ಐಟಿ ದಾಳಿ ರಾಜ್ಯಸಭೆ ಚುನಾವಣೆ ರಾಜಕೀಯ : ಅಹಮದ್ ಪಟೇಲ್

ಬೆಂಗಳೂರು, ಆ.2 : 'ಒಂದೇ ಒಂದು ರಾಜ್ಯಸಭಾ ಸ್ಥಾನವನ್ನು ಗೆಲ್ಲಲು ಬಿಜೆಪಿ ಹಿಂದೆದೂ ಕಂಡರಿಯದ ರಾಜಕೀಯ ಮಾಡುತ್ತಿದೆ ಎಂದು' ಹಿರಿಯ ಕಾಂಗ್ರೆಸ್ ನಾಯಕ ಅಹಮದ್ ಪಟೇಲ್ ಪ್ರತಿಕ್ರಿಯೆ ನೀಡಿದ್ದಾರೆ.

ಗುಜರಾತ್ ಕಾಂಗ್ರೆಸ್ ಶಾಸಕರು ನೆಲೆಸಿರುವ ಬೆಂಗಳೂರು ಹೊರವಲಯದ ಈಗಲ್ ಟನ್ ಗಾಲ್ಫ್ ರೆಸಾರ್ಟ್ ಮೇಲೆ ಬುಧವಾರ ಬೆಳಗ್ಗೆ ಐಟಿ ದಾಳಿ ನಡೆದಿದೆ. ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ಮುಖಂಡ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆಯೂ ದಾಳಿ ಮಾಡಲಾಗಿದೆ.

Congress reaction on IT raid on Eagleton Golf Resort where Cong Gujarat MLAs are staying

'ಬಿಜೆಪಿ ಒಂದೇ ಒಂದು ರಾಜ್ಯಸಭೆ ಸ್ಥಾನವನ್ನು ಗೆಲ್ಲಲು ಹಿಂದೆ ಕಂಡರಿಯದ ರೀತಿಯ ರಾಜಕೀಯ ಮಾಡುತ್ತಿದೆ' ಎಂದು ಅಹಮದ್ ಪಟೇಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ ಮತ್ತು ಟ್ವಿಟ್ ಮಾಡಿದ್ದಾರೆ.

ರಾಜ್ಯಸಭೆ ಚುನಾವಣೆ ಹಿನ್ನಲೆಯಲ್ಲಿ ಗುಜರಾತ್ ಕಾಂಗ್ರೆಸ್ ಶಾಸಕರು ಬೆಂಗಳೂರು ಹೊರವಲಯದ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದು, ರೆಸಾರ್ಟ್ ಮೇಲೆ ಬುಧವಾರ ಬೆಳಗ್ಗೆ ಐಟಿ ದಾಳಿ ನಡೆದಿದೆ.

ಕರ್ನಾಟಕದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಕನಕಪುರ ಮತ್ತು ಬೆಂಗಳೂರಿನ ಸದಾಶಿವನಗರದ ನಿವಾಸದ ಮೇಲೆಯೂ ಐಟಿ ದಾಳಿ ನಡೆಸಲಾಗಿದೆ. ಸುಮಾರು 20ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಈ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+