ಶಾಸಕ ಉಮೇಶ್ ಜಾಧವ್ ರಾಜೀನಾಮೆ ಸಾಧ್ಯತೆ, ಸರ್ಕಾರಕ್ಕೆ ಸಂಕಷ್ಟ
Recommended Video

ಬೆಂಗಳೂರು, ಫೆಬ್ರವರಿ 12: ಅತೃಪ್ತರ ಬಣದಲ್ಲಿ ಗುರುತಿಸಿಕೊಂಡಿರುವ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಅವರು ಕೆಲವೇ ದಿನದಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ.
ಈ ಬಗ್ಗೆ ಉಮೇಶ್ ಜಾಧವ್ ಅವರ ಸಹೋದರ ರಾಮಚಂದ್ರ ಜಾಧವ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಉಮೇಶ್ ಅವರು ಕಾನೂನು ತಜ್ಞರ ಸಲಹೆ ಪಡೆಯುತ್ತಿದ್ದು, ಎರಡು-ಮೂರು ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಅವರು ಕಲಬುರ್ಗಿ ಲೋಕಸಭಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಅವರು ಸ್ಪರ್ಧಿಸಬಹುದು, ಒಂದೊಮ್ಮೆ ಅವರು ಸ್ಪರ್ಧಿಸಿದರೆ ಗೆಲುವು ಖಚಿತ ಎಂದು ರಾಮಚಂದ್ರ ಜಾಧವ್ ಅವರು ಹೇಳಿದ್ದಾರೆ.
ಅವರು ಮುಂಬೈಗೆ ಹೋಗಿಲ್ಲ ಬೆಂಗಳೂರಿನಲ್ಲಿಯೇ ಇದ್ದಾರೆ, ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ, ಎರಡು ಮೂರು ದಿನಗಳಲ್ಲಿ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಕ್ಷೇತ್ರದಲ್ಲಿ ಅಭಿವೃದ್ಧಿ ಸ್ಥಗಿತ
ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿರುವುದಕ್ಕೆ ಅವರಿಗೆ ಬೇಸರವಾಗಿದೆ. ಸರ್ಕಾರ ಬೀಳಿಸುವುದಕ್ಕಾಗಿ ಅವರು ರಾಜೀನಾಮೆ ನೀಡುತ್ತಿಲ್ಲ, ಅದಕ್ಕೆ ಅವರದ್ದೇ ಆದ ಬೇರೆಯ ಕಾರಣಗಳಿವೆ ಎಂದು ರಾಮಚಂದ್ರ ಜಾಧವ್ ಹೇಳಿದ್ದಾರೆ.

ಉಮೇಶ್ ಜಾಧವ್ ವಿರುದ್ಧ ಕಾಂಗ್ರೆಸ್ ದೂರು
ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿರುವ ಉಮೇಶ್ ಜಾಧವ್ ಅವರು, ಕೆಪಿಸಿಸಿ ನೀಡಿದ್ದ ನೊಟೀಸ್ಗೂ ಉತ್ತರಿಸಿರಲಿಲ್ಲ, ವಿಪ್ ಅನ್ನೂ ಉಲ್ಲಂಘಿಸಿದ್ದಾರೆ. ಹಾಗಾಗಿ ಉಮೇಶ್ ಜಾಧವ್ ಅವರನ್ನೂ ಸೇರಿ ನಾಲ್ಕು ಕಾಂಗ್ರೆಸ್ ಶಾಸಕರ ವಿರುದ್ಧ ಸ್ಪೀಕರ್ ವಿರುದ್ಧ ಬಳಿ ದೂರು ನೀಡಿದ್ದಾರೆ.

ಬಿಜೆಪಿ ಜೊತೆ ಕೈ ಸೇರಿಸಿದ್ದಾರೆ ಉಮೇಶ್?
ಉಮೇಶ್ ಜಾಧವ್ ಅವರು ಸಂಪುಟ ವಿಸ್ತರಣೆ ಸಮಯದಿಂದಲೂ ಕಾಂಗ್ರೆಸ್ ವಿರುದ್ಧ ಕೆಂಪು ಬಾವುಟ ಹಾರಿಸಿದ್ದಾರೆ. ರಮೇಶ್ ಜಾರಕಿಹೊಳಿ ಬಣ ಸೇರಿ ಬಿಜೆಪಿಯೊಂದಿಗೆ ಕೈಸೇರಿಸಿ ಮುಂಬೈಗೆ ಸಹ ತೆರಳಿದ್ದರು ಎನ್ನಲಾಗಿತ್ತು.

ಅತೃಪ್ತ ಶಾಸಕರು ಯಾರ್ಯಾರು?
ಕಾಂಗ್ರೆಸ್ನ ರಮೇಶ್ ಜಾರಕಿಹೊಳಿ, ಉಮೇಶ್ ಜಾಧವ್, ನಾಗೇಂದ್ರ, ಮಹೇಶ್ ಮುಕಟಳ್ಳಿ ಅವರುಗಳು ಕಾಂಗ್ರೆಸ್ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ. ಅವರೊಂದಿಗೆ ಕಾಂಗ್ರೆಸ್ನ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಮತ್ತು ಜೆಡಿಎಸ್ನ ಒಬ್ಬ ಶಾಸಕ ಸಹ ಅವರ ಜೊತೆ ಇದ್ದಾರೆ ಎನ್ನಲಾಗಿದೆ.












Click it and Unblock the Notifications