DK Shivakumar: ಶಾಸಕನ ಪುತ್ರನಿಗೆ ತನ್ನದೇ ಹೆಸರು ನಾಮಕರಣ ಮಾಡಿದ ಡಿ.ಕೆ.ಶಿವಕುಮಾರ್
ಕಾಂಗ್ರೆಸ್ ಪಾಳಯದಲ್ಲಿ ಕನಕಪುರದ ಬಂಡೆ ಎನಿಸಿಕೊಂಡಿರುವ ಡಿ.ಕೆ.ಶಿವಕುಮಾರ್ ಅವರು ತಮ್ಮದೇ ಛಾಪು ಮೂಡಿಸಿರುವ ರಾಜಕೀಯ ನಾಯಕ. ಡಿಕೆಶಿ ಅಂದ್ರೆ ಒಂದು ರೀತಿಯ ಕ್ರೇಜ್ ಕೂಡ ಇದೆ. ಅವರು ಹೋದ ಕಡೆ ಅಭಿಮಾನಿಗಳು, ಬೆಂಬಲಿಗರು ಜಮಾಯಿಸುವುದು ಗೊತ್ತೇ ಇದೆ. ಇದೀಗ ಡಿ.ಕೆ.ಶಿವಕುಮಾರ್ ಅವರ ಕಟ್ಟಾ ಬೆಂಬಲಗರಾದ ಶಾಸಕರೊಬ್ಬರು ತಮ್ಮ ಪುಟ್ಟ ಕಂದಮ್ಮನಿಗೆ ಡಿ.ಕೆ.ಶಿವಕುಮಾರ್ ಅವರ ಹೆಸರನ್ನೇ ನಾಮಕರಣ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ತಮ್ಮ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಅವರೇ ಮಗುವಿಗೆ ಹೆಸರಿಟ್ಟು ಭಾವುಕರಾಗಿದ್ದಾರೆ.
ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್ ಅವರು ತಮ್ಮ ಮಗುವಿಗೆ "ಶಿವಕುಮಾರ್" ಎಂದು ನಾಮಕರಣ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ. ನನ್ನ ಹೆಸರು ಯಾಕಪ್ಪ ಇಡುತ್ತೀಯ ಎಂದು ಡಿಕೆ ಶಿವಕುಮಾರ್ ನಗುತ್ತಾ ಕೇಳಿದ್ದಾರೆ. ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ! ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ "ಶಿವಕುಮಾರ್" ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇದು ಹೃದಯಸ್ಪರ್ಶಿ ಕ್ಷಣ
ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ. ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿ. ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ, ಈ "ಶಿವಕುಮಾರ" ಕರುನಾಡನ್ನು ಬೆಳಗುವ ಕುವರನಾಗಲಿ ಎಂದು ಮನತುಂಬಿ ಹಾರೈಸುವೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಪುಟ್ಟ ಮಗುವಿಗೆ "ಶಿವಕುಮಾರ್" ಎಂದು ಹೆಸರಿಸುವುದು ಅತ್ಯಂತ ಹೃದಯಸ್ಪರ್ಶಿ ಕ್ಷಣ. ಅವನು ಧೈರ್ಯ, ಮೌಲ್ಯಗಳು ಮತ್ತು ಬದಲಾವಣೆ ತರುವ ಶಕ್ತಿಯೊಂದಿಗೆ ಬೆಳೆಯಲಿ ಎಂದು ಆಶೀರ್ವದಿಸಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಅವರು ಹಂಚಿಕೊಂಡಿದ್ದಾರೆ.
ಗಂಡು ಮಗು ಜನಿಸಿದ ಹಿನ್ನೆಲೆ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್ ತನ್ನ ಪುತ್ರನಿಗೆ ಡಿ.ಕೆ.ಶಿವಕುಮಾರ್ ಅವರ ಹೆಸರನ್ನೇ ಇಡಬೇಕು ಎಂದು ಮಹಾದಾಸೆ ಹೊಂದಿದ್ದರು. ಹೀಗಾಗಿ ಅವರು ತಮ್ಮ ಕುಟುಂಬ ಸಮೇತರಾಗಿ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿ ತಮ್ಮ ಬಯಕೆ ಮುಂದಿಟ್ಟರು. ಇದಕ್ಕೆ ಒಪ್ಪಿದ ಡಿ.ಕೆ.ಶಿವಕುಮಾರ್ ಅವರು ತಮ್ಮ ನಿವಾಸದಲ್ಲೇ ಮಗುವಿಗೆ ತಮ್ಮ ಹೆಸರಿಟ್ಟು ಸಂತಸ ಪಟ್ಟಿದ್ದಾರೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ತಾಯಿ ಮಂಗನ ಮೌನ ರೋದನೆ: ನಮ್ಮ ಮೆಟ್ರೋ ನಿಲ್ದಾಣದಲ್ಲಿ ಕರುಣಾಜನಕ ದೃಶ್ಯ..Video Viral -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ











Click it and Unblock the Notifications