ಮಡಿಕೇರಿ ಅಭ್ಯರ್ಥಿಗೆ ಮೆಹುಲ್ ಚೋಕ್ಸಿ ನಂಟು, ಒಟ್ಟು 4 ಬಿ-ಫಾರಂಗೆ ತಡೆ
ಮಡಿಕೇರಿ, ಏಪ್ರಿಲ್ 17: ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕರ್ನಾಟಕದ ಮಾಜಿ ಸರ್ಕಾರಿ ಅಭಿಯೋಜಕ ಎಚ್.ಎಸ್ ಚಂದ್ರಮೌಳಿಯವರ ಟಿಕೆಟ್ ನ್ನು ತಡೆ ಹಿಡಿಯಲಾಗಿದೆ.
ಚಂದ್ರಮೌಳಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ರೂವಾರಿ ನೀರವ್ ಮೋದಿ ಮಾವ ಹಾಗೂ ಗೀತಾಂಜಲಿ ಜ್ಯುವೆಲ್ಲರ್ಸ್ ಮಾಲಿಕ ಮೆಹುಲ್ ಚೋಕ್ಸಿಯ ವಕೀಲರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಟಿಕೆಟ್ ಗೆ ಕಾಂಗ್ರೆಸ್ ತಡೆ ನೀಡಿದೆ. ಹಾಗಾಗಿ ಅವರಿಗೆ ಬಿ-ಫಾರ್ಮ್ ನ್ನು ಕಾಂಗ್ರೆಸ್ ನೀಡುತ್ತಿಲ್ಲ.
ಈ ಹಿಂದೆ ಚಂದ್ರಮೌಳಿಯವರಿಗೆ ಟಿಕೆಟ್ ನೀಡಿದ್ದಕ್ಕೆ ಸುಪ್ರೀಂ ಕೋರ್ಟ್ ವಕೀಲ ಹಾಗೂ ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಅಸಮಧಾನಗೊಂಡಿದ್ದರು. ಇದೀಗ ಅವರು ಟಿಕೆಟ್ ಪಡೆಯುತ್ತಾರಾ ಕಾದು ನೋಡಬೇಕಿದೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ ಎಂದೇ ಹೇಳಲಾಗಿದ್ದ ಬಾಗಲಕೋಟೆಯ ಬಾದಾಮಿ ಕ್ಷೇತ್ರದ ಟಿಕೆಟ್ ನ್ನು ಹಾಲಿ ಡಾ. ದೇವರಾಜ್ ಪಾಟೀಲ್ ಗೆ ನೀಡಲಾಗಿತ್ತು. ಹಾಲಿ ಶಾಸಕ ಬಿಬಿ ಚಿಮ್ಮನಕಟ್ಟಿಯವರಿಗೆ ಟಿಕೆಟ್ ನೀಡದೆ, ಅತ್ತ ಸಿಎಂಗೂ ಅವಕಾಶ ನೀಡದರೆ ಮೂರನೆಯವರಿಗೆ ಟಿಕೆಟ್ ನೀಡಲಾಗಿತ್ತು. ಆದರೆ ದೇವರಾಜ್ ಪಾಟೀಲ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರ ಬಿ-ಫಾರ್ಮ್ ಗೆ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಸೂಚನೆ ಮೇರೆಗೆ ಬಿ-ಫಾರ್ಮ್ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಪಕ್ಕಕ್ಕೆ ಎತ್ತಿಟ್ಟಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಬಿ-ಫಾರ್ಮ್ ಹಂಚುತ್ತಿದ್ದು, ಬೊಮ್ಮನಹಳ್ಳಿಯ ಟಿಕೆಟ್ ಪಡೆದಿದ್ದ ಪುಷ್ಪ ರಾಜಗೋಪಾಲರೆಡ್ಡಿ ಕೂಡ ಉಮೇದುವಾರಿಕೆ ಪಡೆದುಕೊಳ್ಳಲು ನಿರಾಕರಿಸಿದ್ದಾರೆ.
ಪುಷ್ಮಾ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರಿಗೆ ಬೊಮ್ಮನಹಳ್ಳಿಯ ಟಿಕೆಟ್ ನೀಡಲಾಗಿತ್ತು. ಹೀಗಾಗಿ ಬೊಮ್ಮನಹಳ್ಳಿಯ ಟಿಕೆಟ್ ಪಡೆಯಲು ಅವರು ನಿರಾಕರಿಸಿದ್ದಾರೆ.
ಇದೇ ವೇಳೆ ತಿಪಟೂರು ಕ್ಷೇತ್ರದ ಬಿ-ಫಾರ್ಮ್ ನ್ನು ಕೂಡ ತಡೆ ಹಿಡಿಯಲಾಗಿದೆ. ಇಲ್ಲಿ ಹಾಲಿ ಶಾಸಕ ಕೆ. ಷಡಕ್ಷರಿಯವರಿಗೆ ಟಿಕೆಟ್ ನೀಡಿರಲಿಲ್ಲ. ಇದರಿಂದ ಅವರು ಬಂಡಾಯವೇಳುವ ಬೆದರಿಕೆ ಹಾಕಿದ್ದರು. ಈ ಹಿನ್ನಲೆಯಲ್ಲಿ ಈ ಟಿಕೆಟ್ ಗೆ ತಡೆ ಹಿಡಿಯಲಾಗಿದೆ. ಇಲ್ಲಿ ಬಿ. ನಂಜಮರಿಯವರಿಗೆ ಟಿಕೆಟ್ ನೀಡಲಾಗಿತ್ತು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications