ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು; 5 ಕಾರಣಗಳು
ಬೆಂಗಳೂರು, ಸೆಪ್ಟೆಂಬರ್ 15 : 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿತ್ತು. 28 ಕ್ಷೇತ್ರಗಳ ಪೈಕಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಲು ಪಕ್ಷ ಯಶಸ್ವಿಯಾಗಿತ್ತು.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿತ್ತು. ಕೆಪಿಸಿಸಿ ಚುನಾವಣಾ ಸೋಲಿನ ಕುರಿತು ವರದಿ ನೀಡಲು ಸತ್ಯಶೋಧನಾ ಸಮಿತಿಯನ್ನು ವಿ. ಆರ್. ಸುದರ್ಶನ್ ನೇತೃತ್ವದಲ್ಲಿ ರಚನೆ ಮಾಡಿತ್ತು.
ಸತ್ಯಶೋಧನಾ ಸಮತಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಹೊರತುಪಡಿಸಿ ಉಳಿದ 27 ಕ್ಷೇತ್ರಗಳಲ್ಲಿ ಸಂಚಾರ ನಡೆಸಿ ವರದಿಯನ್ನು ತಯಾರು ಮಾಡಿದೆ. ಕಾಂಗ್ರೆಸ್ ಪಕ್ಷದ ಸೋಲಿಗೆ 5 ಪ್ರಮುಖ ಕಾರಣಗಳನ್ನು ಪಟ್ಟಿ ಮಾಡಿದೆ.
ಅಕ್ಟೋಬರ್ 2ರಂದು ಕೆಪಿಸಿಸಿ ಅಧ್ಯಕ್ಷರಿಗೆ ವರದಿಯನ್ನು ಸಮಿತಿ ಹಸ್ತಾಂತರ ಮಾಡಲಿದೆ. ಮೈತ್ರಿ ಸರ್ಕಾರದ ಗೊಂದಲ, ಸ್ಥಳೀಯ ಮಟ್ಟದ ಕಾರ್ಯಕರ್ತರ ಹೊಂದಾಣಿಕೆ ಕೊರತೆ ಸೋಲಿಗೆ ಪ್ರಮುಖ ಕಾರಣವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ವರದಿಯಲ್ಲಿ ನೀಡಿರುವ 5 ಕಾರಣಗಳು ಇಲ್ಲಿವೆ.

ಕಾರಣ - 1
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದರೂ ಲೋಕಸಭಾ ಚುನಾವಣೆಯಲ್ಲಿ ಅದು ಫಲ ನೀಡಿಲಿಲ್ಲ. ಪರಸ್ಪರ ಕಚ್ಚಾಡಿಕೊಳ್ಳುತ್ತಿದ್ದ ಸ್ಥಳೀಯ ಮಟ್ಟದ ನಾಯಕರು, ಕಾರ್ಯಕರ್ತರು ಚುನಾವಣೆಯಲ್ಲಿ ಒಂದಾಗಿ ಕೆಲಸ ಮಾಡಲಿಲ್ಲ. ಸ್ಥಳೀಯ ಮಟ್ಟದಲ್ಲಿ ಈ ಸಮಸ್ಯೆ ಇರುವ ಬಗ್ಗೆ ಮಾಹಿತಿ ಇದ್ದರೂ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದು ತಪ್ಪು, ಇದರಿಂದಾಗಿ ಹಿನ್ನಡೆ ಉಂಟಾಗಿದೆ.

ಕಾರಣ - 2
ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಬಳಿಕ ಯಾವ ಕ್ಷೇತ್ರವನ್ನು ಯಾರಿಗೆ ಬಿಟ್ಟುಕೊಡಬೇಕು ಎಂಬ ಗೊಂದಲ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದ ತನಕ ಮುಂದುವರೆಯಿತು. ಇದರಿಂದಾಗಿ ಕಾರ್ಯಕರ್ತರು ಉತ್ಸಾಹದಿಂದಾಗಿ ಕೆಲಸ ಮಾಡಲು ಆಗಲಿಲ್ಲ. ಚುನಾವಣೆಯಲ್ಲಿ ಹಿನ್ನಡೆ ಆಗಲು ಇದು ಸಹ ಕಾರಣವಾಯಿತು.

ಕಾರಣ - 3
ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಪಕ್ಷ ತೊರೆಯಲು ಅನರ್ಹ ಶಾಸಕರು ಸಿದ್ಧವಾಗಿದ್ದರು. ಅವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರ ಮತ್ತು ತಮ್ಮ ಪ್ರಭಾವ ಇರುವ ಕ್ಷೇತ್ರಗಳಲ್ಲಿ ಕೆಲಸ ಮಾಡಲೇ ಇಲ್ಲ. ಇದರಿಂದಾಗಿ ಪಕ್ಷದ ಅಭ್ಯರ್ಥಿಗಳಿಗೆ ಹಿನ್ನಡೆ ಉಂಟಾಯಿತು. ಆದ್ದರಿಂದ, 1 ಸೀಟು ಗೆಲ್ಲುವುದು ಮಾತ್ರ ಸಾಧ್ಯವಾಯಿತು.

ಕಾರಣ - 4
ಉಡುಪಿ-ಚಿಕ್ಕಮಗಳೂರು, ವಿಜಯಪುರ, ಉತ್ತರ ಕನ್ನಡ ಕ್ಷೇತ್ರದಲ್ಲಿ ಜೆಡಿಎಸ್ಗೆ ನೆಲೆಯೇ ಇಲ್ಲ. ಆದರೂ ಆ ಕ್ಷೇತ್ರಗಳನ್ನು ಬಿಟ್ಟುಕೊಡಲಾಯಿತು. ಇದು ಅಕ್ಕಪಕ್ಕದ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪರಿಣಾಮ ಬೀರಿತು. ಆದ್ದರಿಂದ, ಮೂರು ಕ್ಷೇತ್ರದ ಜೊತೆಗೆ ಅಕ್ಕ-ಪಕ್ಕದ ಕ್ಷೇತ್ರದಲ್ಲಿಯೂ ಸೋಲಾಯಿತು.

ಕಾರಣ - 5
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದರೂ ಎರಡೂ ಪಕ್ಷಗಳ ನಾಯಕರ ನಡುವೆ ಮಾತಿನ ಸಮರ ನಿಲ್ಲಲಿಲ್ಲ. ನಾಯಕರ ನಡುವಿನ ಗೊಂದಲ ಕಾರ್ಯಕರ್ತರ ಮೇಲೆಯೂ ಪರಿಣಾಮ ಬೀರಿತು. ಆದ್ದರಿಂದ, ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಕೇವಲ 2 ಸೀಟುಗಳು ಮಾತ್ರ ಸಿಕ್ಕಿದವು.
-
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ












Click it and Unblock the Notifications