ಅನುಮಾನ ಮೂಡಿಸಿದೆ 'ಕೈ' ಶಾಸಕ ಗುತ್ತೇದಾರ್ ಹೊಸ ನಡೆ
ಕಲಬುರಗಿ, ಫೆಬ್ರವರಿ 28: ಎರಡೆರಡು ಬಾರಿ ಕಾಂಗ್ರೆಸ್ಗೆ ಕೈ ಕೊಡಲು ಮುಂದಾಗಿ ನಂತರ ಹಿರಿಯರ ಸಂಧಾನದ ಫಲವಾಗಿ ಪಕ್ಷದಲ್ಲೇ ಉಳಿದುಕೊಂಡಿರುವ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರ ಹೊಸ ನಡೆ ಕಾಂಗ್ರೆಸ್ಗೆ ಕೈ ಕೊಡುವ ಮುನ್ಸೂಚನೆಯಾ ಎಂಬ ಅನುಮಾನ ಮೂಡಿಸಿದೆ.
ಮಾಲೀಕಯ್ಯ ಗುತ್ತೇದಾರ್ ಅವರು ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಅಪ್ಜಲ್ಪುರಕ್ಕೆ ಸ್ವಾಗತ ಕೊರಿ ಹಾಕಿರುವ ದೊಡ್ಡ ಫ್ಲೆಕ್ಸ್ಗಳು ಈ ರೀತಿಯ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ಈ ಹಿಂದೆ ಬಹಿರಂಗವಾಗಿಯೇ ಕಾಂಗ್ರೆಸ್ ಬಿಡುವ ಮಾತನ್ನಾಡಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ಈಗ ಜೆಡಿಎಸ್ ವರಿಷ್ಠರ ಪ್ಲೆಕ್ಸ್ ಹಾಕಿಸಿ ಅವರ ಜೊತೆ ಗುರುತಿಸಿಕೊಳ್ಳುವ ತರಾತುರಿ ತೋರಿರುವುದು ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ.

ಪಟ್ಟಣದ ಹಲವೆಡೆ ದೇವೇಗೌಡರು ಹಾಗೂ ಗುತ್ತೇದಾರ್ ಅವರ ಭಾವಚಿತ್ರಗಳುಳ್ಳ ಫ್ಲೆಕ್ಸ್ಗಳನ್ನು ಹಾಕಲಾಗಿದ್ದು ಫ್ಲೆಕ್ಸ್ನಲ್ಲಿ '22 ವರ್ಷಗಳ ನಂತರ ನಗರಕ್ಕೆ ಆಗಮಿಸುತ್ತಿರುವ ಮಣ್ಣಿನ ಮಗ, ರಾಜ್ಯದ ಏಕೈಕ ಪ್ರಧಾನಿ, ಮುತ್ಸದಿ ರಾಜಕಾರಣಿ, ರೈತರ ಕಣ್ಮಣಿ, ಏತ ನೀರಾವರಿಗೆ ಅನುದಾನ ನೀಡಿದ್ದ ದೇವೇಗೌಡರಿಗೆ ಮಾಲೀಕಯ್ಯ ಗುತ್ತೇದಾರ್ ಮತ್ತು ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಂದ ಸ್ವಾಗತ' ಎಂದು ಬರೆಯಲಾಗಿದೆ.
ಕಳೆದ ಬಾರಿ ಅಪ್ಜಲ್ಪುರಕ್ಕೆ ಸಿದ್ದರಾಮಯ್ಯ ಅವರು ಬಂದಾಗ 'ಕಾಂಗ್ರೆಸ್ ಬಿಡುವ ಚಿಂತನೆಯಲ್ಲಿದ್ದೆ ಆದರೆ ಸಿದ್ದರಾಮಯ್ಯ ಅವರು ತಡೆದಿದ್ದಾರೆ' ಎಂದಿದ್ದರು. ಈಗಿನ ಬೆಳವಣಿಗೆ ನೋಡಿದರೆ ಸಿದ್ದರಾಮಯ್ಯ ಅವರಿಗಿಂತಲೂ ಗುತ್ತೇದಾರ್ ಅವರಿಗೆ ದೇವೇಗೌಡ ಅವರ ಸಖ್ಯದ ಬಗ್ಗೆಯೇ ಮನಸ್ಸಿದ್ದಂತಿದೆ.

ಆದರೆ ಊಹಾಪೋಹಗಳನ್ನು ಅಲ್ಲಗಳೆದಿರುವ ಮಾಲೀಕಯ್ಯ ಗುತ್ತೇದಾರ್ ಅವರು 'ದೇವೇಗೌಡ ಅವರು ಹಿರಿಯರು. ಅವರು ಅಧಿಕಾರದಲ್ಲಿ ಇದ್ದಾಗ ಭೀಮಾ ಏತನೀರಾವರಿ ಯೋಜನೆಗೆ ಅನುದಾನ ನೀಡಿದ್ದರು. ಅವರಿಗೆ ಗೌರವ ನೀಡಲು ಫ್ಲೆಕ್ಸ್ ಹಾಕಿಸಿದ್ದೇನೆ. ಇದರಲ್ಲಿ ರಾಜಕೀಯ ಇಲ್ಲ' ಎಂದಿದ್ದಾರೆ.
ಆದರೆ ಕ್ಷೇತ್ರದಲ್ಲಿ ಕೇಳುತ್ತಿರುವ ಗುಸು-ಗುಸು ಪ್ರಕಾರ ಗುತ್ತೇದಾರ್ ಅವರನ್ನು ಜೆಡಿಎಸ್ ಸದಸ್ಯರು ಸಂಧಿಸಿದ್ದು, ಮಾತುಕತೆ ಪ್ರಗತಿಯಲ್ಲಿದೆ ಎನ್ನಲಾಗಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications