ಅಸಮರ್ಥ ಸಚಿವರನ್ನು ಕೈಬಿಡಿ, ಹೊಸಬರಿಗೆ ಅವಕಾಶ ಕೊಡಿ
ಬೆಂಗಳೂರು, ಜುಲೈ 23 : ಮುಂಗಾರು ಅಧಿವೇಶನ ಮುಗಿಯುತ್ತಾ ಬಂದಂತೆ ಸಚಿವ ಸಂಪುಟ ಪುನಾರಚನೆ ಮಾತುಗಳು ಕೇಳಿಬರುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮರ್ಥ ಸಚಿವರನ್ನು ಕೈ ಬಿಟ್ಟು ಹೊಸಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಿ ಎಂದು ಶಾಸಕರು ಒತ್ತಾಯಿಸ ತೊಡಗಿದ್ದಾರೆ.
ಲೋಕಸಭೆ ಚುನಾವಣೆ ನಂತರ, ದಸರಾ ನಂತರ, ಗ್ರಾಮ ಪಂಚಾಯಿತಿ ಚುನಾವಣೆ ನಂತರ, ಬಿಬಿಎಂಪಿ ಚುನಾವಣೆ ನಂತರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆಯನ್ನು ಮುಂದೂಡುತ್ತಲೇ ಬರುತ್ತಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳ ತಾಳ್ಮೆ ಪರೀಕ್ಷೆ ಮಾಡುತ್ತಿದ್ದಾರೆ.[ಬಿಬಿಎಂಪಿ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಕಸರತ್ತು]

ಸಿದ್ದರಾಮಯ್ಯ ಅವರ ಈ ವರ್ತನೆಯಿಂದ ಅಸಮಾಧಾನಗೊಂಡಿರುವ ಶಾಸಕರು ತಕ್ಷಣ ಸಂಪುಟ ಪುನಾರಚನೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಹೈಕಮಾಂಡ್ ನಾಯಕರಿಗೂ ಮನವಿ ಮಾಡಲು ನಿರ್ಧರಿಸಿದ್ದಾರೆ. ಶುಕ್ರವಾರ ಮುಂಗಾರು ಅಧಿವೇಶನ ಅಂತ್ಯಗೊಳ್ಳುತ್ತಿದ್ದಂತೆ ಈ ಕುರಿತ ಚಟುವಟಿಕೆಗಳಿಗೆ ಚಾಲನೆ ದೊರೆಯುವ ಸಾಧ್ಯತೆ ಇದೆ. ['ಏನು ಆಗ್ಬೇಕೋ ಅದು ಆಗುವ ಸಮಯಕ್ಕೆ ಆಗುತ್ತೆ']
ಈಗಾಗಲೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಿರಿಯ ಶಾಸಕರಾದ ಎ.ಮಂಜು, ಮಾಲೀಕಯ್ಯ ಗುತ್ತೇದಾರ್ ಮುಂತಾದವರು ಸಚಿವ ಸಂಪುಟ ಪುನಾರಚನೆ ಮಾಡಿ ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಅಸಮರ್ಥ ಸಚಿವರನ್ನು ಕೈ ಬಿಟ್ಟು ಹೊಸಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. [ಖಾತೆಯೂ ಬದಲಾಗಬಹುದು, ವ್ಯಕ್ತಿಯೂ ಬದಲಾಗಬಹುದು]
ಇಂದು ಬೆಂಗಳೂರಿಗೆ ರಾಹುಲ್ ಗಾಂಧಿ : ಶುಕ್ರವಾರ ಅನಂತಪುರಕ್ಕೆ ತೆರಳಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಸಂಜೆ 7.30ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಬಿಬಿಎಂಪಿ ಚುನಾವಣೆ ಮುಂದಿದೆ : ಶಾಸಕರು ಎಷ್ಟೇ ಒತ್ತಡ ತಂದರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮುಗಿಯುವ ತನಕ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಕಡಿಮೆ ಇದೆ.
ಅಧಿವೇಶನ ಮುಗಿಯುತ್ತಿದ್ದಂತೆ ಬಿಬಿಎಂಪಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಾಯಕರು ತೊಡಗಿಸಿಕೊಳ್ಳಲಿದ್ದಾರೆ. ಆಗಸ್ಟ್ 22ರಂದು ಚುನಾವಣೆ ನಡೆಯಲಿದ್ದು, 25ರಂದು ಫಲಿತಾಂಶ ಹೊರಬೀಳಲಿದೆ. ನಂತರ ಸಂಪುಟ ಪುನಾರಚನೆ ಆಗುವ ಸಾಧ್ಯತೆ ಇದೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications