Dhruva Narayan: ಅತ್ಯುನ್ನತ ಸ್ಥಾನಕ್ಕೇರಬೇಕಿದ್ದ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡಿದೆ: ಸಿದ್ದರಾಮಯ್ಯ
ಬೆಂಗಳೂರು, ಮಾರ್ಚ್ 11: ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಧ್ರುವನಾರಾಯಣ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ (61) ಅಗಲಿಕೆ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ತನ್ನ ಶ್ರಮ, ಪ್ರಬುದ್ಧತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ. ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ ನೆನಪಲ್ಲಿರುತ್ತದೆ ಎಂದಿದ್ದಾರೆ.
ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಧ್ರುವನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
— Siddaramaiah (@siddaramaiah) March 11, 2023
ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ.
1/2 pic.twitter.com/UME2UE9vOd
ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಧ್ರುವನಾರಾಯಣ ಅವರ ದಿಢೀರ್ ಸಾವಿನಿಂದ ತೀವ್ರ ಆಘಾತಗೊಂಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ವೈಯಕ್ತಿಕವಾಗಿ ಆತ್ಮೀಯರಾಗಿದ್ದ ಅವರು ಕಠಿಣ ನಿರ್ಧಾರ ಕೈಗೊಳ್ಳುವಾಗ ಅತ್ಯುತ್ತಮ ಸಲಹೆ ನೀಡುತ್ತಿದ್ದರು. ಯಾರ ಮನಸ್ಸನ್ನೂ ನೋವಿಸದೆ ಸದಾ ಹಸನ್ಮುಖರಾಗಿದ್ದ ವ್ಯಕ್ತಿತ್ವ ಅವರದ್ದು. ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಶ್ರೀ ಧ್ರುವ ನಾರಾಯಣ ಅವರ ದಿಢೀರ್ ಸಾವಿನಿಂದ ತೀವ್ರ ಆಘಾತಗೊಂಡಿದ್ದೇನೆ. ವೈಯಕ್ತಿಕವಾಗಿ ಆತ್ಮೀಯರಾಗಿದ್ದ ಅವರು ಕಠಿಣ ನಿರ್ಧಾರ ಕೈಗೊಳ್ಳುವಾಗ ಅತ್ಯುತ್ತಮ ಸಲಹೆ ನೀಡುತ್ತಿದ್ದರು. ಯಾರ ಮನಸ್ಸನ್ನೂ ನೋವಿಸದೆ ಸದಾ ಹಸನ್ಮುಖರಾಗಿದ್ದ ವ್ಯಕ್ತಿತ್ವ ಅವರದ್ದು. ಅವರ ಆತ್ಮಕ್ಕೆ ಸದ್ಗತಿ ಸಿಗಲಿ. pic.twitter.com/uX1o4Nyw0u
— DK Shivakumar (@DKShivakumar) March 11, 2023
ಇನ್ನು ಮಾಜಿ ಸಂಸದ ಧ್ರುವನಾರಾಯಣ ಅವರ ಅಗಲಿಕೆಗೆ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಂತಾಪ ಸೂಚಿಸಿದ್ದಾರೆ. ಧ್ರುವನಾರಾಯಣ ಹೃದಯಾಘಾತದಿಂದ ನಿಧನರಾಗಿದ್ದು ಅತೀವ ದುಃಖ ಉಂಟು ಮಾಡಿದೆ. ರಾಜ್ಯ ಕಾಂಗ್ರೆಸ್ನ ಕ್ರಿಯಾಶೀಲ ನಾಯಕರಾಗಿದ್ದ ಧೃವನಾರಾಯಣ್ ಪಕ್ಷದ ಆಸ್ತಿಯಾಗಿದ್ದರು. ಎರಡು ಬಾರಿ ಸಂಸದರಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಧೃವನಾರಾಯಣ್ ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಅವರ ಅಕಾಲಿಕ ನಿಧನ ಆಘಾತ ತಂದಿದೆ ಎಂದಿದ್ದಾರೆ.

ನನ್ನ ಆತ್ಮೀಯ ಮಿತ್ರರೂ ಆಗಿದ್ದ ಧ್ರುವನಾರಾಯಣ ಸದಾ ಹಸನ್ಮುಖಿ. ಎಲ್ಲರೊಂದಿಗೂ ನಗು ನಗುತ್ತಲೇ ಮಾತಾಡುತ್ತಿದ್ದ ಧ್ರುವನಾರಾಯಣ ಇಂದು ನಮ್ಮೊಂದಿಗಿಲ್ಲ ಎಂಬುದೇ ನೋವಿನ ಸಂಗತಿ. ಪಕ್ಷ ಸಂಘಟನೆಯಲ್ಲಿ ಧ್ರುವನಾರಾಯಣ ಕೊಡುಗೆ ಅಪಾರ.ಧ್ರುವನಾರಾಯಣ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
2
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 11, 2023
ನನ್ನ ಆತ್ಮೀಯ ಮಿತ್ರರೂ ಆಗಿದ್ದ R.ಧೃವನಾರಾಯಣ್ ಸದಾ ಹಸನ್ಮುಖಿ. ಎಲ್ಲರೊಂದಿಗೂ ನಗು ನಗುತ್ತಲೇ ಮಾತಾಡುತ್ತಿದ್ದ ಧೃವನಾರಾಯಣ್ ಇಂದು ನಮ್ಮೊಂದಿಗಿಲ್ಲ ಎಂಬುದೇ ನೋವಿನ ಸಂಗತಿ.
ಪಕ್ಷ ಸಂಘಟನೆಯಲ್ಲಿ ಧೃವನಾರಾಯಣ್ ಕೊಡುಗೆ ಅಪಾರ.
ಧೃವನಾರಾಯಣ್ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್












Click it and Unblock the Notifications