ಎಲ್ಲಾ ಚೆನ್ನಾಗಿದೆಯಾ? ಮೋದಿಗೆ ಪ್ರಿಯಾಂಕ್ ಖರ್ಗೆ ಟ್ವೀಟ್ ಟಾಂಗ್
ಬೆಂಗಳೂರು, ಸೆಪ್ಟೆಂಬರ್ 23: 'ಎಲ್ಲಾ ಚೆನ್ನಾಗಿದೆ'- ಹೀಗೆ ಅಮೆರಿಕದ ಹ್ಯೂಸ್ಟನ್ನಲ್ಲಿ ಭಾನುವಾರ ರಾತ್ರಿ ಕಿಕ್ಕಿರಿದು ಸೇರಿದ್ದ ಜನಸಮೂಹದ ಮುಂದೆ ಪ್ರಧಾನಿ ನರೇಂದ್ರ ಮೋದಿ 'ಹೌಡಿ ಮೋದಿ' ಕಾರ್ಯಕ್ರಮದಲ್ಲಿ ಕನ್ನಡ ಸೇರಿದಂತೆ ಹತ್ತು ಭಾಷೆಗಳಲ್ಲಿ ಉಲಿದಿದ್ದರು. ಅದಕ್ಕೆ ಅವರಿಗೆ ಜೈಕಾರ ಹಾಕುತ್ತಿದ್ದ ಜನಸಮೂಹ ಹರ್ಷೋದ್ಗಾರದೊಂದಿಗೆ ಬೆಂಬಲ ನೀಡಿತ್ತು.
ಆದರೆ ಮೋದಿ ಅವರ ಹೇಳಿಕೆಯನ್ನು ವಿರೋಧಪಕ್ಷಗಳು ಟೀಕೆಗೆ ಅಸ್ತ್ರವನ್ನಾಗಿ ಬಳಸಿಕೊಂಡಿವೆ. ಎಲ್ಲವೂ ಚೆನ್ನಾಗಿವೆ ಎನ್ನುವ ಮೋದಿ ದೇಶ ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳು, ನಿರುದ್ಯೋಗದ ಆಘಾತ, ನೆರೆಪರಿಹಾರದ ಸಮಸ್ಯೆ, ಕೋಮು ಸಂಘರ್ಷ, ಗುಂಪು ಹತ್ಯೆ ಮುಂತಾದವುಗಳನ್ನು ಮರೆತಿದ್ದಾರೆ ಎಂದು ಟೀಕಿಸಿದ್ದಾರೆ.
ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಆರು ಅಂಶಗಳನ್ನು ಮುಂದಿಟ್ಟು ಮೋದಿ ಅವರ 'ಎಲ್ಲ ಚೆನ್ನಾಗಿದೆ' ಎಂಬ ಹೇಳಿಕೆಯನ್ನು ವ್ಯಂಗ್ಯವಾಡಿದ್ದಾರೆ. ರಾಜ್ಯದ ಪ್ರವಾಹದ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡದೆಯೇ ಇರುವುದು, ಕನ್ನಡಿಗರಿಗೆ ಉದ್ಯೋಗ ಸಿಗದೆ ಇರುವುದು, ಕಲಬುರಗಿಯ ಅಭಿವೃದ್ಧಿ ಮರೀಚಿಕೆಯಾಗಿರುವ ಸಂಗತಿಗಳನ್ನು ಅವರು ಪ್ರಸ್ತಾಪಿಸಿದ್ದಾರೆ.

"ಎಲ್ಲಾ ಚೆನ್ನಾಗಿದೆ!" - ಅಮೇರಿಕಾದಲ್ಲಿ ಶ್ರೀ ಮೋದಿ
1) ಕರ್ನಾಟಕಕ್ಕೆ ಪ್ರವಾಹ ಪರಿಹಾರ ಧನ ಸಿಕ್ಕಿಲ್ಲ
2) ಆಪರೇಷನ್ ಕಮಲದಿಂದಾಗಿ ಸ್ಥಿರ ಸರ್ಕಾರವೇ ಇಲ್ಲ
3) ಕಲಬುರಗಿಗೆ ರೇಲ್ವೆ ವಿಭಾಗ ಇಲ್ಲ
4) ಐ.ಬಿ.ಪಿ.ಎಸ್ ಪರೀಕ್ಷೆಗಳಲ್ಲಿನ ನಿಯಮ ಬದಲಾವಣೆಯಿಂದಾಗಿ ಕನ್ನಡಿಗರಿಗೆ ಉದ್ಯೋಗಾವಕಾಶ ಇಲ್ಲ
5) ಕಲಬುರಗಿಯ ರಾಷ್ಟ್ರೀಯ ಬಂಡವಾಳ ತಯಾರಿಕಾ ವಲಯದಲ್ಲಿ ಯಾವುದೇ ಪ್ರಗತಿ ಇಲ್ಲ
6) ಇಡೀ ಕಲ್ಯಾಣ ಕರ್ನಾಟಕ ಭಾಗದಿಂದ ಒಬ್ಬರೇ ಸಚಿವರಿರುವುದರಿಂದ ಅಗತ್ಯ ಪ್ರಾತಿನಿಧ್ಯವೇ ಇಲ್ಲ
"ಎಲ್ಲಾ ಚೆನ್ನಾಗಿದೆ" ಎಂದಿದ್ದಕ್ಕೆ ಧನ್ಯವಾದಗಳು! ಎಂದು ಪ್ರಿಮಾಂಕ್ ಖರ್ಗೆ, ಮೋದಿ ಅವರ ಹೇಳಿಕೆಗೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?











Click it and Unblock the Notifications