ಕಾಂಗ್ರೆಸ್ ನಾಯಕರು ವಿಶ್ವಾಸ ಮೂಡಿಸುತ್ತಿದ್ದಾರೆಂದು ಯಡಿಯೂರಪ್ಪ ಹೇಳಿದ್ಯಾಕೆ?

ಬೆಂಗಳೂರು, ಸೆ. 25: ಪ್ರತಿ ಆರು ತಿಂಗಳಿಗೊಮ್ಮೆ ಕಾಂಗ್ರೆಸ್ ಪಕ್ಷದವರು ಹೀಗೆಯೇ ಮಾಡುತ್ತಾ ಇರಲಿ. ಅವರು ಹೀಗೆ ಮಾಡುವುದರಿಂದ ನನಗೆ ಆರು ತಿಂಗಳ ಕಾಲ ವಿಶ್ವಾಸ ಬರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಭಾಗವಹಿಸುವ ಮೊದಲು ವಿಧಾನಸೌಧದಲ್ಲಿ ಅವರು ಮಾತನಾಡಿದ್ದಾರೆ.

Recommended Video

      ಸಿದ್ದು ಹೊಸ ತಂತ್ರಗಾರಿಕೆ | Siddaramaiah | Oneindia Kannada

      ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ ನನಗೆ ವಿಶ್ವಾಸ ಮೂಡಿಸುವ ಕೆಲಸವನ್ನು ಕಾಂಗ್ರೆಸ್‌ ನಾಯಕರು ಮಾಡುತ್ತಿದ್ದಾರೆ. ಪ್ರತಿ ಆರು ತಿಂಗಳಿಗೊಮ್ಮೆ ಅವರು ಹೀಗೆಯೇ ಮಾಡಲಿ. ಅದರಿಂದ ಸರ್ಕಾರದ ಮೇಲೆ ಯಾವುದೇ ಪರಿಣಾಮವಾಗದು ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದರು.

      ರೈತರನ್ನು ಕರೆದು ಮಾತನಾಡುತ್ತೇನೆ: ಭೂಸುಧಾರಣಾ ಕಾಯಿದೆಗೆ ತಿದ್ದುಪಡಿ ವಿರೋಧಿಸಿ ಹೋರಾಟ ಮಾಡುತ್ತಿರುವ ರೈತರನ್ನು ಕರೆದು ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇವತ್ತು ಮಧ್ಯಾಹ್ನ ರೈತ ಸಂಘಟನೆಗಳ 4-5 ಮುಖಂಡರನ್ನು ಚರ್ಚೆಗೆ ಬರುವಂತೆ ಮನವಿ ಮಾಡಿದ್ದೇನೆ. ಮಧ್ಯಾಹ್ನ ರೈತ ಸಂಘದ ಮುಖಂಡರನ್ನು ಭೇಟಿಯಾತ್ತೇನೆ.

      Congress leaders giving confidence by tabling no-confidence motion against state govt: Yediyurappa

      ಈ ವರೆಗೆ ಕೈಗಾರಿಕೆಗೆ ಶೇ 2ರಷ್ಟು ಭೂಮಿಯನ್ನು ಮಾತ್ರ ಬಳಸಲಾಗುತ್ತಿದೆ. ನೀರಾವರಿ ಜಮೀನನ್ನು ಯಾರೇ ಖರೀದಿಸಿದರೂ ಕೂಡ ಅದನ್ನು ಕೃಷಿ ಉದ್ದೇಶಕ್ಕೆ ಬಳಸಬೇಕು. ಹೀಗಾಗಿ ನೀರಾವರಿ ಭೂಮಿಯನ್ನು ಯಾರೇ ಖರೀದಿ ಮಾಡಿದರೂ, ರೈತರಿಗೆ ಯಾವುದೇ ತೊಂದರೆ ಆಗಲ್ಲ ಆ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿಕೆ ಕೊಟ್ಟಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+