ಸಿದ್ದು, ಅಂಬಿ ವಿರುದ್ಧ ಕಾಂಗ್ರೆಸಿಗರಿಂದಲೇ ಮಸಲತ್ತು!
ಬೆಂಗಳೂರು, ಡಿ. 11 : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಸತಿ ಸಚಿವ ಅಂಬರೀಶ್ ವಿರುದ್ಧ ಕಾಂಗ್ರೆಸ್ ಪಕ್ಷದ ನಾಯಕರೇ ಹೈಕಮಾಂಡ್ಗೆ ದೂರು ನೀಡಿದ್ದಾರೆ. ಅಂಬರೀಶ್ ಬಗ್ಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದರೆ, ಸಿಎಂ ವಿರುದ್ಧ 25ಕ್ಕೂ ಹೆಚ್ಚು ಮಂದಿ ಮಾಜಿ ಶಾಸಕರು ದೂರು ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ
ಸಿದ್ದರಾಮಯ್ಯ
ಅವರು,
ಮೂಲ
ಕಾಂಗ್ರೆಸಿಗರನ್ನು
ನಿರ್ಲಕ್ಷಿಸಿ
ಜೆಡಿಎಸ್ನಿಂದ
ಬಂದವರಿಗೆ
ಹೆಚ್ಚಿನ
ಆದ್ಯತೆ
ನೀಡುತ್ತಿದ್ದಾರೆ
ಎಂದು
ಆರೋಪಿಸಿ
ಸುಮಾರು
25ಕ್ಕೂ
ಹೆಚ್ಚು
ಮಂದಿ
ಮಾಜಿ
ಶಾಸಕರು
ಮತ್ತು
ಮುಖಂಡರು
ಹೈಕಮಾಂಡ್ಗೆ
ದೂರು
ನೀಡಿದ್ದಾರೆ.
[ನಮಗೂ
ಸ್ವಲ್ಪ
ರಾಜಕೀಯ
ಗೊತ್ತಿದೆ
ಅಂದ್ರು
ಅಂಬರೀಶ್]
ಹಿರಿಯ ನಾಯಕ ಶಂಕರ್ ಮುನವಳ್ಳಿ ನೇತೃತ್ವದಲ್ಲಿ ಸುಮಾರು 25 ಮಂದಿ ಪ್ರಮುಖ ನಾಯಕರು ಸಹಿ ಹಾಕಿರುವ ದೂರು ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಉಪಾಧ್ಯಕ್ಷ ರಾಹುಲ್ಗಾಂಧಿ, ಸೋನಿಯಾಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹಮ್ಮದ್ ಪಟೇಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.[ಸಂಪುಟ ಸಭೆಗೆ ಅಂಬರೀಶ್ ಗೈರು]
ವಸತಿ ಸಚಿವ ಅಂಬರೀಶ್ ವಿರುದ್ಧ ದೂರು : ಮಂಡ್ಯ ಜಿಲ್ಲಾ ಕಾಂಗ್ರೆಸ್ ಭಿನ್ನಮತ ಮತ್ತೊಮ್ಮೆ ಬಹಿರಂಗಗೊಂಡಿದ್ದು, ವಸತಿ ಸಚಿವ ಅಂಬರೀಶ್ ವಿರುದ್ಧ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಹಿಂದ ಯುವ ವೇದಿಕೆ ಸದಸ್ಯರು ಹೈಕಮಾಂಡ್ಗೆ ದೂರು ನೀಡಿದ್ದಾರೆ. [ಅಂಬರೀಷ್- ಮೀರ್ ಸಾದಿಕ್, ಹೆಣ್ಣು ವಿರೋಧಿ]
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಶ್ ಸ್ಥಳೀಯ ಕಾರ್ಯಕರ್ತರ ಜೊತೆ ಬಾರ್ಗಳಲ್ಲಿ ಕುಣಿದು ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಈ ವಿಡಿಯೋಗಳು ವಾಟ್ಸಪ್ನಲ್ಲಿ ಹರಿದಾಡುತ್ತಿದೆ. ಅಂಬರೀಶ್ ಸಚಿವ ಸಂಪುಟ ಸಭೆಗೆ ಗೈರು ಹಾಜರಾಗಿದ್ದಾರೆ ಎಂದು ಪತ್ರದಲ್ಲಿ ದೂರಲಾಗಿದೆ.
ಈ ಪತ್ರವೂ ಸಹ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ದಿಗ್ವಿಜಯ್ ಸಿಂಗ್ ಅವರಿಗೆ ಹೋಗಿದೆ. ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಮತ್ತೊಮ್ಮೆ ಇದರಿಂದ ಗೊತ್ತಾಗಿದೆ.