ಜನವರಿ 18 ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ, ಶಾಸಕರಿಗೆ ಎಚ್ಚರಿಕೆ?
ಬೆಂಗಳೂರು, ಜನವರಿ 16: ಆಪರೇಷನ್ ಕಮಲದ ಕತ್ತಿ ತಲೆ ಮೇಲೆ ತೂಗುತ್ತಿರುವ ಕಾರಣ ಎಚ್ಚೆತ್ತುಕೊಂಡಿರುವ ಕರ್ನಾಟಕ ಕಾಂಗ್ರೆಸ್ ಜನವರಿ 18 ಕ್ಕೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಸುತ್ತಿದೆ.
ಜನವರಿ 18 ರಂದು ನಗರದ ಖಾಸಗಿ ಹೊಟೆಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಕೆಲವು ಮಹತ್ವದ ಬದಲಾವಣೆಗಳ ಬಗ್ಗೆ ಶಾಸಕರಿಗೆ ಕೆಪಿಸಿಸಿ ಮಾಹಿತಿ ನೀಡಲಿದೆ, ಮತ್ತು ಆಪರೇಷನ್ ಕಮಲಕ್ಕೆ ಬಲಿ ಆಗದಂತೆ ಎಚ್ಚರ ನೀಡಲಿದೆ.
ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡು ಮುಂಬೈಗೆ ತೆರಳಿದ್ದ ಶಾಸರಲ್ಲಿ ಕೆಲವರು ವಾಪಸ್ ಬಂದಿದ್ದು, ರಮೇಶ್ ಜಾರಕಿಹೊಳಿ ಮಾತ್ರ ಅಲ್ಲೇ ಉಳಿದಿದ್ದಾರೆ. ಆದರೆ ಜನವರಿ 18 ರಂದು ನಡೆವ ಶಾಸಕಾಂಗ ಸಭೆಗೆ ಅವರೂ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸರ್ಕಾರ ಉರುಳಿಸಲು ಬಿಜೆಪಿ ಮಾಡಿದ್ದ ಪ್ರಯತ್ನದಿಂದ ಪ್ರಸ್ತುತ ಕಾಂಗ್ರೆಸ್-ಜೆಡಿಎಸ್ ಪಾರಾಗಿದೆ ಆದರೂ ಮುಂದುಯೂ ಆಪರೇಷನ್ ಕಮಲದ ಭೀತಿ ತಪ್ಪಿದ್ದಲ್ಲ ಹಾಗಾಗಿ ಕಾಂಗ್ರೆಸ್ ಶಾಸಕರಿಗೆ ತೀಕ್ಷ ಎಚ್ಚರಿಕೆ ನೀಡುವ ಕಾರಣ ಈ ಶಾಸಕಾಂಗ ಸಭೆ ಕರೆಯಾಗಿದೆ.
ಅತೃಪ್ತ ಶಾಸಕರನ್ನು ಮನವೊಲಿಸಲು ಕೆಲವು ಜವಾಬ್ದಾರಿಗಳನ್ನು ಕೊಡುವುದಾಗಿ ಕೆಪಿಸಿಸಿ ಹೇಳಿದ್ದು, ಸಂಪುಟದಲ್ಲಿ ಮತ್ತೆ ಬದಲಾವಣೆ ಆಗುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ಅವರಿಗೆ ಮತ್ತೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೆ.ಸಿ.ವೇಣುಗೋಪಾಲ್ ಅವರು ಸಹ ಶಾಸಕಾಂಗ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಮೈತ್ರಿ ಸರ್ಕಾರವನ್ನು ಯಾವುದೇ ಹಂತದಲ್ಲೂ ಬೀಳಲು ಬಿಡಬಾರದೆಂದು ಹೈಕಮಾಂಡ್ ಹೇಳಿರುವ ಕಾರಣ, ಶಾಸಕಾಂಗ ಸಭೆಯಲ್ಲಿ ಅವರು ಕೈ ಶಾಸಕರಿಗೆ ಎಚ್ಚರಿಕೆ ನೀಡಲಿದ್ದಾರೆ ಎನ್ನಲಾಗಿದೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications