ಎನ್.ಎ.ಹ್ಯಾರೀಸ್ 'ಕೈ' ತಪ್ಪಲಿದೆಯೇ ಶಾಂತಿನಗರದ ಟಿಕೆಟ್?
ಬೆಂಗಳೂರು, ಫೆಬ್ರವರಿ 23 : ಮೊಹಮ್ಮದ್ ನಲಪಾಡ್ ಯು.ಬಿ.ಸಿಟಿಯಲ್ಲಿ ರದ್ದಾಂತ ಮಾಡಿ ಜೈಲು ಸೇರಿದ್ದಾರೆ. ಇತ್ತ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಅವರಿಗೆ ಟಿಕೆಟ್ ಕೈ ತಪ್ಪುವ ಭೀತಿ ಎದುರಾಗಿದೆ. ಈ ಬಗ್ಗೆ ಚರ್ಚೆಗಳು ಆರಂಭವಾಗಿವೆ.
ಮೊಹಮ್ಮದ್ ನಲಪಾಡ್ ಪ್ರಕರಣವನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ತೆಗೆದುಕೊಂಡಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದೆ, ಆದ್ದರಿಂದ, ಪಕ್ಷ ತನ್ನ ಇಮೇಜ್ ಉಳಿಸಿಕೊಳ್ಳಲು ಪ್ರಯತ್ನ ಮಾಡಲಿದೆ.
ಎನ್.ಎ.ಹ್ಯಾರೀಸ್ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪಬಹುದು ಎಂಬ ಸುದ್ದಿಗಳು ಹರಿದಾಡುತ್ತಿವೆ. ಬೆಂಗಳೂರು ನಗರದ ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಟಿಕೆಟ್ ನೀಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ ಎಂಬ ಸುದ್ದಿಗಳು ಹಬ್ಬಿದೆ.

ಎನ್.ಎ.ಹ್ಯಾರೀಸ್ ಶಾಂತಿನಗರ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಯಾಗಿದ್ದಾರೆ. 2008ರ ಚುನಾವಣೆಯಲ್ಲಿ 42,423 ಮತ, 2013ರ ಚುನಾವಣೆಯಲ್ಲಿ 54,342 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಈ ಬಾರಿ ಗೆದ್ದು ಹ್ಯಾಟ್ರಿಕ್ ಬಾರಿಸುವ ಉತ್ಸಾಹದಲ್ಲಿದ್ದರು.
ಆದರೆ, ಪುತ್ರ ಮೊಹಮ್ಮದ್ ನಲಪಾಡ್ ಮಾಡಿದ ರಂಪಾಟದಿಂದಾಗಿ ಹ್ಯಾರೀಸ್ಗೆ ಟಿಕೆಟ್ ಕೈ ತಪ್ಪುವ ಭೀತಿ ಎದುರಾಗಿದೆ. ಹ್ಯಾರೀಸ್ ಅವರ ಬದಲು ರಿಜ್ವಾನ್ ಅರ್ಷದ್ ಅವರಿಗೆ ಟಿಕೆಟ್ ನೀಡಿ ಎಂದು ಒತ್ತಾಯಿಸಲಾಗುತ್ತಿದೆ.
ಕಾಂಗ್ರೆಸ್ ಪಕ್ಷದ ಯಾವ ನಾಯಕರು ಸಹ ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿಲ್ಲ. ಕಾಂಗ್ರೆಸ್ ಸಹ ಟಿಕೆಟ್ ಹಂಚಿಕೆಯ ಬಗ್ಗೆ ಇನ್ನೂ ಗಮನಹರಿಸಿಲ್ಲ. ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಟಿಕೆಟ್ ಹಂಚಿಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಎನ್.ಎ.ಹ್ಯಾರೀಸ್ ಅವರಿಗೆ ಟಿಕೆಟ್ ಸಿಗಲಿದೆಯೇ? ಕಾದು ನೋಡಬೇಕು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications