ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ
ಬೆಂಗಳೂರು, ಫೆಬ್ರವರಿ 25; ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ ಹೊಂದಿದರು. 2023ರ ವಿಧಾನಸಭೆ ಚುನಾವಣೆಯಲ್ಲಿ ಅವರು 1,13,559 ಮತಗಳನ್ನು ಪಡೆದು ಜಯಗಳಿಸಿದ್ದರು.
67 ವರ್ಷದ ರಾಜಾ ವೆಂಕಟಪ್ಪ ನಾಯಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಭಾನುವಾರ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.

3 ಬಾರಿ ಶಾಸಕಾರಿಗಿದ್ದ ರಾಜಾ ವೆಂಕಟಪ್ಪ ನಾಯಕ 2023ರ ಚುನಾವಣೆಯಲ್ಲಿಯೂ ಗೆಲ್ಲುವ ಮೂಲಕ 4ನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಗೆದ್ದ ಬಳಿಕ ರಾಜಾ ವೆಂಕಟಪ್ಪ ನಾಯಕ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು.
ಆದರೆ ಸಚಿವ ಸ್ಥಾನ ಕೈ ತಪ್ಪಿತ್ತು. ಕೆಲವು ದಿನಗಳ ಹಿಂದೆ ಅವರನ್ನು ರಾಜ್ಯ ಉಗ್ರಾಣ ನಿಮಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಅಧ್ಯಕ್ಷರಾಗಿ ಅಧಿಕಾರವನ್ನು ಸಹ ಸ್ವೀಕಾರ ಮಾಡಿದ್ದರು.
2023ರ ಚುನಾವಣೆಯಲ್ಲಿ ಸುರಪುರ ಕ್ಷೇತ್ರದಲ್ಲಿ 1,13,559 ಮತಗಳನ್ನು ಪಡೆದು ರಾಜಾ ವೆಂಕಟಪ್ಪ ನಾಯಕ ಬಿಜೆಪಿಯ ರಾಜೂ ಗೌಡ (88,336 ಮತ) ಸೋಲಿಸಿದ್ದರು.
ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ನಾಯಕ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು 10 ದಿನದ ಹಿಂದೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಮೊದಲು ಲಿವರ್ ಸಮಸ್ಯೆಯಿಂದ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಆಸ್ಪತ್ರೆಗೆ ದಾಖಲಾದ ಬಳಿಕ ಹೃದಯದ ತೊಂದರೆ ಸಹ ಕಾಣಿಸಿಕೊಂಡಿತ್ತು. 4 ದಿನದ ಹಿಂದೆ ವಾರ್ಡ್ನಿಂದ ಅವರನ್ನು ಐಸಿಯುಗೆ ದಾಖಲು ಮಾಡಲಾಗಿತ್ತು.
ಮಂಗಳವಾರ ನಡೆಯುವ ರಾಜ್ಯಸಭಾ ಚುನಾವಣೆಗೆ ಮತದಾನ ಮಾಡಲು ರಾಜಾ ವೆಂಕಟಪ್ಪ ನಾಯಕ ಅವರ ಪ್ರೊಸಿಡಿಂಗ್ ಮಾಡಲಾಗಿತ್ತು. ಅಂಬ್ಯುಲೆನ್ಸ್ನಲ್ಲಿ ಕರೆತಂದು ಪುತ್ರನ ಜೊತೆ ಬಂದು ಮತದಾನ ಮಾಡಲು ಅನುಮತಿ ಪಡೆಯಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ.
— Siddaramaiah (@siddaramaiah) February 25, 2024
ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ… pic.twitter.com/Fls5GfaRGs
ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ರಾಜಾ ವೆಂಕಟಪ್ಪ ನಾಯಕ ಆಪ್ತರು. ಸುರಪುರ ಎಸ್ಟಿ ಮೀಸಲು ಕ್ಷೇತ್ರದಿಂದ ಅವರು 1994, 1999, 2013 ಮತ್ತು 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ರಾಜಾ ವೆಂಕಟಪ್ಪ ನಾಯಕ ಅವರು ಒಟ್ಟು 7 ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. 2004, 2008 ಮತ್ತು 2018ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. 2018ರ ಚುನಾವಣೆಯಲ್ಲಿ ಗೆಲುವು ಕಂಡು ಹಾಲಿ ಶಾಸಕರಾಗಿದ್ದ ಬಿಜೆಪಿಯ ರಾಜೂ ಗೌಡರನ್ನು 2023ರ ಚುನಾವಣೆಯಲ್ಲಿ ಸೋಲಿಸಿ ಶಾಸಕರಾಗಿದ್ದರು.
ಮಲ್ಲಿಕಾರ್ಜುನ ಖರ್ಗೆ ಸಂತಾಪ: ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ.
ಸಂತಾಪ ಸೂಚಕ ನಿರ್ಣಯ ಎಂದು ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಶ್ರೀಯುತ ರಾಜ ವೆಂಕಟಪ್ಪ ನಾಯಕ್ ರವರು ಸುರಪುರದ ಜನಪ್ರಿಯ ಶಾಸಕರಾಗಿ ಚುನಾಯಿತರಾಗಿದ್ದವರು. ಜೊತೆಗೆ ಕರ್ನಾಟಕ ರಾಜ್ಯದ ಉಗ್ರಾಣನಿಗಮದ ಅಧ್ಯಕ್ಷರಾಗಿ ಇತ್ತೀಚೆಗೆ ನೇಮಕವಾಗಿದ್ದವರು' ಎಂದು ಹೇಳಿದ್ದಾರೆ.
'ಅವರು ನನಗೆ ಚಿರಪರಿಚಿತರು. ಸದಾ ಹಸನ್ಮುಖಿಯಾಗಿ ಎಲ್ಲರ ಜೊತೆ ಬೆರೆತು ಕೆಲಸ ಮಾಡುತ್ತಿದ್ದವರು. ಇವರು ಇಂದು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅತೀವ ನೋವಾಗಿದೆ. ಶ್ರೀಯುತರ ನಿಧನದಿಂದ ಕಲಬುರಗಿ ವಿಭಾಗದ ಪಕ್ಷದ ಎಲ್ಲ ಕಾರ್ಯಕರ್ತರಿಗೆ ತುಂಬಲಾರದ ನಷ್ಟ ಉಂಟಾಗಿದೆ. ಶ್ರೀಯುತರ ನಿಧನದಿಂದುಂಟಾದ ದು:ಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ. ಮೃತರ ಆತ್ಮಕ್ಕೆ ಚಿರ ಶಾಂತಿಯನ್ನು ನೀಡಲೆಂದು ವಿನಂತಿಸುತ್ತೇನೆ" ಎಂದು ಸಂತಾಪ ಸೂಚಿಸಿದ್ದಾರೆ.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications