ಮೋದಿ ಅಲೆ ಮಂಗಮಾಯ? ಬಿಜೆಪಿ ಕಾರ್ಯಕರ್ತರಿಗೆ ‘ಎಲ್ಲಿದ್ದೀರಪ್ಪಾ’ ಅಂತಿದೆ ಕಾಂಗ್ರೆಸ್!
ಅದೇನ್ ಕಥೆಯೋ ಏನೋ.. ಅತ್ತ ಎಕ್ಸಿಟ್ ಪೋಲ್ ಭವಿಷ್ಯ ಸುಳ್ಳಾಗಿ ಹೋಗಿದೆ, ಹಾಗೇ ಬಿಜೆಪಿ ಪಕ್ಷ ಕೂಡ ಹೀನಾಯ ಹಿನ್ನಡೆ ಕಂಡಿದೆ. ಹೀಗಿದ್ದಾಗ ಕಾಂಗ್ರೆಸ್ ನಾಯಕರು, ಬಿಜೆಪಿ ಪಕ್ಷದ ಮುಖಂಡರು & ಕಾರ್ಯಕರ್ತರಿಗೆ ಹೊಸ ಸವಾಲು ಎಸೆಯುತ್ತಿದ್ದಾರೆ. ಹಾಗಾದ್ರೆ ಈಗ ನಿಜವಾಗಿಯೂ ಮೋದಿ ಅಲೆ ಮಾಯ ಆಗೋಯ್ತಾ? ಮುಂದೆ ಓದಿ.
ಬಿಜೆಪಿ 400 ಸ್ಥಾನಗಳಲ್ಲಿ ಗೆದ್ದು ಬೀಗುವ ವಿಶ್ವಾಸ ಹೊಂದಿತ್ತು. ಕೇವಲ 2 ತಿಂಗಳ ಹಿಂದೆ ಚುನಾವಣೆ ಶುರುವಾದ ಸಮಯದಲ್ಲಿ ಬಿಜೆಪಿಗೆ ಧೈರ್ಯ ಇತ್ತು. ಈ ಬಾರಿ ಹೊಸ ದಾಖಲೆ ನಿರ್ಮಾಣ ಮಾಡಿ, 400 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಗುರಿ ಇಟ್ಟುಕೊಂಡಿದ್ದರು ಬಿಜೆಪಿ ನಾಯಕರು. ಆದರೆ ಈಗ ಆಗಿರುವುದೇ ಬೇರೆ, ಬಿಜೆಪಿ 400 ಸ್ಥಾನಗಳನ್ನು ಗೆಲ್ಲುವುದು ಬಿಡಿ ಈಗಿನ ಸ್ಥಿತಿ ನೋಡಿದರೆ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡುವುದು ಕೂಡ ಕಷ್ಟವಾಗಿದೆ. ಹೀಗಿದ್ದಾಗಲೇ ಕಾಂಗ್ರೆಸ್ ನಾಯಕರು ಬಿಜೆಪಿ ಮುಖಂಡರಿಗೆ ಏನ್ ಹೇಳ್ತಿದ್ದಾರೆ ಗೊತ್ತಾ? ಆ ಬಗ್ಗೆ ತಿಳಿಯಲು ಮುಂದೆ ಓದಿ.

'ಎಲ್ಲಿದ್ದೀರಪ್ಪಾ' ಅಂತಿದೆ ಕಾಂಗ್ರೆಸ್!
ಹೌದು, ಬಿಜೆಪಿ 2024ರ ಲೋಕಸಭೆ ಚುನಾವಣೆಯಲ್ಲಿ ಭಾರಿ ಹಿನ್ನಡೆ ಕಂಡ ಹಿನ್ನೆಲೆ ಈಗ ಫುಲ್ ಟ್ರೋಲ್ ಮಾಡಲಾಗುತ್ತಿದೆ. ಅದರಲ್ಲೂ ಬಿಜೆಪಿ 400 ಸ್ಥಾನಗಳಲ್ಲಿ ಗೆಲುವು ಕಂಡು, ಭರ್ಜರಿ ಅಬ್ಬರದೊಂದಿಗೆ ಸರ್ಕಾರ ರಚಿಸಲಿದೆ ಅಂತಾ ಊರೆಲ್ಲಾ ಹೇಳಿಕೊಂಡು ಬಂದಿದ್ದ ಬಿಜೆಪಿ ಕಾರ್ಯರ್ತರು ಈಗ ಮನೆಯಲ್ಲಿ ಕೂತಿದ್ದಾರೆ. ಹೊರಗೆ ಬಂದು ಅವರು ಮಾತನಾಡಲಿ ಅಂತಿದ್ದಾರೆ ಕಾಂಗ್ರೆಸ್ ನಾಯಕರು. ಈ ಮೂಲಕ ಹೊಸದಾಗಿ ಕಿಚ್ಚು ಹೊತ್ತಿಕೊಂಡಿದ್ದು, ಈ ಕಿಚ್ಚು ಎರಡೂ ಪಕ್ಷಗಳ ನಡುವೆ ಧಗಧಗಿಸುವ ಸಾಧ್ಯತೆ ದಟ್ಟವಾಗಿದೆ.
ಸರ್ಕಾರ ರಚಿಸಲು ಸರ್ಕಸ್ ಶುರು!
ಎಕ್ಸಿಟ್ ಪೋಲ್ ಭವಿಷ್ಯ ಈಗ ಸುಳ್ಳಾಗಿ ಹೋಗಿದೆ. ಅದರಲ್ಲೂ ಇಷ್ಟು ದಿನ ಕಾಂಗ್ರೆಸ್ ಪಕ್ಷ 50 ನಂಬರ್ ದಾಟಲ್ಲ ಎಂದು ಹೇಳುತ್ತಿದ್ದ ಅಂಕಿ & ಅಂಶ ಉಲ್ಟಾ ಆಗಿದೆ. ಹೀಗಿದ್ದಾಗಲೇ, ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಸರ್ಕಸ್ ಕೂಡ ಶುರುವಾಗಿದೆ. ಯಾಕಂದ್ರೆ ಇನ್ನೇನು ಎರಡೂ ಮೈತ್ರಿಕೂಟಗಳು ಬಹುಮತಕ್ಕೆ ಹತ್ತಿರದಲ್ಲೇ ಇವೆ. ಹೀಗಾಗಿ ಸರ್ಕಾರ ರಚನೆ ಮಾಡಲು ಸರ್ಕಸ್ ಶುರುವಾಗಿದೆ. ಈ ನಡುವೆ ಬಿಜೆಪಿ ಕಾರ್ಯಕರ್ತರನ್ನ ಕಾಂಗ್ರೆಸ್ ನಾಯಕರು ಪ್ರಶ್ನೆ ಮಾಡಿ, 400 ಸ್ಥಾನ ಎಲ್ಲಿ? ಅಂತಾ ಕೇಳುತ್ತಿದ್ದಾರೆ.
ಒಟ್ನಲ್ಲಿ ಈ ತಿಕ್ಕಾಟ ಮತ್ತಷ್ಟು ದಿನಗಳ ಕಾಲ ಮುಂದುವರಿಯಲಿದೆ. ಅದ್ರಲ್ಲೂ ತಿಕ್ಕಾಟದ ನಡುವೆ ಕೇಂದ್ರದಲ್ಲಿ ಸರ್ಕಾರ ರಚನೆಗೆ ಕೂಡ ಸರ್ಕಸ್ ಶುರುವಾಗಿದೆ. ಮುಂದಿನ ದಿನಗಳಲ್ಲಿ ಈ ಕಿರಿಕ್ ಇನ್ನಷ್ಟು ಜೋರಾಗಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗುವ ಸಾಧ್ಯತೆ ಕೂಡ ಈಗ ಅಲ್ಲಗಳೆಯಲು ಆಗುವುದಿಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications