ಕುಮಾರಸ್ವಾಮಿ ಬಜೆಟ್ ಬಗ್ಗೆ ಕಾಂಗ್ರೆಸ್ ಸಭೆಯಲ್ಲಿ ಕಾವೇರಿದ ಚರ್ಚೆ
Recommended Video

ಬೆಂಗಳೂರು, ಜುಲೈ 11 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡನೆ ಮಾಡಿದ ಬಜೆಟ್ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಇಂದು ವಿರೋಧ ವ್ಯಕ್ತವಾಯಿತು. ಹಲವು ಶಾಸಕರು ಬಜೆಟ್ನ ಹಲವು ಅಂಶಗಳಿಗೆ ವಿರೋಧ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಳ ಮಾಡಿರುವ ಬಗ್ಗೆ ಸಭೆಯಲ್ಲಿ ವಿರೋಧ ವ್ಯಕ್ತವಾಯಿತು.
ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ, ಹಿರಿಯ ನಾಯಕ ಎಚ್.ಕೆ.ಪಾಟೀಲ್, 'ಪೆಟ್ರೋಲ್, ಡೀಸೆಲ್ ಮೇಲಿನ ಹೆಚ್ಚುವರಿ ತೆರಿಗೆ ಪರಿಷ್ಕರಿಸಿ' ಎಂದು ಒತ್ತಾಯಿಸಿದರು.

ಉತ್ತರ ಕರ್ನಾಟಕ ಭಾಗಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ, ಅಲ್ಪಸಂಖ್ಯಾತರಿಗೆ ಅನ್ಯಾಯ, ಸಾಲಮನ್ನಾ ವಿಚಾರದಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ಶಾಸಕರು ಸಭಾ ನಾಯಕ ಸಿದ್ದರಾಮಯ್ಯ ಅವರ ಗಮನ ಸೆಳೆದರು.

ಅಲ್ಪ ಸಂಖ್ಯಾತರಿಗೆ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಅನುದಾನವನ್ನು ಕೊಟ್ಟಿಲ್ಲ. ಇದರಿಂದ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ವಿರುದ್ಧ ತಪ್ಪು ಸಂದೇಶ ಹಬ್ಬುವಂತೆ ಆಗಲಿದೆ ಎಂದು ಕೆಲವು ನಾಯಕರು ಹೇಳಿದರು.
ಸಭೆಯ ಬಳಿಕ ಮಾತನಾಡಿದ ಎಚ್.ಕೆ.ಪಾಟೀಲ್, 'ಉತ್ತರ ಕರ್ನಾಟಕ ಭಾಗಕ್ಕೆ ಅನುದಾನ ಹಂಚಿಕೆಯಲ್ಲಿ ಆಗಿರುವ ಅನ್ಯಾಯದ ಬಗ್ಗೆ ಗಮನ ಸೆಳೆದಿದ್ದೇನೆ. ಪರಮೇಶ್ವರ ಮತ್ತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಸರಿಪಡಿಸುವುದಾಗಿ ಹೇಳಿದ್ದಾರೆ' ಎಂದರು.
ಸಭೆಯ ಬಳಿಕ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, 'ಮುಂದಿನ ಚುನಾವಣೆಗೆ ಶಿಸ್ತಿನಿಂದ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. ಸಭಾಪತಿ ಸ್ಥಾನ ಬೇಗ ಭರ್ತಿ ಮಾಡಬೇಕು ಎಂದು ಚರ್ಚೆಯಾಗಿದೆ. ನಮ್ಮ ರಾಷ್ಟ್ರೀಯ ಕಾರ್ಯದರ್ಶಿಗಳ ಜೊತೆ ಈ ವಿಚಾರ ಚರ್ಚೆ ಮಾಡಲಾಗುತ್ತದೆ' ಎಂದು ಹೇಳಿದರು.
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ












Click it and Unblock the Notifications