ನಾಳೆ ಕಾಂಗ್ರೆಸ್ ಸಚಿವರ ಮಹತ್ವದ ಸಭೆ, ವೇಣುಗೋಪಾಲ್ ಭಾಗಿ
ಬೆಂಗಳೂರು, ಆಗಸ್ಟ್ 30: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಇಂದು ಮತ್ತೆ ಬೆಂಗಳೂರಿಗೆ ಬಂದಿದ್ದಾರೆ. ಚುನಾವಣಾ ತಯಾರಿ ಸಂಬಂಧ ನಾಳೆ ರೆಸಾರ್ಟ್ ವೊಂದರಲ್ಲಿ ಕಾಂಗ್ರೆಸ್ ಸಚಿವರ ಮಹತ್ವದ ಸಭೆ ನಿಗದಿಯಾಗಿದ್ದು, ಈ ಸಭೆಯಲ್ಲಿ ಪಾಲ್ಗೊಳ್ಳಲು ಅವರು ರಾಜ್ಯಕ್ಕೆ ಆಗಮಿಸಿದ್ದಾರೆ.
ಚುನಾವಣೆಗೆ ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಈ ಸಭೆ ನಿಗದಿಯಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಎಸ್.ಆರ್ ಪಾಟೀಲ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಎಲ್ಲಾ ಸಚಿವರು ಪಾಲ್ಗೊಳ್ಳಲಿದ್ದಾರೆ. ಸಚಿವರು ಕಟ್ಟು ನಿಟ್ಟಾಗಿ ಸಭೆಯಲ್ಲಿ ಪಾಲ್ಗೊಳ್ಳಲೇಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ.

ಬೆಂಗಳೂರು ನಗರದ ಹೊರವಲಯದಲ್ಲಿರುವ ಕ್ಲಾಕ್ ಎಕ್ಸಾರ್ಟಿಕಾ ರೆಸಾರ್ಟ್ ನಲ್ಲಿ ಈ ಸಭೆ ಆಯೋಜನೆಯಾಗಿದೆ. ತಡ ರಾತ್ರಿವರೆಗೂ ಸಭೆ ನಡೆಯಲಿದ್ದು, ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೋಜನಕೂಟ ಹಮ್ಮಿಕೊಂಡಿದ್ದಾರೆ.
2018ರ ವಿಧಾನಸಭೆ ಚುನಾವಣೆಗೆ ರಣತಂತ್ರ ರೂಪಿಸುವುದು, ನೀಲನಕ್ಷೆ ಸಿದ್ಧಪಡಿಸುವುದು, ಸಂಪನ್ಮೂಲ ಹೊಂದಿಸುವುದು, ಸಚಿವರುಗಳಿಗೆ ನಿರ್ಧಿಷ್ಟ ಜವಾಬ್ದಾರಿ ಹಂಚಿಕೆ ಮಾಡುವುದು, ಉಸ್ತುವಾರಿ ಮತ್ತು ತವರು ಜಿಲ್ಲೆಗಳಲ್ಲಿ ಚುನಾವಣಾ ತಯಾರಿ ಸೇರಿದಂತೆ ಹಲವು ಪ್ರಮುಖ ವಿಚಾರಗಳು ಸಭೆಯಲ್ಲಿ ಚರ್ಚೆಯಾಗಲಿವೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications