ಬಾದಾಮಿಯಲ್ಲಿಯೇ ಸಿದ್ದರಾಮಯ್ಯ ಸ್ಪರ್ಧಿಸುವಂತೆ ಸ್ಥಳೀಯರ ಒತ್ತಡ: ಜಮೀರ್ ಅಹ್ಮದ್
ಬಾಗಲಕೋಟೆ, ನವೆಂಬರ್ 19: ಬಾದಾಮಿ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಆಗದಿರುವ ಅಭಿವೃದ್ಧಿ ಕಾರ್ಯಗಳು, ಕಳೆದ 5 ವರ್ಷಗಳಿಂದ ಮಾಡಲಾಗಿದೆ. ಹೀಗಾಗಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಬಾದಾಮಿಯ ಜನತೆ ಮತ್ತು ಕಾಂಗ್ರೆಸ್ ಮುಖಂಡರು ಒತ್ತಡ ಹೇರುತ್ತಿದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.
1918 ರಲ್ಲಿ ಬಾದಾಮಿಯಲ್ಲಿ ಸಿದ್ದರಾಮಯ್ಯ ಚುನಾವಣೆಯಲ್ಲಿ ಪ್ರಚಾರದ ಹೊಣೆ ಹೊತ್ತಿದ್ದ ಜಮೀರ್ ಅಹಮ್ಮದ್ ಶನಿವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರಕ್ಕೆ ಪ್ರವಾಸ ಕೈಗೊಂಡು, ಬಾದಾಮಿಯ ಕುಳಗೇರಿ ಕ್ರಾಸ್, ಕೆರೂರ ಸೇರಿದಂತೆ ವಿವಿದೆಡೆ ಭೇಟಿ ನೀಡಿದ ಸಂಚರಿಸಿದ್ದಾರೆ.
ಇನ್ನೂ ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಬಾದಾಮಿಯಿಂದಲೇ ಸ್ಫರ್ಧೆಗೆ ಒತ್ತಡ ಹೇರುವಂತೆ ಜನರು ನನಗೆ ಮನವಿ ಮಾಡುತ್ತಿದ್ದಾರೆ. ಆದರೆ, ಸಿದ್ದರಾಮಯ್ಯನವರು ಬಾದಾಮಿ ದೂರವಾಗುತ್ತದೆ ಎಂದು ಹೇಳುತ್ತಿದ್ದಾರೆ. ಇದಕ್ಕೆ ಬಾದಾಮಿ ಕ್ಷೇತ್ರದ ಜನತೆಯೇ ಹೆಲಿಕಾಪ್ಟರ್ ಕೊಡಿಸುತ್ತೇವೆ ಇಲ್ಲಿಯೇ ಬಂದು ಸ್ಪರ್ಧಿಸಿ ಎಂದು ಕರೆಯುತ್ತಿದ್ದಾರೆ.

ಜನರ ಒತ್ತಾಯದ ಮುಂದೆ ಏನು ಮಾಡುವುದಕ್ಕೆ ಆಗುವುದಿಲ್ಲ. ಇಲ್ಲಿರುವ ಜನರ ಅಭಿಮತವನ್ನ ಸಿದ್ದರಾಮಯ್ಯನವರ ಮುಂದೆ ಹೇಳುತ್ತೇನೆ. ಬಾದಾಮಿಯಲ್ಲಿ 50 ವರ್ಷದಲ್ಲಿ ಮಾಡಲಾಗದ ಸಾಧನೆಯನ್ನು ಈಗ 5 ವರ್ಷದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಹೀಗಾಗಿ, ಬಾದಾಮಿ ಕ್ಷೇತ್ರದ ಜನರು ಪಕ್ಷಾತೀತ ವಾಗಿ ಸಿದ್ದರಾಮಯ್ಯ ಅವರು ನಮ್ಮ ಕ್ಷೇತ್ರಕ್ಕೆ ಬರಬೇಕು ಎಂದು ಒತ್ತಾಯಿಸುತ್ತಿದ್ದಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರಿಗೆ ಬಾದಾಮಿ ಕ್ಷೇತ್ರದಲ್ಲಿ ಚಿಮ್ಮನಕಟ್ಟಿ ಕುಟುಂಬದ ವಿರೋಧ ಇಲ್ಲ. ಅವರೂ ಕೂಡ ಬಾದಾಮಿ ಕ್ಷೇತ್ರದಿಂದಲೇ ನಿಲ್ಲುವಂತೆ ನಮ್ಮ ಕುಟುಂಬದಿಂದ ಒತ್ತಾಯ ಮಾಡುತ್ತಿರುವುದಾಗಿ ಚಿಮ್ಮನಕಟ್ಟಿ ಅವರ ಪುತ್ರ ರಾಜು ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗಾಗಿ ಚಿಮ್ಮನಕಟ್ಟಿ ಅವರು ಬಾದಾಮಿ ವಿಧಾನ ಕ್ಷೇತ್ರ ಬಿಟ್ಟು ಕೊಟ್ಟಿದ್ದು ನಿಜ. ಆದರೆ, ಅವರ ದುರಾದೃಷ್ಟ ಎಂದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿಲ್ಲ. ಸರ್ಕಾರ ಅಧಿಕಾರಕ್ಕೆ ಬಂದಿದ್ದರೆ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಲಾಗುತ್ತಿತ್ತು. ಸಿದ್ದರಾಮಯ್ಯ ಅವರಿಗೆ ಯಾರು ಸಹಾಯ ಮಾಡಿದ್ದಾರೋ, ಅವರೆಲ್ಲರಿಗೂ ಪುನಃ ಸಹಾಯ ಮಾಡಿದ್ದಾರೆ ಎಂದರು,
ಬಾದಾಮಿ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ , ಬಿಜೆಪಿ,ಎಲ್ಲ ಪಕ್ಷಗಳಿಂದಲೂ ಸೇರಿ ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ಇದಕ್ಕೆ ಕಾರಣ ಸಿದ್ದರಾಮಯ್ಯ ಅವರಾಗಿದ್ದಾರೆ. ಜನರು ಹೆಚ್ಚಾಗಿ ಒತ್ತಡ ಹೇರುತ್ತಿರುವುದರಿಂದ ನಾನು ಕೂಡ ಬಾದಾಮಿಯಿಂದ ಸ್ಪರ್ಧೆ ಮಾಡುವಂತೆ ಮನವಿ ಮಾಡುತ್ತೇನೆ. ಈ ಕ್ಷೇತ್ರದಲ್ಲಿ ನಾಯಕರ ಗುಂಪುಗಾರಿಕೆ ಇರುವುದು ನಿಜ. ಎಲ್ಲ ಪಕ್ಷಗಳಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇರುವುದು ಸಹಜ. ಆದರೆ, ಸಿದ್ದರಾಮಯ್ಯ ವಿಚಾರ ಬಂದಲ್ಲಿ ಯಾವ ಭಿನ್ನಾಭಿಪ್ರಾಯವೂ ಇರುವುದಿಲ್ಲ ಎಂದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications