ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಸಕಾಂಗ ಪಕ್ಷದ ಸಭೆ : ಸಿದ್ದರಾಮಯ್ಯ ಮುಂದಿದೆ ದೊಡ್ಡ ಸವಾಲು!

|
Google Oneindia Kannada News

Recommended Video

ಸಿದ್ದರಾಮಯ್ಯ ಮುಂದಿದೆ ಒಂದು ದೊಡ್ಡ ಸವಾಲು | Oneindia Kannada

ಬೆಂಗಳೂರು, ಡಿಸೆಂಬರ್ 17 : ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಲವು ಕಾರಣಗಳಿಗೆ ಕುತೂಹಲ ಹುಟ್ಟು ಹಾಕಿದೆ. ಅದರಲ್ಲೂ ಸಂಪುಟ ವಿಸ್ತರಣೆಗೆ ಕೆಲವು ದಿನಗಳು ಬಾಕಿ ಇರುವುದರಿಂದ ಸಭೆಯಲ್ಲಿ ಕಾವೇರಿದ ಚರ್ಚೆ ನಡೆಯುವ ನಿರೀಕ್ಷೆ ಇದೆ.

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಡಿ.18ರಂದು ಬೆಳಗಾವಿಯಲ್ಲಿ ಸಭೆ ನಡೆಯಲಿದೆ. ವಿದೇಶ ಪ್ರವಾಸದಿಂದ ಮರಳಿರುವ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಬಳಿಕ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಚಿವ ಸಂಪುಟ ವಿಸ್ತರಣೆ : ಕಾಂಗ್ರೆಸ್‌ ಶಾಸಕರಿಗೆ ಕಾದಿದೆ ನಿರಾಸೆ?ಸಚಿವ ಸಂಪುಟ ವಿಸ್ತರಣೆ : ಕಾಂಗ್ರೆಸ್‌ ಶಾಸಕರಿಗೆ ಕಾದಿದೆ ನಿರಾಸೆ?

ಉತ್ತರ ಕರ್ನಾಟಕ ಭಾಗದ ಶಾಸಕರು ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಉಪ ಮುಖ್ಯಮಂತ್ರಿ ಅಥವ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಶಾಸಕರು ಬೇಡಿಕೆ ಇಡಬಹುದು ಎಂಬ ನಿರೀಕ್ಷೆ ಇದೆ. ಪ್ರಭಾವಿ ಖಾತೆಗಳಿಗೂ ಅವರು ಬೇಡಿಕೆ ಇಡಬಹುದು ಎಂಬ ಸುದ್ದಿಗಳು ಹರಿದಾಡುತ್ತಿವೆ.

ಮತ್ತೆ ಸಂಪುಟ ಸೇರುವ ಇಂಗಿತ ವ್ಯಕ್ತಪಡಿಸಿದ ಎನ್‌.ಮಹೇಶ್‌ಮತ್ತೆ ಸಂಪುಟ ಸೇರುವ ಇಂಗಿತ ವ್ಯಕ್ತಪಡಿಸಿದ ಎನ್‌.ಮಹೇಶ್‌

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಮಂಗಳವಾರ ಅವರು ತಿರುಪತಿಗೆ ಭೇಟಿ ನೀಡಲಿದ್ದು, ಬುಧವಾರ ಕಲಾಪದಲ್ಲಿ ಪಾಲ್ಗೊಳ್ಳಲಿದ್ದಾರೆ....

ಸಚಿವ ಸಂಪುಟ ಸಭೆಗೆ ಮತ್ತೆ ರಮೇಶ್ ಜಾರಕಿಹೊಳಿ ಗೈರು!ಸಚಿವ ಸಂಪುಟ ಸಭೆಗೆ ಮತ್ತೆ ರಮೇಶ್ ಜಾರಕಿಹೊಳಿ ಗೈರು!

ಶಾಸಕರಿಂದ ಬೇಡಿಕೆ

ಶಾಸಕರಿಂದ ಬೇಡಿಕೆ

ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಕೆಪಿಸಿಸಿ ಅಧ್ಯಕ್ಷ ಪಟ್ಟವನ್ನು ಉತ್ತರ ಕರ್ನಾಟಕ ಭಾಗದ ಶಾಸಕರಿಗೆ ನೀಡಬೇಕು. ಸಂಪುಟ ಪುನಾರಚನೆ ವೇಳೆ ಪ್ರಭಾವಿ ಖಾತೆಗಳನ್ನು ನೀಡಬೇಕು ಎಂದು ಬೇಡಿಕೆ ಇಡುವ ಸಾಧ್ಯತೆ ಇದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರನ್ನು ಹೇಗೆ ಸಮಾಧಾನ ಪಡಿಸಲಿದ್ದಾರೆ? ಎಂಬುದನ್ನು ಕಾದು ನೋಡಬೇಕಿದೆ.

ಹೆಚ್ಚಿನ ಸಚಿವ ಸ್ಥಾನ ಕೊಡಿ

ಹೆಚ್ಚಿನ ಸಚಿವ ಸ್ಥಾನ ಕೊಡಿ

ಸಂಪುಟ ಪುನಾರಚನೆ ವೇಳೆ ಉತ್ತರ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಬೇಕು. ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಿಲ್ಲ ಎಂದು ಶಾಸಕರು ಬೇಡಿಕೆ ಇಡುವ ಸಾಧ್ಯತೆ ಇದೆ. ಜಾರಕಿಹೊಳಿ ಸಹೋದರರು, ಮತ್ತೊಂದು ಕಡೆ ಎಂ.ಬಿ.ಪಾಟೀಲ್ ಮತ್ತು ಎಸ್.ಆರ್.‌ಪಾಟೀಲ್ ಅವರು ಸಭೆಯಲ್ಲಿ ತಮ್ಮ ಬೇಡಿಕೆ ಮುಂದಿಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಎಂ.ಬಿ.ಪಾಟೀಲ್ ಹೇಳುವುದೇನು?

ಎಂ.ಬಿ.ಪಾಟೀಲ್ ಹೇಳುವುದೇನು?

'ಉತ್ತರ ಕರ್ನಾಟಕ ಭಾಗದಿಂದ 41 ಶಾಸಕರು ಆಯ್ಕೆಯಾಗಿದ್ದಾರೆ. ಆದರೆ, ಕೇವಲ 5 ಶಾಸಕರಿಗೆ ಮಾತ್ರ ಮಂತ್ರಿಗಿರಿ ಸಿಕ್ಕಿದೆ. ದಕ್ಷಿಣ ಭಾಗದ ಶಾಸಕರಿಗೆ ಹೆಚ್ಚಿನ ಆದ್ಯತೆ ಸಿಕ್ಕಿದೆ' ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಹಿರಿಯ ನಾಯಕರ ಒತ್ತಡ

ಹಿರಿಯ ನಾಯಕರ ಒತ್ತಡ

ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ರಾಮಲಿಂಗಾ ರೆಡ್ಡಿ, ರೋಷನ್ ಬೇಗ್, ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್ ಸೇರಿದಂತೆ ಹಿರಿಯ ನಾಯಕರಿಗೆ ಅವಕಾಶ ಸಿಕ್ಕಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಡಿಸಿಎಂ ಪಟ್ಟಕ್ಕೆ ಬೇಡಿಕೆ

ಡಿಸಿಎಂ ಪಟ್ಟಕ್ಕೆ ಬೇಡಿಕೆ

ಜಾರಕಿಹೊಳಿ ಸಹೋದರರು ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿಸಿಎಂ ಹುದ್ದೆಗೆ ಬೇಡಿಕೆ ಇಡುವ ಸಾಧ್ಯತೆ ಇದೆ. ಇಲ್ಲವಾದಲ್ಲಿ ಗೃಹ, ಕಂದಾಯ ಸೇರಿದಂತೆ ವಿವಿಧ ಪ್ರಭಾವಿ ಖಾತೆಗಳಿಗೆ ಬೇಡಿಕೆ ಇಡುವ ಸಾಧ್ಯತೆ ಇದೆ.

English summary
Congress legislators MLA's from north Karnataka may demand for deputy chief minister and KPCC present post on Congress Legislature Party (CLP) meeting in Belagavi on December 18, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X