ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಗುವುದಿಲ್ಲ ಬಿಡಿ; ಮೋದಿಜಿಯೇ ಮತ್ತೆ ಪ್ರಧಾನಿ : ಸಿ ಟಿ ರವಿ
ಬೆಂಗಳೂರು, ಆಗಸ್ಟ್ 20: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಗುವುದಿಲ್ಲ. ನರೇಂದ್ರ ಮೋದಿಜಿಯೇ ಮತ್ತೆ ಪ್ರಧಾನಿ ಆಗಲಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಸಿ ಟಿ ರವಿ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಕಳೆದ ಸಾರಿಗಿಂತ ಹೆಚ್ಚು ಮೆಜಾರಿಟಿ ಬರಲಿದೆ. ಆದರೆ, ಕಾಂಗ್ರೆಸ್ಸಿನೊಳಗೆ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿಯ ನೇತೃತ್ವವನ್ನು ಒಪ್ಪುವುದಿಲ್ಲ ಎಂಬ ಸಂದೇಶವನ್ನು ಸಿದ್ದರಾಮಯ್ಯನವರು ವಿಶ್ವನಾಥ್ ಮೂಲಕ ಕೊಟ್ಟಿದ್ದಾರೇನೋ ಎಂಬ ಅನುಮಾನ ನನ್ನದು ಎಂದು ಹೇಳಿದರು.

ಇನ್ನೂ ಆಪರೇಷನ್ ಹಸ್ತದ ಕುರಿತು ಮಾತನಾಡಿ, ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ಅತಿಯಾಗಿ ವರ್ತಿಸಿದರೆ ಹಸ್ತಕ್ಕೆ ಆಪರೇಷನ್ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ಎಚ್ಚರಿಸಿದ ಅವರು, ಹಸ್ತಕ್ಕೆ ಆಪರೇಷನ್ ಮಾಡಿದರೆ ಏನಾಗುತ್ತದೆ ಎಂಬುದನ್ನು ನಾನೀಗ ಹೇಳುವುದಿಲ್ಲ. ನಮಗೆ ಹಿಂದೆ 104 ಸೀಟು ಬಂದಿತ್ತು. ಯಾರಿಗೂ ಬಹುಮತ ಇರಲಿಲ್ಲ. ಕಾಂಗ್ರೆಸ್- ಜೆಡಿಎಸ್ ಸೇರಿ ಸರಕಾರ ನಡೆಸಿದ್ದವು. 3 ತಿಂಗಳಿಗೇ ನಿಮ್ಮದು ಅಧ್ವಾನ ಆಗಿತ್ತು. ಒಬ್ಬರಿಗೆ ಒಬ್ಬರನ್ನು ಕಂಡರೆ ಆಗದ ಸ್ಥಿತಿ ಇತ್ತು. ಅದರ ಪರಿಣಾಮವಾಗಿ ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಆದರೂ ಎರಡೂ ಪಕ್ಷಗಳು ಹೀನಾಯವಾಗಿ ಸೋತಿದ್ದವು ಎಂದು ಹೇಳಿದರು.
ಅನಿಶ್ಚಿತತೆ, ಅರಾಜಕೀಯ ಪರಿಸ್ಥಿತಿ ಬಂದಾಗ ಶಾಸಕರಿಗೆ ಬಿಜೆಪಿಯೇ ಪರ್ಯಾಯ ಎನಿಸಿತ್ತು. ಈಗ ಪೂರ್ಣ ಬಹುಮತ ಇದೆ. ಅತಿಯಾಗಿ ಮಾಡಲು ಹೋದರೆ ಪರಿಸ್ಥಿತಿ ಕೆಟ್ಟದ್ದಾಗಲಿದೆ. ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತ ಪಡೆದು ಆಡಳಿತ ನಡೆಸುತ್ತಿದೆ. ಒಳ್ಳೆಯ ಆಡಳಿತ ನಡೆಸುವ ಗುರಿ ಇಟ್ಟುಕೊಳ್ಳಬೇಕು. ಇಲ್ಲದೇ ಇರುವುದನ್ನು ಮಾಡಲು ಹೊರಟರೆ ಸುಮ್ಮನೆ ಕುಳಿತುಕೊಳ್ಳುವವರು ನಾವಲ್ಲ. ನಾವೇನಾದರೂ ಮಾಡಿದರೆ ಮೇಲೇಳಲು ಆಗಲ್ಲ ಎಂದು ಎಚ್ಚರಿಕೆ ನೀಡಿದರು. ನಾವೇನು ಮಾಡುತ್ತೇವೆಂದು ಹೇಳುವುದಿಲ್ಲ. ಮುಟ್ಟಿನೋಡುವಂತೆ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದರು.
ನಾವು ಮಾಡಿದಾಗ ಆಪರೇಷನ್ ಎನ್ನುತ್ತಾರೆ. ಅದೆಲ್ಲ ಪಟ್ಟಿ ನಮ್ಮಲ್ಲಿದೆ. ಅದನ್ನು ಮುಖಕ್ಕೆ ಹಿಡಿಯಬಯಸುತ್ತೇವೆ. ತಮ್ಮ ಪಕ್ಷದ ಹಿರಿಯ ಶಾಸಕರನ್ನು ಹಿಡಿದಿಡಲಾಗದ ಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಇದೆ. ನಮ್ಮ ಪಕ್ಷ ಬಿಟ್ಟು ಯಾರೂ ಹೋಗುವುದಿಲ್ಲ. ಇವತ್ತು 4 ಜನ ಸಚಿವರು ಪತ್ರ ಬರೆದಿದ್ದಾರೆ. ಎಲ್ಲವೂ ಸರಿ ಇದ್ದರೆ ಶಾಸಕರು ಯಾಕೆ ಪತ್ರ ಬರೆಯುತ್ತಾರೆ ಎಂದು ಪ್ರಶ್ನಿಸಿದರು.
ಎಲ್ಲವೂ ಸರಿ ಇಲ್ಲದಾಗ ರಾಜಕೀಯದಲ್ಲಿ ಪ್ರೇಮಪತ್ರಗಳು ಶುರುವಾಗುತ್ತವೆ. ಈಗ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಇಲ್ಲವೆಂದು ಸಚಿವರು, ಶಾಸಕರೇ ಹೇಳುವಾಗ ಯಾರೂ ಅಲ್ಲಿಗೆ ಹೋಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನು ಮೀರಿ ಅತಿರೇಕಕ್ಕೆ ಕೈ ಹಾಕಿದರೆ ನಮಗೂ ಏನು ಮಾಡಬೇಕೆಂದು ಗೊತ್ತಿದೆ ಎಂದು ಎಚ್ಚರಿಕೆ ನೀಡಿದರು.
ನಮಗೆ ಪಾರ್ಟಿ ಕಟ್ಟಲು ಗೊತ್ತು. ಅದನ್ನು ಉಳಿಸಿಕೊಳ್ಳುವುದೂ ಗೊತ್ತು. ಅಡ್ಡ ಬಂದವರಿಗೆ ಹೇಗೆ ಉತ್ತರ ಕೊಡಬೇಕೆಂದು ಗೊತ್ತಿದೆ ಎಂದು ಸವಾಲೆಸೆದರು. ನಾವು ರಾಜಕೀಯ ದೃಷ್ಟಿಯಿಂದ ಕಾಂಗ್ರೆಸ್ ಶಾಸಕರನ್ನು ಸಂಪರ್ಕ ಮಾಡಿಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟ ಅವರು, ರಾಜಕೀಯದ ಪಗಡೆ ದಾಳ ಏಕಮುಖ ಅಲ್ಲ; ಚೆಸ್ ಏಕಮುಖ ಅಲ್ಲ. ನಮಗೆ ಚೆಕ್ಮೇಟ್ ಮಾಡಲು ಬಂದರೆ ನಾವೂ ಚೆಕ್ಮೇಟ್ ಮಾಡಲು ಸಿದ್ಧರಿದ್ದೇವೆ ಎಂದು ತಿಳಿಸಿದರು.
ಸೈನಿಕನಿಗೆ ಚೆಕ್ಮೇಟ್ ಮಾಡುವುದಿಲ್ಲ. ನಮ್ಮ ಚೆಕ್ಮೇಟ್ ರಾಜನಿಗೇ ಇರುತ್ತದೆ ಎಂದು ತಿಳಿಸಿದರು. ಡಿ.ಕೆ.ಶಿವಕುಮಾರ್ ಡಿಸಿಎಂ ಆಗಿದ್ದಾರೆ. ತಮ್ಮ ಹುದ್ದೆಯ ಜವಾಬ್ದಾರಿಯಿಂದ ಮಾತನಾಡಲಿ. ಆ ದಿನಗಳ ಧ್ವನಿ ಅವರದಾಗಬಾರದು ಎಂದು ಹೇಳಿದರು.
ಇನ್ನೂ ನೀವು ಮೊದಲು ಲೋಕಾಯುಕ್ತಕ್ಕೆ ಬಾಗಿಲು ಹಾಕಿದ್ದಿರಿ. ಕೇಸು ಮುಚ್ಚಿಹಾಕಲು ಎಸಿಬಿ ತಂದಿದ್ದೀರಿ. ಅರ್ಕಾವತಿ 8 ಸಾವಿರ ಕೋಟಿ ಕುರಿತ ನನ್ನ ಆರೋಪಕ್ಕೆ ಒಂದು ಶಬ್ದದಲ್ಲಾದರೂ ಪ್ರತಿಕ್ರಿಯೆ ಕೊಟ್ಟಿದ್ದೀರಾ ಎಂದು ಕಾಂಗ್ರೆಸ್ ಪಕ್ಷದವರನ್ನು ತರಾಟೆಗೆ ತೆಗೆದುಕೊಂಡರು. ಇದ್ದ ಮೂವರಲ್ಲಿ ಕದ್ದವರ್ಯಾರು? ಎಂದು ಪ್ರಶ್ನಿಸಿದ ಅವರು, ಈಗ ಅವರು ಪ್ರಾಮಾಣಿಕರಲ್ಲವೇ? ಪ್ರಧಾನಿ ಹುದ್ದೆಗೆ ಟವೆಲ್ ಹಾಕಿದ್ದಾರಲ್ಲವೇ? ದೇವೇಗೌಡರೇ ಪ್ರಧಾನಿ ಆಗಿದ್ದಾರೆ.
ಅರ್ಕಾವತಿ, ನೈಸ್ ವಿಚಾರದಲ್ಲಿ ತಮ್ಮ ಪ್ರಾಮಾಣಿಕತೆ ಸಾಬೀತುಪಡಿಸಲು ಅವರು ಸಕ್ರಿಯರಾಗಲಿ. 35 ಸಾವಿರ ಕೋಟಿ ಏನಾಗಿದೆ ಎಂದು ಪತ್ತೆ ಹಚ್ಚಿದರೆ ಸಾಲ ಮಾಡುವುದಾದರೂ ತಪ್ಪಬಹುದಲ್ಲವೇ? ಎಂದು ಪ್ರಶ್ನಿಸಿದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications