ಡಿಕೆ ಶಿವಕುಮಾರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದ ನಮ್ಮ ಶಾಸಕರ ಬಗ್ಗೆ ಒಂದಿಷ್ಟು
Recommended Video
ಬೆಂಗಳೂರು, ಸೆ 5: ರಾಜಕೀಯವಾಗಿ ಮತ್ತು ಪಕ್ಷದಲ್ಲಿ ತಮ್ಮ ಪ್ರಭಾವನ್ನು ಡಿ ಕೆ ಶಿವಕುಮಾರ್ ಬೆಳೆಸಿಕೊಂಡ ಬಂದ ರೀತಿ, ಅವರ ರಾಜಕೀಯ ವಿರೋಧಿಗಳೂ ಆಶ್ಚರ್ಯ ಪಡುವಂತದ್ದು. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ನೀಡುವ ವಿಚಾರದಲ್ಲೂ, ತಮ್ಮ ರಾಜಕೀಯ ಪ್ರಭಾವನ್ನು ತೋರಿ, ತಮ್ಮ ಅತ್ಯಂತ ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಡಿಕೆಶಿ ಯಶಸ್ವಿಯಾಗಿದ್ದರು.
ಯಾಕೆಂದರೆ, ಇದು ಸಾಧ್ಯವಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ಅವರಿಗಿದ್ದ ಪ್ರಭಾವ ಮತ್ತು ವರ್ಚಸ್ಸು. 2018ರ ಅಸೆಂಬ್ಲಿ ಚುನಾವಣೆಯಲ್ಲಿ ಡಿಕೆಶಿ, ತಮ್ಮ ಕುಟುಂಬದ ಸದಸ್ಯರೊಬ್ಬರಿಗೆ ಟಿಕೆಟ್ ಕೊಡಿಸುವಲ್ಲಿ ಮತ್ತು ತಾನೇ ಮುತುವರ್ಜಿ ವಹಿಸಿ, ಅವರನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದರು.
ಅವರೇ, ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್. ಇವರು, ಡಿಕೆಶಿ ನಾದಿನಿಯ ಪತಿ. ವೃತ್ತಿಯಲ್ಲಿ ಇವರು ವೈದರು. ಇಡಿ, ಬೇಲ್ ವಿಚಾರಣೆಯ ವೇಳೆ, ತಮಗೆ ಪರ್ಸನಲ್ ಡಾಕ್ಟರ್ ಅನ್ನು ನೀಡಬೇಕು ಎನ್ನುವ ಮನವಿಗೆ, ಕೋರ್ಟ್ ಅಸ್ತು ಅಂದಿರುವುದರಿಂದ, ಡಿಕೆಶಿ, ಆರೋಗ್ಯ ವಿಚಾರಿಸಿಕೊಳ್ಳಲು ರಂಗನಾಥ್, ದೆಹಲಿಗೆ ತೆರಳುವ ಸಾಧ್ಯತೆಯಿದೆ.

ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಡಿ ಕೆ ಶಿವಕುಮಾರ್ ಅವರ ವಿಶೇಷ ಒತ್ತಡದಿಂದ ಮತ್ತು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುತ್ತೇನೆ ಎನ್ನುವ ಕಮಿಟ್ಮೆಂಟ್ ನೀಡಿದ ನಂತರ, ಹೈಕಮಾಂಡ್, ಡಿಕೆಶಿ ಕುಟುಂಬದ ಡಾ. ಎಚ್ ಡಿ ರಂಗನಾಥ್ ಅವರಿಗೆ ಟಿಕೆಟ್ ಅನ್ನು ನೀಡಿತ್ತು.
ಬಿಜೆಪಿ ಜೊತೆಗಿನ ಜಿದ್ದಾಜಿದ್ದಿನ ಸ್ಪರ್ಧೆಯ ನಂತರ, ರಂಗನಾಥ್, ಸಮೀಪದ ಪ್ರತಿಸ್ಪರ್ಧಿ ಡಿ ಕೃಷ್ಣಕುಮಾರ್ ವಿರುದ್ದ 5,600 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ರಂಗನಾಥ್, ಪ್ರಮಾಣವಚನವನ್ನು ಡಿ ಕೆ ಶಿವಕುಮಾರ್ ಹೆಸರಿನಲ್ಲಿ ತೆಗೆದುಕೊಂಡಿದ್ದರು, ಎನ್ನುವುದು ಇಲ್ಲಿ ಗಮನಿಸಬೇಕಾದ ವಿಚಾರ.
ಮೈಸೂರಿನ ಜೆಎಸ್ಎಸ್ ಮೆಡಿಕಲ್ ಕಾಲೇಜಿನಲ್ಲಿ ಎಂಎಸ್ ಪದವೀಧರರಾಗಿರುವ ಡಾ. ರಂಗನಾಥ್, ಮೂವತ್ತು ಕೋಟಿಗೂ ಅಧಿಕ ಆಸ್ತಿ ಮತ್ತು ಏಳು ಕೋಟಿಗೂ ಅಧಿಕ ಸಾಲ ಇದೆ ಎಂದು ಚುನಾವಣಾ ಅಫಿಡವಿಟ್ ನಲ್ಲಿ ತೋರಿಸಿದ್ದರು.
ಕುಟುಂಬಸ್ಥರು ಮತ್ತು ಇತರರ ಭೇಟಿಗೆ ಅವಕಾಶ ನೀಡಬೇಕು, ಜೊತೆಗೆ, ಖಾಸಗಿ ವೈದ್ಯರು ಬೇಕು ಎನ್ನುವ ಡಿ ಕೆ ಶಿವಕುಮಾರ್ ಮನವಿಗೆ ಕೋರ್ಟ್ ಒಪ್ಪಿಗೆ ನೀಡಿರುವುದರಿಂದ, ಡಾ. ರಂಗನಾಥ್, ಮುಂದಿನ ಕೆಲವು ದಿನಗಳಲ್ಲಿ ಡಿಕೆಶಿ ಆರೋಗ್ಯವನ್ನು ನೋಡಿಕೊಳ್ಳಲಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications