ಲೋಕಸಭಾ ಚುನಾವಣೆ 2024: ಆಪರೇಷನ್ ಹಸ್ತದ ಮೂಲಕ ಈ ಇಬ್ಬರು ಮಾಜಿ ಬಿಜೆಪಿ ಎಂಪಿಗಳನ್ನು ಸೆಳೆಯಲು ಕಾಂಗ್ರೆಸ್ ಯತ್ನ
ಲೋಕಸಭಾ ಚುನಾವಣೆ ಹತ್ತಿರವಾದಂತೆ ಕಾಂಗ್ರೆಸ್ ಪಾಳಯದಲ್ಲಿ ಚುನಾವಣಾ ಸಿದ್ದತೆ ಜೋರಾಗಿ ಸಾಗುತ್ತಿದೆ. ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಿರ್ಧಾರವಾಗಿದ್ದರೂ, ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಠಿಣವಾಗಿದೆ. ರಾಜ್ಯದಲ್ಲಿ ಹೆಚ್ಚು ಸೀಟು ಗೆಲ್ಲುವ ಯೋಜನೆ ಹೊಂದಿರುವ ಕಾಂಗ್ರೆಸ್ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿದೆ.
ಮಾಜಿ ಸಂಸದರಾದ ಮುದ್ದಹನುಮೇಗೌಡರನ್ನು ತುಮಕೂರು ಲೋಕಸಭಾ ಕ್ಷೇತ್ರದಿಂದ ಮತ್ತು ರಮೇಶ್ ಕತ್ತಿ ಅವರನ್ನು ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. 2019 ರಲ್ಲಿ ತುಮಕೂರಿನಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ನಂತರ ಹನುಮೇಗೌಡ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು, ಮುದ್ದಹನುಮೇಗೌಡರು ಹಾಲಿ ಸಂಸದರಾಗಿದ್ದರೂ ತುಮಕೂರು ಕ್ಷೇತ್ರವನ್ನು ಜೆಡಿಎಸ್ಗೆ ಸ್ಪರ್ಧಿಸಲು ನೀಡಲಾಗಿತ್ತು. ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡರು ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮುದ್ದಹನುಮೇಗೌಡರನ್ನು ಮತ್ತೆ ಪಕ್ಷಕ್ಕೆ ತರಲು ಸಿದ್ಧವಾಗಿದೆ.
ಶೀಘ್ರದಲ್ಲೇ ಕಾಂಗ್ರೆಸ್ಗೆ ಸೇರ್ಪಡೆ
ಮುದ್ದಹನುಮೇಗೌಡರ ಜೊತೆ ಈಗಾಗಲೇ ಎರಡು ಸುತ್ತಿನ ಮಾತುಕತೆ ನಡೆಸಲಾಗಿದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು. ಮುದ್ದಹನುಮೇಗೌಡರು ಕೂಡ ಪಕ್ಷಕ್ಕೆ ವಾಪಸಾಗಲು ಉತ್ಸುಕರಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಆರಂಭದಲ್ಲಿ ಬಿಜೆಪಿ ಮಾಜಿ ಸಚಿವ ವಿ ಸೋಮಣ್ಣ ಅವರನ್ನು ಕಾಂಗ್ರೆಸ್ಗೆ ಕರೆತಂದು ತುಮಕೂರಿನಿಂದ ಟಿಕೆಟ್ ಕೊಡಲು ಯೋಜಿಸಿತ್ತು. ಆದರೆ ಸೋಮಣ್ಣ ಬಿಜೆಪಿಯಲ್ಲೇ ಉಳಿಯಲು ನಿರ್ಧರಿಸಿದ್ದು, ಕಾಂಗ್ರೆಸ್ ಪರ್ಯಾಯ ಆಯ್ಕೆಯತ್ತ ಗಮನ ಹರಿಸಿತು.
ರಮೇಶ್ ಕತ್ತಿ ಸೆಳೆಯಲು ಕಾಂಗ್ರೆಸ್ ಯತ್ನ
2009ರಲ್ಲಿ ಚಿಕ್ಕೋಡಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ರಮೇಶ ಕತ್ತಿ ಅವರನ್ನು ಸೆಳೆಯಲು ಕಾಂಗ್ರೆಸ್ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. 2013ರಲ್ಲಿ ಕಾಂಗ್ರೆಸ್ನ ಪ್ರಕಾಶ ಹುಕ್ಕೇರಿ ವಿರುದ್ಧ ಸೋತರೂ, 2019ರಲ್ಲಿ ಟಿಕೆಟ್ ಕೊಡದೆ ಬಿಜೆಪಿ ಕಡೆಗಣಿಸಿತ್ತು.
ಕತ್ತಿ ಅವರಿಗೆ 2019 ರಲ್ಲಿ ಲೋಕಸಭೆ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಮತ್ತು ಎಂಎಲ್ಸಿ ಸ್ಥಾನ ನೀಡುವ ಬಗ್ಗೆ ಭರವಸೆಗಳನ್ನು ಈಡೇರಿಸಲು ವಿಫಲವಾದ ಕಾರಣಕ್ಕಾಗಿ ಬಿಜೆಪಿ ನಾಯಕತ್ವದಿಂದ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ಈ ಅತೃಪ್ತಿಯನ್ನು ತನ್ನ ಲಾಭಕ್ಕೆ ಬಳಸಿಕೊಳ್ಳುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ. ಆದರೆ, ಪಕ್ಷ ಬದಲಾಯಿಸುವ ಯಾವುದೇ ಉದ್ದೇಶವನ್ನು ಕತ್ತಿ ನಿರಾಕರಿಸಿದ್ದಾರೆ. ನಾನು ಬೆಳಗಾವಿ ಅಥವಾ ಚಿಕ್ಕೋಡಿ ಕ್ಷೇತ್ರದಿಂದ ಟಿಕೆಟ್ ಕೇಳಿರುವುದು ನಿಜ. ಆದರೆ ಟಿಕೆಟ್ ಸಿಕ್ಕರೂ ಸಿಗದಿದ್ದರೂ ಬಿಜೆಪಿಯಲ್ಲೇ ಇರುತ್ತೇನೆ ಎಂದಿದ್ದಾರೆ.
ಬೇರೆ ಯಾವುದೇ ಪಕ್ಷಕ್ಕೆ ಸೇರುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು, ಯಾವುದೇ ಕಾಂಗ್ರೆಸ್ ಕಾರ್ಯಕರ್ತರು ತಮ್ಮನ್ನು ಸಂಪರ್ಕಿಸಿಲ್ಲ ಎಂದು ಹೇಳಿದರು. ರಾಜ್ಯದ 28 ಸ್ಥಾನಗಳಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ.
ಈ ಪ್ರಯತ್ನಗಳ ಮೂಲಕ, ಪ್ರಮುಖ ಕ್ಷೇತ್ರಗಳಲ್ಲಿ ತನ್ನ ಸ್ಥಾನವನ್ನು ಬಲಪಡಿಸುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಪಕ್ಷಕ್ಕೆ ಸವಾಲು ಹೆಚ್ಚಾಗಿದೆ. ಸುಮಲತಾ ಕಾಂಗ್ರೆಸ್ ಸೇರಬಹುದು ಎನ್ನುವ ಗುಸು ಗುಸು ಕೂಡ ಕೇಳಿಬಂದಿದೆ. 2019 ರಲ್ಲಿ ಬಿಜೆಪಿ ಬೆಂಬಲದೊಂದಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದ ನಂತರ, ಸುಮಲತಾ ಬಿಜೆಪಿಗೆ ಬೆಂಬಲ ನೀಡಿದ್ದರು, ಆದರೆ ಮಂಡ್ಯ ಕ್ಷೇತ್ರ ಜೆಡಿಎಸ್ಗೆ ಹಂಚಿಕೆಯಾಗುವ ಸಾಧ್ಯತೆ ಇದ್ದು ಸುಮಲತಾ ಕಾಂಗ್ರೆಸ್ನಿಂದ ಸ್ಪರ್ಧಿಸಿದರೂ ಅಚ್ಚರಿಯಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications