ಸಿದ್ದರಾಮಯ್ಯ, ಪರಮೇಶ್ವರ್ ಅಂಗಳಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ
ಬೆಂಗಳೂರು, ಏಪ್ರಿಲ್ 8: ಮೇ 12ರಂದು ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಹೈಕಮಾಂಡ್ ಸೂಚನೆ ನೀಡಿದೆ. ಒಮ್ಮೆ ನೀವು ಪಟ್ಟಿಯನ್ನು ಅಂತಿಮಗೊಳಿಸಿದ ನಂತರ ನಾವು ಅದಕ್ಕೆ ಅಧಿಕೃತ ಮುದ್ರೆ ಒತ್ತುತ್ತೇವೆ ಎಂದು ಹೈಮಾಂಡ್ ಹೇಳಿದೆ.
ಎಐಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮತ್ತು ಸ್ಟ್ರೀನಿಂಗ್ ಸಮಿತಿ ಅಧ್ಯಕ್ಷ ಮಧುಸೂಧನ್ ಮಿಸ್ತ್ರಿ ಜೊತೆ ಸಮಾಲೋಚನೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವಂತೆ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಗೆ ಸೂಚನೆ ನೀಡಲಾಗಿದೆ.
ಏಪ್ರಿಲ್ 15ರಂದು ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾವುದೇ ವಿವಾದಗಳು ಹೈಕಮಾಂಡ್ ಗೆ ಬೇಡವಾಗಿದ್ದು ರಾಜ್ಯಮಟ್ಟದಲ್ಲೇ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಗೆ ಪಟ್ಟಿ ಅಂತಿಗೊಳಿಸುವ ಹೊಣೆ ನೀಡಲಾಗಿದೆ.

ಕಾಂಗ್ರೆಸ್ ಗೆ ಇಲ್ಲಿಯವರೆಗೆ ಅಭ್ಯರ್ಥಿಗಳಿಂದ 1,000 ಅರ್ಜಿಗಳು ಬಂದಿವೆ. ಎಲ್ಲಾ ಕಾಂಗ್ರೆಸ್ ನ ಹಾಲಿ ಶಾಸಕರು ಮತ್ತು ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದಿಂದ ವಲಸೆ ಬಂದವರು ಟಿಕೆಟ್ ಪಡೆಯುವ ಸಾಧ್ಯತೆ ಇದೆ.
ಆದರೆ ಕಾಂಗ್ರೆಸ್ ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ 30 ಶಾಸಕರು ಸೋಲಲಿದ್ದಾರೆ ಎಂಬ ವರದಿ ಬಂದಿರುವುದರಿಂದ ಇವರಿಗೆ ಟಿಕೆಟ್ ಸಿಗಲಿದೆಯಾ ಎಂಬ ಬಗ್ಗೆ ಅನುಮಾನಗಳಿವೆ.












Click it and Unblock the Notifications