ಸಂಪುಟ ವಿಸ್ತರಣೆ: ಜು.18ಕ್ಕೆ ಕಾಂಗ್ರೆಸ್ ಹೈಕಮಾಂಡ್ ಜತೆ ಚರ್ಚೆ
ಬೆಂಗಳೂರು, ಜುಲೈ 15: ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿಗಳಿಗೆ ನೇಮಕ ವಿಚಾರವಾಗಿ ಹೈಕಮಾಂಡ್ ಜತೆ ಚರ್ಚಿಸಲು ಕಾಂಗ್ರೆಸ್ ಮುಖಂಡರು ಜುಲೈ 18ರಂದು ದೆಹಲಿಗೆ ಹಾರಲಿದ್ದಾರೆ.
ಬಜೆಟ್ ಕಾರಣದಿಂದ ಮುಂದೂಡಲ್ಪಟ್ಟಿದ್ದ ಎರಡನೇ ಹಂತದ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿಗಳ ನೇಮಕಾತಿ ಬಗ್ಗೆ ಹೈಕಮಾಂಡ್ ಬಳಿ ವಿಸ್ತೃತವಾಗಿ ಚರ್ಚಿಸಲಾಗುತ್ತದೆ.
ಜುಲೈ 18ರಂದು ದೆಹಲಿಯಲ್ಲಿ ನಡೆಯುವ ಚರ್ಚೆಯಲ್ಲಿ ನೂತನ ಕೆಪಿಸಿಸಿ ಅಧ್ಯಕ್ಷ, ಉಪಾಧ್ಯಕ್ಷ, ಉಪಮುಖ್ಯಮಂತ್ರಿ ಪರಮೇಶ್ವರ್, ಸಚಿವ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಈ ವಿಷಯವನ್ನು ಜಿ.ಪರಮೇಶ್ವರ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅತೃಪ್ತರಿಗೆ ಈ ಬಾರಿ ಮಣೆ ಹಾಕಲು ಕಾಂಗ್ರೆಸ್ ನಿಶ್ಚಯಿಸಿದ್ದು, ಎಂಬಿ ಪಾಟೀಲ್ ಅವರಿಗೆ ಸಚಿವ ಸ್ಥಾನ ಗ್ಯಾರೆಂಟಿ ಎನ್ನಲಾಗುತ್ತಿದೆ. ಉಳಿದ ಅತೃಪ್ತರು ನಿಗಮ ಮಂಡಳಿ ಸ್ಥಾನಗಳಿಗೆ ಸಮಾಧಾನ ಮಾಡಿಕೊಳ್ಳಬೇಕಿದೆ.
ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಿಗಮ ಮಂಡಳಿ ಸ್ಥಾನಗಳನ್ನು ಹಂಚಿಕೊಂಡಿದ್ದು ಕಾಂಗ್ರೆಸ್ಗೆ ಹೆಚ್ಚಿನ ಪಾಲು ದೊರೆತಿದೆ. ನಿನ್ನೆ ತಾನೇ ದೇವೇಗೌಡರು ತಮ್ಮ ಪಕ್ಷದ ಸಭೆಯಲ್ಲಿ 'ಜೆಡಿಎಸ್ಗೆ ನಿಗಮ ಮಂಡಳಿಗಳು ಕಡಿಮೆ ದೊರಕಲಿವೆ ಅವಕಾಶ ಸಿಗದವರು ಬೇಸರವಾಗುವುದು ಬೇಡ' ಎಂದಿದ್ದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು












Click it and Unblock the Notifications