ಆಡಳಿತ ನನ್ನ ಕೈಯಲಿಲ್ಲ, ಕಾಂಗ್ರೆಸ್ ಕೈಯಲ್ಲಿದೆ: ಕುಮಾರಸ್ವಾಮಿ ಅಸಮಾಧಾನ
Recommended Video

ಬೆಂಗಳೂರು, ಜನವರಿ 09: ಮಿತ್ರ ಪಕ್ಷ ಕಾಂಗ್ರೆಸ್ ಮೇಲೆ ಮತ್ತೆ ಅಸಮಾಧಾನ ಹೊರಹಾಕಿರುವ ಸಿಎಂ ಕುಮಾರಸ್ವಾಮಿ, 'ಕಾಂಗ್ರೆಸ್ ನನ್ನ ಕೈ ಕಟ್ಟಿಹಾಕಿದೆ' ಎಂದು ಅಳಲು ತೋಡಿಕೊಂಡಿದ್ದಾರೆ.
ನಿನ್ನೆ ರಾತ್ರಿ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಈ ಮೈತ್ರಿ ಸರ್ಕಾರ ನನ್ನ ನಿಯಂತ್ರಣದಲ್ಲಿಲ್ಲ ಎಲ್ಲವೂ ಕಾಂಗ್ರೆಸ್ ಹಿಡಿತದಲ್ಲಿದೆ ಎಂದು ಬೇಸರ ಹೊರಹಾಕಿದ್ದಾರೆ.
ಸಿಎಂ ಪಟ್ಟ ನನಗೆ ಬಿಸಿ ತುಪ್ಪವಾಗಿದೆ, ನುಂಗಲೂ ಆಗದೆ ಉಗಿಯಲು ಆಗದೆ ಒದ್ದಾಡುತ್ತಿದ್ದೇನೆ ಎಂದಿರುವ ಕುಮಾರಸ್ವಾಮಿ, ಲೋಕಸಭೆ ಚುನಾವಣೆ ವರೆಗೂ ಹಲ್ಲುಕಚ್ಚಿಕೊಂಡು ಸರ್ಕಾರ ನಡೆಸುತ್ತೇನೆ ಎನ್ನುವ ಮೂಲಕ ಚುನಾವಣೆ ನಂತರ ಸರ್ಕಾರ ಉರುಳುವ ಮುನ್ಸೂಚನೆ ನೀಡಿದ್ದಾರೆ.
ನಾನು ಕಾಂಗ್ರೆಸ್ನ ತಾಳಕ್ಕೆ ಕುಣಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ನಾನು ಅನುಭವಿಸುತ್ತಿರುವ ನನಗೆ ಮಾತ್ರವೇ ಗೊತ್ತು ಎಂದು ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕರು ಮತ್ತು ಮುಖಂಡರ ಮುಂದೆ ಅಳಲು ತೋಡಿಕೊಂಡಿದ್ದಾರೆ.

'ಯಾರ ವಿರುದ್ಧವೂ ಟೀಕೆ ಮಾಡುವುದಿಲ್ಲ'
ಯಾರ ವಿರುದ್ಧವೂ ಟೀಕೆ ಮಾಡಬೇಡ ಎಂದು ದೇವೇಗೌಡ ಅವರು ಹೇಳಿದ್ದಾರೆ ಅದರಂತೆ ನಡೆದುಕೊಳ್ಳುತ್ತಿದ್ದೇನೆ. ಡಿಸಿಪಿ ವರ್ಗಾವಣೆಗಳಿರಲಿ, ಪಿಡಿಓ ವರ್ಗಾವಣೆ ಸಹ ಕಾಂಗ್ರೆಸ್ ಹೇಳಿದಂತೆ ಆಗುತ್ತಿದೆ, ನಾನು ನಿಮಿತ್ತ ಮಾತ್ರ ಎಂದು ಕುಮಾರಸ್ವಾಮಿ ಗುರುತರ ಆರೋಪವನ್ನೇ ಕಾಂಗ್ರೆಸ್ ಮೇಲೆ ಹೊರಿಸಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ?
ಕುಮಾರಸ್ವಾಮಿ ಅವರ ಈ ಹೇಳಿಕೆಯಿಂದ ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮೈತ್ರಿಯ ಮುಖ್ಯ ನಾಯಕರೇ ಮಿತ್ರ ಪಕ್ಷದ ವಿರುದ್ಧ ಮಾತನಾಡಿರುವುದು ಸರ್ಕಾರದ ಪತನದ ಮುನ್ಸೂಚನೆಯಂತೂ ಕಾಣುತ್ತಿದೆ.

ಈ ಹಿಂದೆಯೂ ಹೇಳಿಕೆ ನೀಡಿದ್ದರು ಎಚ್ಡಿಕೆ
ಕುಮಾರಸ್ವಾಮಿ ಈ ಹಿಂದೆಯೂ ಈ ರೀತಿಯ ಬಹಿರಂಗ ಹೇಳಿಕೆಗಳನ್ನು ಕಾಂಗ್ರೆಸ್ ವಿರುದ್ಧ ನೀಡಿದ್ದರು. 'ಸಾಂಧರ್ಬಿಕ ಶಿಶು', ಕಷ್ಟಪಟ್ಟು ಸರ್ಕಾರ ನಡೆಸುತ್ತಿದ್ದೇನೆ ಎಂದೆಲ್ಲಾ ಹೇಳಿದ್ದರು ಕಣ್ಣೀರು ಸಹ ಹಾಕಿದ್ದರು. ಆಗೆಲ್ಲಾ ಅವರ ಹೇಳಿಕೆಗಳು ಭಾರಿ ವಿವಾದ ಸೃಷ್ಠಿಸಿದ್ದವು.

ಟೀಕಾಪ್ರಹಾರ ನಡೆಸಲಿದೆ ಬಿಜೆಪಿ
ಕುಮಾರಸ್ವಾಮಿ ಅವರ ಈ ಹೇಳಿಕೆ ಬಿಜೆಪಿಗೆ ಅಸ್ತ್ರವಾಗಿ ದೊರೆತಿದ್ದು, ಮೈತ್ರಿ ಸರ್ಕಾರದ ಮೇಲೆ ಯಡಿಯೂರಪ್ಪ ಮತ್ತು ತಂಡ ಹರಿಹಾಯುವ, ಟೀಕಾಪ್ರಹಾರ ಹರಿಸುವ ಸರ್ವ ಮುನ್ಸೂಚನೆಯೂ ಇದೆ. ಸರ್ಕಾರ ಬೀಳಿಸಲು ಅವಕಾಶಕ್ಕಾಗಿ ಬಿಜೆಪಿ ಕಾಯುತ್ತಿದ್ದು, ಮಿತ್ರ ಪಕ್ಷದ ವಿರುದ್ಧ ಕುಮಾರಸ್ವಾಮಿ ಅವರ ಅಸಮಾಧಾನವನ್ನು ತನ್ನ ಲಾಭಕ್ಕೆ ಹೇಗೆ ಬಿಜೆಪಿ ಬಳಸಿಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications