'ವಿಶ್ವದಲ್ಲೇ ಈ ಕೆಲಸ ಮಾಡಿದ್ದು ನಮ್ಮ ಸರ್ಕಾರ ಮಾತ್ರ' ಎಂದ ಯತೀಂದ್ರ; ಏನದು?
ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರದ ಬಗ್ಗೆ ಬೆನ್ನುತಟ್ಟಿಕೊಂಡಿದ್ದಾರೆ. ಇಡೀ ವಿಶ್ವದಲ್ಲಿ ಜನರ ಖಾತೆಗಳಿಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ಅಂದರೆ ಅದು ನಮ್ಮ ಕಾಂಗ್ರೆಸ್ ಸರ್ಕಾರ ಎಂದು ಹೊಗಳಿದ್ದಾರೆ.
ಇಂದು ಮೈಸೂರಿನಲ್ಲಿ ಮಾತನಾಡಿರುವ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ವ್ಯಾಪ್ತಿಯ ಪ್ರದೇಶಗಳ ಅಭಿವೃದ್ಧಿಗೆ ಮಾತ್ರವೇ ಪ್ರಾಧಿಕಾರದ ಹಣ ಬಳಕೆ ಆಗಿದೆ. ಅದರಲ್ಲಿ ತಪ್ಪೇನಿದೆ? ಎಂದೂ ಯತೀಂದ್ರ ಪ್ರಶ್ನಿಸಿದ್ದಾರೆ. ಜನರಿಗೆ ಒಳ್ಳೆಯದು ಮಾಡುವುದಕ್ಕಾಗಿಯೇ ಬಳಸಲು ಆ ಹಣ ಇದೆ. ಹಾಗಾಗಿ ಅದನ್ನು ಬಳಸುವುದರಲ್ಲಿ ಯಾವುದೇ ತಪ್ಪಿಲ್ಲ. ಎದುರಾಳಿ ಪಕ್ಷಗಳು ಸುಖಾಸುಮ್ಮನೆ ನಮ್ಮ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಇಡೀ ವಿಶ್ವದಲ್ಲೇ ಜನಗಳ ಖಾತೆಗೆ ಹಣ ಜಮೆ ಮಾಡುತ್ತಿರುವ ಏಕೈಕ ಸರ್ಕಾರ ಅಂದರೆ ನಮ್ಮ ಕಾಂಗ್ರೆಸ್ ಮಾತ್ರವೇ. ಇಂತಹ ಯೋಜನೆಗಳನ್ನು ಸಹಿಸಿಕೊಳ್ಳಲಾಗದೆ ಸುಮ್ಮನೆ ನಮ್ಮ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಯತೀಂದ್ರ ದೂರಿದ್ದಾರೆ.
ನಮ್ಮ ಸರ್ಕಾರದ ಮೇಲೆ ಮಾತನಾಡಲು ಅವರಿಗೆ ಬೇರೆ ವಿಚಾರಗಳು ಸಿಗುವುದಿಲ್ಲ. ನಮ್ಮ ತಂದೆಯವರ ಮೇಲೆ ಮಾಡಲಾಗುತ್ತಿರುವ ಎಲ್ಲ ಆರೋಪಗಳೆಲ್ಲ ಸುಳ್ಳು. ಪ್ರತಿಯೊಂದಕ್ಕೂ ಸುಮ್ಮನೆ ಆರೋಪ ಮಾಡಿದರೆ ಹೇಗೆ? ನಮ್ಮ ತಂದೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಕೊಡಿ ಎಂದು ಮನಬಂದಂತೆ ಕೇಳುತ್ತಿದ್ದಾರೆ. ಆದರೆ, ಅವರು ಯಾಕೆ ರಾಜೀನಾಮೆ ಕೊಡಬೇಕು? ಈ ರೀತಿ ಸುಳ್ಳು ಆರೋಪಗಳಿಗೆಲ್ಲ ರಾಜೀನಾಮೆ ಕೊಡುತ್ತಾ ಹೋದರೆ ಏನರ್ಥ? ಎಂದು ಕಿಡಿಕಾರಿದ್ದಾರೆ.

ಒಂದು ತನಿಖೆ ಮಾಡಬೇಕಾದರೆ ಮಾಡುವ ಆರೋಪಗಳಲ್ಲಿ ಹುರುಳಿರಬೇಕು. ಹಾಗಾದರೆ ಯಾವ ಮುಖ್ಯಮಂತ್ರಿ ಇದ್ದಾಗಲೂ ಯಾರಾದರೂ ಬಂದು ಈ ರೀತಿ ಆಧಾರರಹಿತವಾಗಿ ಆರೋಪ ಮಾಡಿದ ತಕ್ಷಣ ರಾಜೀನಾಮೆ ಕೊಡಲು ಸಾಧ್ಯವೇ ? ಹಾಗೆಲ್ಲ ಮಾಡಲು ಸಾಧ್ಯವಿಲ್ಲ. ಆರೋಪಗಳಲ್ಲಿ ಹುರುಳಿರಬೇಕು.
ಕೆಲವು ರಾಜಕಾರಣಿಗಳು ಮಾಡುವ ತಪ್ಪು ತುಂಬಾ ದೊಡ್ಡದಾಗಿ ಕಾಣುತ್ತದೆ. ಪ್ರತಿ ವೃತ್ತಿಯಲ್ಲೂ ಅಂತಹವರು ಇದ್ದೇ ಇರುತ್ತಾರೆ. ತಪ್ಪು ಮಾಡುವ ಮೂಲಕ ತಮ್ಮ ವೃತ್ತಿಗೆ ಕಪ್ಪುಚುಕ್ಕೆ ತರುವವರು ಇರುತ್ತಾರೆ. ಇನ್ನು ನಮ್ಮ ರಾಜಕೀಯದಲ್ಲಿ ಅಂತಹವರು ಬಹಳಷ್ಟು ಜನರೇ ಇದ್ದಾರೆ. ಅವರು ಮಾಡುವ ತಪ್ಪಿನಿಂದ ಎಲ್ಲ ರಾಜಕಾರಣಿಗಳಿಗೂ ಕೆಟ್ಟ ಹೆಸರು ಬರುತ್ತಿದೆ. ಆದರೆ, ಯಾರೇ ತಪ್ಪು ಮಾಡಿದ್ರೂ ಸರ್ಕಾರ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಮಾಡುತ್ತೆ ಎಂದು ಯತೀಂದ್ರ ಹೇಳಿದ್ದಾರೆ.
ಇನ್ನು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪಟ್ಟು ಹಿಡಿದಿರುವ ನಾಯಕರಿಗೆ ಯತೀಂದ್ರ ಸಿದ್ದರಾಮಯ್ಯ ಅವರು ಈ ರೀತಿ ಕೌಂಟರ್ ನೀಡಿದ್ದಾರೆ. ಜಾತಿ ನಿಂದನೆ, ಅತ್ಯಾಚಾರ ಹಾಗೂ ಕೊಲೆ ಬೆದರಿಕೆ ಆರೋಪದಲ್ಲಿ ಜೈಲು ಸೇರಿರುವ ಬಿಜೆಪಿ ಶಾಸಕ ಅವರು ಪ್ರಕರಣ ಕುರಿತು ಪ್ರತಿಕ್ರಿಯಿಸಿ, ನನಗೆ ಆ ಪ್ರಕರಣದ ಬಗ್ಗೆ ಅಷ್ಟೇನೂ ಗೊತ್ತಿಲ್ಲ ಎಂದಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications