ಹೋಗಬಾರದು ಎನ್ನುವ ಕಾರಣಕ್ಕಾಗಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮಾನ ಅಂತರವನ್ನು ಕಾಯ್ದುಕೊಂಡು ಬರುತ್ತಿದ್ದಾರೆ.
ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿದ್ದಾಗ ತಪ್ಪದೇ ದಿನವೊಂದಕ್ಕೆ ವಿಸಿಟ್ ಹಾಕುತ್ತಿದ್ದ ಜಮೀರ್, ಇಡಿ ದಾಳಿಯ ನಂತರ, ಅವರ ನಿವಾಸಕ್ಕೆ ಹೋಗುವುದನ್ನು ಕಮ್ಮಿ ಮಾಡಿದ್ದರು. ಇದರ ಬೆನ್ನಲ್ಲೇ, ಡಿ.ಕೆ.ಶಿವಕುಮಾರ್ ಅವರು ಜಮೀರ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿದ್ದರು.
ಈ ವಿದ್ಯಮಾನ, ಸಿದ್ದರಾಮಯ್ಯ ಮತ್ತು ಜಮೀರ್ ಬಾಂಧವ್ಯದ ನಡುವೆ ಕಂದಕ ಸೃಷ್ಟಿಸಿದೆ ಎಂದೇ ವ್ಯಾಖ್ಯಾನಿಸಲಾಗುತ್ತಿತ್ತು. ಇದು ಹೆಚ್ಚು ಪ್ರಚಾರ ಪಡೆದುಕೊಳ್ಳುತ್ತಿದ್ದಂತೆಯೇ, ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದ ನಂತರ ಸಿದ್ದರಾಮಯ್ಯನವರು ಜಮೀರ್ ನಿವಾಸಕ್ಕೆ ಊಟಕ್ಕೆ ಹೋಗಿದ್ದರು. ಆದರೆ..
|
ಷಡ್ಯಂತ್ರದ ಭಾಗವಾಗಿ ನನ್ನ ಮೇಲೂ ಹಲವು ರೀತಿ ದಾಳಿಗಳಾಗುತ್ತಿವೆ
ಶುಭ ಶುಕ್ರವಾರದಂದು (ಆ 20) ಜಮೀರ್ ಅಹ್ಮದ್ ಅವರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ದೇಶಾದ್ಯಂತ ಮುಸ್ಲಿಂ ಸಮುದಾಯದ ನಾಯಕರ ಹೆಸರನ್ನು ಪಟ್ಟಿ ಮಾಡಿ, ಇಡಿ ದಾಳಿ ನಡೆಸಲಾಗುತ್ತಿದೆ ಎಂದು ಜಮೀರ್ ಆರೋಪಿಸಿದ್ದಾರೆ. "ದೇಶದ ವಿವಿಧ ರಾಜ್ಯಗಳ ಪ್ರಬಲ ಮುಸ್ಲಿಂ ನಾಯಕರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಅವರಿಗೆ ಕಿರುಕುಳ ನೀಡುವ ಪ್ರಯತ್ನ ನಡೆಯುತ್ತಿದೆ. ಇಂತಹ ಷಡ್ಯಂತ್ರದ ಭಾಗವಾಗಿ ನನ್ನ ಮೇಲೂ ಹಲವು ರೀತಿ ದಾಳಿಗಳಾಗುತ್ತಿವೆ. ಆದರೆ ಇದ್ಯಾವುದಕ್ಕೂ ನಾನು ಹೆದರುವುದಿಲ್ಲ" ಎಂದು ಜಮೀರ್ ಟ್ವೀಟ್ ಮಾಡಿದ್ದರು.
Recommended Video

ಕಳೆದ ಹತ್ತು ದಿನಗಳಲ್ಲಿ ಇವರಿಬ್ಬರ ನಡುವಿನ ಎರಡನೇ ವೈಯಕ್ತಿಕ ಭೇಟಿ
ಈ ಹೇಳಿಕೆ ನೀಡಿದ ಬೆನ್ನಲ್ಲೇ ಜಮೀರ್ ಅಹ್ಮದ್ ಖಾನ್ ಅವರು ಮತ್ತೆ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಳೆದ ಹತ್ತು ದಿನಗಳಲ್ಲಿ ಇವರಿಬ್ಬರ ನಡುವಿನ ಎರಡನೇ ವೈಯಕ್ತಿಕ ಭೇಟಿ ಇದಾಗಿದೆ. ಈ ಭೇಟಿಯ ಬಗ್ಗೆ ಡಿಕೆಶಿಯವರನ್ನು ಕೇಳಿದಾಗ, ಹಾಗೇ ತೇಲಿಸಿ ಉತ್ತರವನ್ನು ನೀಡಿದ್ದಾರೆ. ಪಕ್ಷದ ಬೇರೆ ಬೇರೆ ವಿಚಾರಗಳಿರುತ್ತವೆ, ಆ ಬಗ್ಗೆ ಭೇಟಿ ನಡೆದಿದೆ ಎಂದು ಡಿಕೆಶಿ ಉತ್ತರ ನೀಡಿದ್ದಾರೆ. ಆದರೆ, ಬಿಜೆಪಿ ಈ ಭೇಟಿಗೆ ಬೇರೆ ಅರ್ಥ ಕಲ್ಪಿಸಿದೆ.
|
ಡಿಕೆಶಿ ಬಣ ಸೇರಿ ಗುರು ಸಿದ್ದರಾಮಯ್ಯಗೆ ನಿರಾಸೆ ಮೂಡಿಸಿದ್ದಾರೆ
"ಮುಂದಿನ ವಲಸೆಗೆ ಚಾಮರಾಜಪೇಟೆ ಕ್ಷೇತ್ರ ಸುರಕ್ಷಿತ ಎಂದು @siddaramaiah ಲೆಕ್ಕಾಚಾರ ಹಾಕಿ ನೆಮ್ಮದಿಯಿಂದ ಪ್ರಕೃತಿ ಚಿಕಿತ್ಸೆಗೆ ತೆರಳಿದ್ದಾರೆ. ಆದರೆ ರಾತ್ರಿ ಬೆಳಗಾಗುವಷ್ಟರಲ್ಲಿ #IMAZameer ಬಣ್ಣ ಬದಲಾಯಿಸಿದ್ದಾರೆ. ಡಿಕೆಶಿ ಬಣ ಸೇರಿ ಗುರು ಸಿದ್ದರಾಮಯ್ಯಗೆ ನಿರಾಸೆ ಮೂಡಿಸಿದ್ದಾರೆ. ಇನ್ನೆತ್ತ ವಲಸೆ ಸಿದ್ದರಾಮಯ್ಯ?" ಎಂದು ಬಿಜೆಪಿಯ ಕರ್ನಾಟಕ ಘಟಕ ಈ ರೀತಿಯ ಟ್ವೀಟ್ ಅನ್ನು ಮಾಡಿ ಕುತೂಹಲ ಸೃಷ್ಟಿಸಿದೆ.

ಸಿದ್ದರಾಮಯ್ಯನವರು ಬೆಂಗಳೂರು ಹೊರವಲಯದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಬೆಂಗಳೂರು ಹೊರವಲಯದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ (ಶನಿವಾರ, ಆಗಸ್ಟ್ 21) ತೆರಳಲಿದ್ದಾರೆ. ಸುಮಾರು ಹತ್ತು ದಿನ ಅವರ ಚಿಕಿತ್ಸೆ ಪಡೆಯಲಿದ್ದಾರೆ. ತಾವು ಬಾದಾಮಿ ಬಿಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಿದ್ದರಾಮಯ್ಯ ಖಡಾಖಂಡಿತವಾಗಿ ಹೇಳಿದ್ದರೂ, ಬಿಜೆಪಿಯ ಟ್ವೀಟ್ ಮತ್ತು ಡಿಕೆಶಿ ಮತ್ತು ಜಮೀರ್ ಅಹ್ಮದ್ ಅವರ ಭೇಟಿ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications