ಬ್ರಿಟೀಷರ ಕಾಲದ ಕಾನೂನುಗಳನ್ನು ಈಗ ಮತ್ತೆ ಜಾರಿಗೆ ತರುತ್ತಿದ್ದಾರೆ!
ಬೆಂಗಳೂರು, ಡಿ. 08: ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಶಾಸಕರು, ಮುಖಂಡರು ವಿಧಾನಸೌಧ ಆವರಣದಲ್ಲಿನ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಡಾ.ಜಿ. ಪರಮೇಶ್ವರ, ಎಸ್.ಆರ್. ಪಾಟೀಲ್, ಬಿ.ಕೆ. ಹರಿಪ್ರಸಾದ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ ಸೇರಿದಂತೆ ಕಾಂಗ್ರೆಸ್ ನಾಯಕರು, ಶಾಸಕರು ಭಾಗವಹಿಸಿದ್ದರು.
ರೈತರು ಕರೆ ನೀಡಿರುವ ಭಾರತ್ ಬಂದ್ಗೆ ಸಂಪೂರ್ಣ ಬೆಂಬಲ ಕೊಡುವುದಾಗಿ ಕಾಂಗ್ರೆಸ್ ನಿನ್ನೆಯೆ ಪ್ರಕಟಿಸಿತ್ತು. ಇಂದು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಸಾಂಕೇತಿಕ ಧರಣಿನ ಸತ್ಯಾಗ್ರಹ ನಡೆಸಿದ ಬಳಿಕ ಕಪ್ಪುಪಟ್ಟಿ ಧರಿಸಿ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್ ನಾಯಕರು, ಶಾಸಕರು ಭಾಗವಹಿಸಿದರು.

ಪಟ್ಟು ಪಟ್ಟಿ ಧರಿಸಿ ಕಲಾಪದಲ್ಲಿ ಭಾಗಿ
ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ ಬಳಿಕ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ನಾವು ಈಗಾಗಲೇ ವಿರೋಧಿಸಿದ್ದೇವೆ. ಈಗ ತಂದಿರುವ ಕಾನೂನುಗಳು ರೈತ ವಿರೋಧಿಯಾಗಿವೆ. ಯಾರು ಬೇಕಾದರೂ ಭೂಮಿ ಕೊಳ್ಳಬಹುದು. ಈ ಕಾನೂನು ಕೇವಲ ಅದಾನಿ, ಅಂಬಾನಿಯಂತವರಿಗೆ ಮಾತ್ರ ಉಪಯೋಗವಾಗುತ್ತದೆ.
ಕಪ್ಪು ಪಟ್ಟಿ ಧರಸಿ ಪ್ರತಿಭಟನೆ ಮಾಡಿದ್ದೇವೆ. ವಿಧಾನಸಭೆ ಕಲಾಪದಲ್ಲಿಯೂ ಸದನದಲ್ಲೂ ಕಪ್ಪು ಪಟ್ಟಿ ಧರಸಿ ಭಾಗವಹಿಸುತ್ತೇವೆ. ಕಾಂಗ್ರೆಸ್ ಪಕ್ಷ ರೈತರ ಪರವಾಗಿ ಇದೆ, ಮುಂದೆಯೂ ಇರಲಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಪಂಜಾಬ್, ಹರ್ಯಾಣದಲ್ಲಿ ಪ್ರತಿಭಟನೆ
ಪಂಜಾಬ್, ಹರ್ಯಾಣ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರವ ಸರ್ಕಾರ ಅದಾನಿ, ಕಾರ್ಪೋರೇಟ್ ಕಫಮನಿಗಳ ಪರವಾಗಿದೆ. ರೈತರು, ಕೃಷಿ ಕ್ಷೇತ್ರವನ್ನು ನಾಶ ಮಾಡಲು ಕೇಂದ್ರ ಬಿಜೆಪಿ ಸರ್ಕಾರ ಹೊರಟಿದೆ. ಈಗ ರೈತರ ಹೋರಾಟ ನ್ಯಾಯಯುತವಾಗಿದೆ. ತಕ್ಷಣ ಈ ಕಾನೂನುಗಳನ್ನು ಹಿಂಪಡೆಯಬೇಕು.
ಕಾನೂನುಗಳುಸಮಾಜಕ್ಕೆ ನ್ಯಾಯ ದೊರಕಿಸಬೇಕು. ಆದರೆ ಕೇಂದ್ರದ ಕಾನೂನುಗಳು ಕಾನೂನು ವಿರುದ್ಧವಾಗಿವೆ. ಸಮಾಜಕ್ಕೆ ವಿರುದ್ಧವಾಗಿವೆ. ರೈತ ಸಮುದಾಯಕ್ಕೆ ವಿರುದ್ಧವಾದ ಕಾನೂನು ಮಾಡಿದ್ದಾರೆ. ಆದನ್ನು ರೈತರು ವಿರೋಧಿಸುತ್ತಿದ್ದಾರೆ. ಆದರೂ ರೈತರ ಪ್ರತಿಭಟನೆ ಹತ್ತಿಕ್ಕಲು ಹೊರಟಿದ್ದಾರೆ. ಪಕ್ಷಗಳ ಹಕ್ಕುಗಳ ಧಮನಕ್ಕೆ ಮುಂದಾಗಿದ್ದಾರೆ. ಕಾಂಗ್ರೆಸ್, ಡಿಎಂಕೆ, ಟಿಎಂಸಿ ಎಲ್ಲರೂ ಕಾನೂನು ತಿದ್ದುಪಡಿ ವಿರೋಧಿಸಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರನ್ನು ಗುಲಾಮರಂತೆ ಕಾಣುತ್ತಿದೆ ಬಿಜೆಪಿ
ಪ್ರತಿಭಟನೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ದೇಶದ ರೈತರ ಪರ ನಾವಿದ್ದೇವೆ. ರೈತರ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಕೊಟ್ಟಿದ್ದೇವೆ. ಕೇಂದ್ರ ತಂದಿರುವ ಕಾಯ್ದೆಗಳು ರೈತ ವಿರೋಧಿಯಾಗಿವೆ. ರೈತರಿಗೆ ಹೆಚ್ಚಿನ ಅವಕಾಶ ಕಲ್ಪಿಸಿಕೊಡಬೇಕು, ಆದರೆ ದೇಶದ ಪ್ರತಿ ಕಾನೂನನ್ನು ಬಿಜೆಪಿ ಬದಲಾಯಿಸುತ್ತಿದೆ. ಇಲ್ಲಿ ವ್ಯಾಪಾರ ಮಾಡಿದರೆ ಸೆಸ್ ಇದೆಯಂತೆ. ಹೊರಗಡೆ ವ್ಯಾಪಾರಕ್ಕೆ ಸೆಸ್ ಹಾಕುವುದಿಲ್ಲವಂತೆ. ರೈತರನ್ನು ಗುಲಾಮರನ್ನಾಗಿ ಮಾಡುವುದಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ.

ಬ್ರಿಟೀಷರ ಕಾಲದ ಕಾನೂನು ಈಗ ಜಾರಿಗೆ
ರೈತರು ಬೆಳೆದ ಬೆಳೆ ಮಾರಾಟಕ್ಕೆ ಸ್ವಾತಂತ್ರ್ಯವಿಲ್ಲ. ರೈತರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಅನ್ನದಾತರ ಪರವಾಗಿ ನಾವು ನಿಲ್ಲುತ್ತೇವೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಸಿರು ಶಾಲು ಹಾಕಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ರೈತನಿಗೆ ಮಾತ್ರ ಸಹಾಯ ಮಾಡಲ್ಲ. ರೈತರ ಸ್ವಾತಂತ್ರ್ಯವನ್ನೇ ಸರ್ಕಾರ ಹತ್ತಿಕ್ಕಿದೆ. ಕಾನೂನು ತರಲು ಯಾರೊಂದಿಗೆ ಬಳಿ ಚರ್ಚೆ ಮಾಡಿದ್ದಾರೆ? ಲಾಠಿ ಚಾರ್ಜ್ ಮಾಡೋದು, ಕೇಸ್ ಹಾಕೋದು ಮಾತ್ರ ಮಾಡುತ್ತಾರೆ. ಬ್ರಿಟೀಷರ ಕಾಲದ ಕಾನೂನು ಈಗ ಜಾರಿಗೆ ತಂದಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ












Click it and Unblock the Notifications