ಕಾಂಗ್ರೆಸ್ ಪಕ್ಷ ಬಿಡಲು ಸಿದ್ಧವಾದ ಮುನಿಯಪ್ಪರ ಕೈಕಟ್ಟುವ ಪ್ರಯತ್ನ?
ಬೆಂಗಳೂರು, ಸೆ. 29: ರಾಹುಲ್ ಗಾಂಧಿ ನೇತೃತ್ವದಲ್ಲಿ ಸಾಗಿಬರುತ್ತಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಕಾಲಿಡುತ್ತಿದೆ. ಯಾತ್ರೆಯನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಆಗಿದೆ. ಅನೇಕ ಸಂಘಟನೆಗಳು ಈ ಯಾತ್ರೆಯ ಯಶಸ್ವಿಗೆ ಕೈಜೋಡಿಸಿವೆ. ಇದೇ ವೇಳೆ, ಭಾರತ್ ಜೋಡೋ ಯಾತ್ರೆಯನ್ನು ಇಟ್ಟುಕೊಂಡು ಕಾಂಗ್ರೆಸ್ನಲ್ಲಿರುವ ಕೆಲ ಒಡಕುಗಳನ್ನು ಮುಚ್ಚುವ ಪ್ರಯತ್ನವೂ ನಡೆದಿದೆ.
ಕಾಂಗ್ರೆಸ್ ತೊರೆಯಲು ಸಿದ್ಧವಾಗಿರುವ ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಮುಖಂಡ ಕೆಎಚ್ ಮುನಿಯಪ್ಪ ಅವರನ್ನು ಭಾರತ್ ಜೋಡೋ ಯಾತ್ರೆಗೆ ಜೋಡಿಕೊಳ್ಳುವ ಮೂಲಕ ಅವರನ್ನು ಹಿಡಿದಿಡುವ ಪ್ರಯತ್ನ ಪಕ್ಷದಲ್ಲಿ ನಡೆಯುತ್ತಿರುವುದು ತಿಳಿದುಬಂದಿದೆ. ಡಾ. ಜಿ ಪರಮೇಶ್ವರ ಮತ್ತು ಬಿ.ಕೆ. ಹರಿಪ್ರಸಾದ್ ನೇತೃತ್ವದ ತಂಡವೊಂದು ಕೆಎಚ್ ಮುನಿಯಪ್ಪ ಜೊತೆ ಮಾತನಾಡಿರುವುದು ಕುತೂಹಲ ಮೂಡಿಸಿದೆ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಸಕ್ರಿಯ ಪಾತ್ರ ವಹಿಸುವಂತೆ ಮುನಿಯಪ್ಪರನ್ನು ಕೇಳಿಕೊಳ್ಳಲಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ, ಕಾಂಗ್ರೆಸ್ನ ಹಿರಿಯ ನಾಯಕರಾಗಲೀ, ಮುನಿಯಪ್ಪ ಆಗಲೀ ಈ ಬಗ್ಗೆ ಮಾಹಿತಿ ಬಿಟ್ಟುಕೊಟ್ಟಿಲ್ಲ. ಮುನಿಯಪ್ಪ ಪಕ್ಷ ತೊರೆಯುವ ವಿಚಾರವನ್ನೂ ಪರಮೇಶ್ವರ್ ತಳ್ಳಿಹಾಕಿದ್ದಾರೆ.

"ಮುನಿಯಪ್ಪ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು. ಅವರು ಕಾಂಗ್ರೆಸ್ ತೊರೆಯುತ್ತಾರೆ ಎಂದು ಹೇಳುವುದೆಲ್ಲಾ ಬರೀ ವದಂತಿ ಅಷ್ಟೇ. ಮುಖ್ಯ ರಾಜಕಾರಣದಲ್ಲಿ ಸ್ವಲ್ಪ ದಿನಗಳಿಂದ ಅವರು ಸಕ್ರಿಯರಾಗಿರಲಿಲ್ಲ ಅಷ್ಟೇ. ಆದರೆ, ಈಗ ಮತ್ತೆ ಆ್ಯಕ್ಟಿವ್ ಆಗುತ್ತಿದ್ದಾರೆ," ಎಂದು ಮಾಜಿ ಉಪಮುಖ್ಯಮಂತ್ರಿಗಳೂ ಆದ ಡಾ. ಜಿ ಪರಮೇಶ್ವರ ಹೇಳಿದ್ದಾರೆ.
ಇನ್ನು, ಬಿಕೆ ಹರಿಪ್ರಸಾದ್ ಮತ್ತು ಡಾ. ಪರಮೇಶ್ವರ್ ಭಾರತ್ ಜೋಡೋ ಯಾತ್ರೆ ವಿಚಾರವಾಗಿ ಮಾತನಾಡಲು ಭೇಟಿ ಮಾಡಿದ್ದರು ಎಂಬುದನ್ನು ಮುನಿಯಪ್ಪ ತಳ್ಳಿಹಾಕಿದ್ದಾರೆ. ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ನಾಮಪತ್ರ ಸಲ್ಲಿಸುವ ವಿಚಾರದಲ್ಲಿ ಎದ್ದಿರುವ ಗೊಂದಲ ಪರಿಸ್ಥಿತಿ ಬಗ್ಗೆ ಚರ್ಚಿಸಲು ಕಾಂಗ್ರೆಸ್ ನಾಯಕರು ತಮ್ಮನ್ನು ಭೇಟಿಯಾಗಿದ್ದರು ಎಂದು ಹೇಳಿರುವ ಮುನಿಯಪ್ಪ, "ನಾವು ಪಕ್ಷದ ಶಿಸ್ತಿನ ಸಿಪಾಯಿಗಳು. ಸೋನಿಯಾ ಗಾಂಧಿ ಮತ್ತು ಹೈಕಮಾಂಡ್ ಹೇಳುವ ಸೂಚನೆಗಳನ್ನು ಶಿರಸಾವಹಿಸಿ ಪಾಲಿಸುತ್ತೇವೆ" ಎಂದು ಸ್ಪಷ್ಟಪಡಿಸಿದ್ದಾರೆ.
ಮುನಿಯಪ್ಪ ಅಸಮಾಧಾನ ನಿಜವಾ?
ಕೋಲಾರ ಕ್ಷೇತ್ರದಿಂದ ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಕೆಎಚ್ ಮುನಿಯಪ್ಪ 2019ರ ಚುನಾವಣೆಯಲ್ಲಿ ಬಿಜೆಪಿಯ ಎಸ್ ಮುನಿಸ್ವಾಮಿ ಎದುರು ಸೋತಿದ್ದರು. ಅದಾದ ಬಳಿಕ ಅವರು ಕಾಂಗ್ರೆಸ್ ಪಕ್ಷದೊಳಗೆ ಕಡೆಗಣಿತವಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯ ಮತ್ತು ಮುನಿಯಪ್ಪ ಮಧ್ಯೆ ಬಹಳಷ್ಟು ಭಿನ್ನಾಭಿಪ್ರಾಯಗಳಿರುವ ಬಗ್ಗೆಯೂ ವದಂತಿಗಳಿವೆ.
ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಕೆಎಚ್ ಮುನಿಯಪ್ಪರನ್ನು ಭೇಟಿ ಮಾಡಿದ್ದರು. ಸಿಎಂ ಬೊಮ್ಮಾಯಿ ಸೂಚನೆ ಮೇರೆಗೆ ಈ ಭೇಟಿ ನಡೆದಿದೆ ಎನ್ನಲಾಗುತ್ತಿದೆ. ಈ ಬೆಳವಣಿಗೆ ಬಳಿಕ ಕೆಎಚ್ ಮುನಿಯಪ್ಪ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಬಗ್ಗೆ ಸುದ್ದಿ ದಟ್ಟವಾಗಿ ಕೇಳಿಬರುತ್ತಿದೆ.

ಇದಕ್ಕೆ ಇಂಬುಕೊಡುವಂತೆ, ಸಿಎಂ ಬಸವರಾಜ ಬೊಮ್ಮಾಯಿ ಅವರು ಮುನಿಯಪ್ಪ ವಿಚಾರವಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಮಾತನಾಡಿರುವುದು ತಿಳಿದುಬಂದಿದೆ.
ಮುನಿಯಪ್ಪಗೆ ಬೇಡಿಕೆ
ಕಾಂಗ್ರೆಸ್ನೊಳಗೆ ಅಸಮಾಧಾನಗೊಂಡಿರುವ ಕೆಎಚ್ ಮುನಿಯಪ್ಪ ಅವರನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿ ಮಾತ್ರವಲ್ಲ ಜೆಡಿಎಸ್ ಕೂಡ ಪ್ರಯತ್ನಿಸುತ್ತಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೀಮೆಯಲ್ಲಿರುವ ಮುಸ್ಲಿಂ ಸಮುದಾಯಗಳ ಬೆಂಬಲ ಕಾಂಗ್ರೆಸ್ ಜೊತೆಗೆ ಜೆಡಿಎಸ್ಗೂ ಹಂಚಿಹೋಗಿದೆ. ಈಗ ಮುನಿಯಪ್ಪ ಸೇರಿಕೊಂಡರೆ ಪಕ್ಷದ ಬಲ ಇನ್ನಷ್ಟು ಹೆಚ್ಚುತ್ತದೆ ಎಂಬುದು ಜೆಡಿಎಸ್ ಎಣಿಕೆ.
74 ವರ್ಷದ ಕೆಎಚ್ ಮುನಿಯಪ್ಪ ಮಾದಿಗ ಸಮುದಾಯದವರು. ಎಡಗೈ ದಲಿತ ವರ್ಗದ ಇವರಿಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಬಹಳ ಬೆಂಬಲ ಇದೆ. 1991ರಿಂದ 2014ರವರೆಗೆ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಇವರನ್ನು ಸೋಲಿಸುವವರೇ ಇಲ್ಲದಂತಿದ್ದರು. ಮಾಜಿ ಕೇಂದ್ರ ಸಚಿವರಾದ ಮುನಿಯಪ್ಪ ಅವರಿಗೆ ಒಬ್ಬ ಮಗ ಮತ್ತು ಮೂವರು ಹೆಣ್ಮಕ್ಕಳಿದ್ದಾರೆ. ಮಗಳು ರೂಪಾ ಶಶಿಧರ್ ಕೂಡ ರಾಜಕೀಯದಲ್ಲಿದ್ದು ಕೆಜಿಎಫ್ ಶಾಸಕಿಯಾಗಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications