ಬಾದಾಮಿಯಲ್ಲಿಯೇ ಸಿದ್ದರಾಮಯ್ಯ ಸ್ಪರ್ಧಿಸುವಂತೆ ಸ್ಥಳೀಯರ ಒತ್ತಡ: ಜಮೀರ್ ಅಹ್ಮದ್
ಬಾಗಲಕೋಟೆ, ನವೆಂಬರ್ 19: ಬಾದಾಮಿ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಆಗದಿರುವ ಅಭಿವೃದ್ಧಿ ಕಾರ್ಯಗಳು, ಕಳೆದ 5 ವರ್ಷಗಳಿಂದ ಮಾಡಲಾಗಿದೆ. ಹೀಗಾಗಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಬಾದಾಮಿಯ ಜನತೆ ಮತ್ತು ಕಾಂಗ್ರೆಸ್ ಮುಖಂಡರು ಒತ್ತಡ ಹೇರುತ್ತಿದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.
1918 ರಲ್ಲಿ ಬಾದಾಮಿಯಲ್ಲಿ ಸಿದ್ದರಾಮಯ್ಯ ಚುನಾವಣೆಯಲ್ಲಿ ಪ್ರಚಾರದ ಹೊಣೆ ಹೊತ್ತಿದ್ದ ಜಮೀರ್ ಅಹಮ್ಮದ್ ಶನಿವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರಕ್ಕೆ ಪ್ರವಾಸ ಕೈಗೊಂಡು, ಬಾದಾಮಿಯ ಕುಳಗೇರಿ ಕ್ರಾಸ್, ಕೆರೂರ ಸೇರಿದಂತೆ ವಿವಿದೆಡೆ ಭೇಟಿ ನೀಡಿದ ಸಂಚರಿಸಿದ್ದಾರೆ.
ಇನ್ನೂ ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಬಾದಾಮಿಯಿಂದಲೇ ಸ್ಫರ್ಧೆಗೆ ಒತ್ತಡ ಹೇರುವಂತೆ ಜನರು ನನಗೆ ಮನವಿ ಮಾಡುತ್ತಿದ್ದಾರೆ. ಆದರೆ, ಸಿದ್ದರಾಮಯ್ಯನವರು ಬಾದಾಮಿ ದೂರವಾಗುತ್ತದೆ ಎಂದು ಹೇಳುತ್ತಿದ್ದಾರೆ. ಇದಕ್ಕೆ ಬಾದಾಮಿ ಕ್ಷೇತ್ರದ ಜನತೆಯೇ ಹೆಲಿಕಾಪ್ಟರ್ ಕೊಡಿಸುತ್ತೇವೆ ಇಲ್ಲಿಯೇ ಬಂದು ಸ್ಪರ್ಧಿಸಿ ಎಂದು ಕರೆಯುತ್ತಿದ್ದಾರೆ.

ಜನರ ಒತ್ತಾಯದ ಮುಂದೆ ಏನು ಮಾಡುವುದಕ್ಕೆ ಆಗುವುದಿಲ್ಲ. ಇಲ್ಲಿರುವ ಜನರ ಅಭಿಮತವನ್ನ ಸಿದ್ದರಾಮಯ್ಯನವರ ಮುಂದೆ ಹೇಳುತ್ತೇನೆ. ಬಾದಾಮಿಯಲ್ಲಿ 50 ವರ್ಷದಲ್ಲಿ ಮಾಡಲಾಗದ ಸಾಧನೆಯನ್ನು ಈಗ 5 ವರ್ಷದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಹೀಗಾಗಿ, ಬಾದಾಮಿ ಕ್ಷೇತ್ರದ ಜನರು ಪಕ್ಷಾತೀತ ವಾಗಿ ಸಿದ್ದರಾಮಯ್ಯ ಅವರು ನಮ್ಮ ಕ್ಷೇತ್ರಕ್ಕೆ ಬರಬೇಕು ಎಂದು ಒತ್ತಾಯಿಸುತ್ತಿದ್ದಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರಿಗೆ ಬಾದಾಮಿ ಕ್ಷೇತ್ರದಲ್ಲಿ ಚಿಮ್ಮನಕಟ್ಟಿ ಕುಟುಂಬದ ವಿರೋಧ ಇಲ್ಲ. ಅವರೂ ಕೂಡ ಬಾದಾಮಿ ಕ್ಷೇತ್ರದಿಂದಲೇ ನಿಲ್ಲುವಂತೆ ನಮ್ಮ ಕುಟುಂಬದಿಂದ ಒತ್ತಾಯ ಮಾಡುತ್ತಿರುವುದಾಗಿ ಚಿಮ್ಮನಕಟ್ಟಿ ಅವರ ಪುತ್ರ ರಾಜು ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗಾಗಿ ಚಿಮ್ಮನಕಟ್ಟಿ ಅವರು ಬಾದಾಮಿ ವಿಧಾನ ಕ್ಷೇತ್ರ ಬಿಟ್ಟು ಕೊಟ್ಟಿದ್ದು ನಿಜ. ಆದರೆ, ಅವರ ದುರಾದೃಷ್ಟ ಎಂದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿಲ್ಲ. ಸರ್ಕಾರ ಅಧಿಕಾರಕ್ಕೆ ಬಂದಿದ್ದರೆ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಲಾಗುತ್ತಿತ್ತು. ಸಿದ್ದರಾಮಯ್ಯ ಅವರಿಗೆ ಯಾರು ಸಹಾಯ ಮಾಡಿದ್ದಾರೋ, ಅವರೆಲ್ಲರಿಗೂ ಪುನಃ ಸಹಾಯ ಮಾಡಿದ್ದಾರೆ ಎಂದರು,
ಬಾದಾಮಿ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ , ಬಿಜೆಪಿ,ಎಲ್ಲ ಪಕ್ಷಗಳಿಂದಲೂ ಸೇರಿ ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ಇದಕ್ಕೆ ಕಾರಣ ಸಿದ್ದರಾಮಯ್ಯ ಅವರಾಗಿದ್ದಾರೆ. ಜನರು ಹೆಚ್ಚಾಗಿ ಒತ್ತಡ ಹೇರುತ್ತಿರುವುದರಿಂದ ನಾನು ಕೂಡ ಬಾದಾಮಿಯಿಂದ ಸ್ಪರ್ಧೆ ಮಾಡುವಂತೆ ಮನವಿ ಮಾಡುತ್ತೇನೆ. ಈ ಕ್ಷೇತ್ರದಲ್ಲಿ ನಾಯಕರ ಗುಂಪುಗಾರಿಕೆ ಇರುವುದು ನಿಜ. ಎಲ್ಲ ಪಕ್ಷಗಳಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇರುವುದು ಸಹಜ. ಆದರೆ, ಸಿದ್ದರಾಮಯ್ಯ ವಿಚಾರ ಬಂದಲ್ಲಿ ಯಾವ ಭಿನ್ನಾಭಿಪ್ರಾಯವೂ ಇರುವುದಿಲ್ಲ ಎಂದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications