ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಚಿವ ಸ್ಥಾನ ಆಕಾಂಕ್ಷಿಗಳಿಂದ ಕೆ.ಸಿ.ವೇಣುಗೋಪಾಲ್‌ಗೆ ಪತ್ರ

By Gururaj
|
Google Oneindia Kannada News

ಬೆಂಗಳೂರು, ಜುಲೈ 02 : ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಪಕ್ಷದಲ್ಲಿ ಪೈಪೋಟಿ ಮುಂದುವರೆದಿದೆ. ವಿಧಾನಪರಿಷತ್ ಸದಸ್ಯರು ಹಿರಿಯ ನಾಯಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೆ.ಸಿ.ವೇಣುಗೋಪಾಲ್ ಅವರಿಗೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್‌ನ 20 ಎಂಎಲ್‌ಸಿಗಳು ಸಹಿ ಮಾಡಿದ ಪತ್ರವನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ವಿಧಾನಪರಿಷತ್ ಸದಸ್ಯೆ ಡಾ.ಜಯಮಾಲಾ ಅವರು ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿದ್ದಾರೆ.

ಬಜೆಟ್ ಬಳಿಕ ಸಂಪುಟ ವಿಸ್ತರಣೆ, ಸಂಪುಟ ಸೇರುವ ಕಾಂಗ್ರೆಸ್‌ ಶಾಸಕರ ಪಟ್ಟಿ!ಬಜೆಟ್ ಬಳಿಕ ಸಂಪುಟ ವಿಸ್ತರಣೆ, ಸಂಪುಟ ಸೇರುವ ಕಾಂಗ್ರೆಸ್‌ ಶಾಸಕರ ಪಟ್ಟಿ!

ಕೆಪಿಸಿಸಿಗೆ ಶೀಘ್ರವೇ ಅಧ್ಯಕ್ಷರನ್ನು ನೇಮಕ ಮಾಡಬೇಕು. ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವಾಗ ಪರಿಷತ್ ಸದಸ್ಯರಿಗೆ ಆದ್ಯತೆ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

Congress MLCs demands for minister post to senior member

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ವಿ.ಎಸ್.ಉಗ್ರಪ್ಪ, ಮೋಹನ್ ಕೊಂಡಜ್ಜಿ, ಎಚ್‌.ಎಂ.ರೇವಣ್ಣ ಸೇರಿದಂತೆ 20 ಎಂಎಲ್‌ಸಿಗಳು ಈ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ. ಇದೇ ಪತ್ರದ ಮತ್ತೊಂದು ಪ್ರತಿಯನ್ನು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಲಾಗಿದೆ.

ಮತ್ತೆ ಅಸಮಾಧಾನ ಹೊರಹಾಕಿದ ಕಾಂಗ್ರೆಸ್ ಶಾಸಕ ಸುಧಾಕರ್ಮತ್ತೆ ಅಸಮಾಧಾನ ಹೊರಹಾಕಿದ ಕಾಂಗ್ರೆಸ್ ಶಾಸಕ ಸುಧಾಕರ್

ವಿಧಾನಪರಿಷತ್ ಸದಸ್ಯೆ ಡಾ.ಜಯಮಾಲಾ ಅವರು ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿದ್ದಾರೆ. ಹಿರಿಯ ನಾಯಕರನ್ನು ಕಡೆಗಣಿಸಿ ಜಯಮಾಲಾ ಅವರಿಗೆ ಸಚಿವ ಸ್ಥಾನ ನೀಡಿರುವುದು ನಾಯಕರ ನಡುವಿನ ಅಸಮಾಧಾನಕ್ಕೆ ಕಾರಣವಾಗಿದೆ.

English summary
Karnataka Congress Legislative Council members submitted a memorandum to Karnataka party in charge K.C. Venugopal and demanding minister post to a senior member of the council.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X