ಎಲ್ಲಾ ಚೆನ್ನಾಗಿದೆಯಾ? ಮೋದಿಗೆ ಪ್ರಿಯಾಂಕ್ ಖರ್ಗೆ ಟ್ವೀಟ್ ಟಾಂಗ್
ಬೆಂಗಳೂರು, ಸೆಪ್ಟೆಂಬರ್ 23: 'ಎಲ್ಲಾ ಚೆನ್ನಾಗಿದೆ'- ಹೀಗೆ ಅಮೆರಿಕದ ಹ್ಯೂಸ್ಟನ್ನಲ್ಲಿ ಭಾನುವಾರ ರಾತ್ರಿ ಕಿಕ್ಕಿರಿದು ಸೇರಿದ್ದ ಜನಸಮೂಹದ ಮುಂದೆ ಪ್ರಧಾನಿ ನರೇಂದ್ರ ಮೋದಿ 'ಹೌಡಿ ಮೋದಿ' ಕಾರ್ಯಕ್ರಮದಲ್ಲಿ ಕನ್ನಡ ಸೇರಿದಂತೆ ಹತ್ತು ಭಾಷೆಗಳಲ್ಲಿ ಉಲಿದಿದ್ದರು. ಅದಕ್ಕೆ ಅವರಿಗೆ ಜೈಕಾರ ಹಾಕುತ್ತಿದ್ದ ಜನಸಮೂಹ ಹರ್ಷೋದ್ಗಾರದೊಂದಿಗೆ ಬೆಂಬಲ ನೀಡಿತ್ತು.
ಆದರೆ ಮೋದಿ ಅವರ ಹೇಳಿಕೆಯನ್ನು ವಿರೋಧಪಕ್ಷಗಳು ಟೀಕೆಗೆ ಅಸ್ತ್ರವನ್ನಾಗಿ ಬಳಸಿಕೊಂಡಿವೆ. ಎಲ್ಲವೂ ಚೆನ್ನಾಗಿವೆ ಎನ್ನುವ ಮೋದಿ ದೇಶ ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳು, ನಿರುದ್ಯೋಗದ ಆಘಾತ, ನೆರೆಪರಿಹಾರದ ಸಮಸ್ಯೆ, ಕೋಮು ಸಂಘರ್ಷ, ಗುಂಪು ಹತ್ಯೆ ಮುಂತಾದವುಗಳನ್ನು ಮರೆತಿದ್ದಾರೆ ಎಂದು ಟೀಕಿಸಿದ್ದಾರೆ.
ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಆರು ಅಂಶಗಳನ್ನು ಮುಂದಿಟ್ಟು ಮೋದಿ ಅವರ 'ಎಲ್ಲ ಚೆನ್ನಾಗಿದೆ' ಎಂಬ ಹೇಳಿಕೆಯನ್ನು ವ್ಯಂಗ್ಯವಾಡಿದ್ದಾರೆ. ರಾಜ್ಯದ ಪ್ರವಾಹದ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡದೆಯೇ ಇರುವುದು, ಕನ್ನಡಿಗರಿಗೆ ಉದ್ಯೋಗ ಸಿಗದೆ ಇರುವುದು, ಕಲಬುರಗಿಯ ಅಭಿವೃದ್ಧಿ ಮರೀಚಿಕೆಯಾಗಿರುವ ಸಂಗತಿಗಳನ್ನು ಅವರು ಪ್ರಸ್ತಾಪಿಸಿದ್ದಾರೆ.

"ಎಲ್ಲಾ ಚೆನ್ನಾಗಿದೆ!" - ಅಮೇರಿಕಾದಲ್ಲಿ ಶ್ರೀ ಮೋದಿ
1) ಕರ್ನಾಟಕಕ್ಕೆ ಪ್ರವಾಹ ಪರಿಹಾರ ಧನ ಸಿಕ್ಕಿಲ್ಲ
2) ಆಪರೇಷನ್ ಕಮಲದಿಂದಾಗಿ ಸ್ಥಿರ ಸರ್ಕಾರವೇ ಇಲ್ಲ
3) ಕಲಬುರಗಿಗೆ ರೇಲ್ವೆ ವಿಭಾಗ ಇಲ್ಲ
4) ಐ.ಬಿ.ಪಿ.ಎಸ್ ಪರೀಕ್ಷೆಗಳಲ್ಲಿನ ನಿಯಮ ಬದಲಾವಣೆಯಿಂದಾಗಿ ಕನ್ನಡಿಗರಿಗೆ ಉದ್ಯೋಗಾವಕಾಶ ಇಲ್ಲ
5) ಕಲಬುರಗಿಯ ರಾಷ್ಟ್ರೀಯ ಬಂಡವಾಳ ತಯಾರಿಕಾ ವಲಯದಲ್ಲಿ ಯಾವುದೇ ಪ್ರಗತಿ ಇಲ್ಲ
6) ಇಡೀ ಕಲ್ಯಾಣ ಕರ್ನಾಟಕ ಭಾಗದಿಂದ ಒಬ್ಬರೇ ಸಚಿವರಿರುವುದರಿಂದ ಅಗತ್ಯ ಪ್ರಾತಿನಿಧ್ಯವೇ ಇಲ್ಲ
"ಎಲ್ಲಾ ಚೆನ್ನಾಗಿದೆ" ಎಂದಿದ್ದಕ್ಕೆ ಧನ್ಯವಾದಗಳು! ಎಂದು ಪ್ರಿಮಾಂಕ್ ಖರ್ಗೆ, ಮೋದಿ ಅವರ ಹೇಳಿಕೆಗೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
-
Horoscope March 6: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಒಳಿತು, ಪ್ರೇಮಿಗಳಿಗೆ ಕಾದಿವೆ ಮಧುರ ಕ್ಷಣ, ದಿನ ಭವಿಷ್ಯ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ












Click it and Unblock the Notifications