Budget 2023: 23 ಸಾವಿರ ಕೋಟಿಯ ಭದ್ರಾ ಮೇಲ್ದಂಡೆ ಯೋಜನೆಗೆ ಕೇವಲ 5,300 ಕೋಟಿ ನೀಡಿದ ಕೇಂದ್ರ
23 ಸಾವಿರ ಕೋಟಿ ಅಗತ್ಯವಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇವಲ 5,300 ಕೋಟಿ ನೀಡಿ ಮೂಗಿಗೆ ತುಪ್ಪ ಸವರಿದ್ದೇಕೆ..? ಎಂದು ಕರ್ನಾಟಕ ಕಾಮಗ್ರೆಸ್ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.
ಬೆಂಗಳೂರು, ಫೆಬ್ರವರಿ. 01: ಕೇಂದ್ರ ಬಜೆಟ್ ಮಂಡನೆ ಬಗ್ಗೆ ಕರ್ನಾಟಕ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಈ ಬಜೆಟ್ ಸೀಡ್ಲೇಡ್ ಕಡಲೆಕಾಯಿ ಎಂದು ವ್ಯಂಗ್ಯವಾಡಿದೆ.
ಹಣಕಾಸು ಸಚಿವರ ನಿರ್ಮಲಾ ಸೀತಾರಾಮನ್ ಬುಧವಾರ ಕೇಂದ್ರ ಬಜೆಟ್ 2023ರನ್ನು ಮಂಡಿಸಿದ್ದು, ರಾಜ್ಯಕ್ಕೂ ಹಲವು ಯೋಜನೆಗಳು ಮತ್ತು ಅನುದಾನಗಳನ್ನು ಬಿಡುಗಡೆ ಮಾಡಿದ್ದಾರೆ. ಇವಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಕೇಂದ್ರ ಸರ್ಕಾರ ನಿರೀಕ್ಷೆ ಹುಸಿ ಮಾಡಿದೆ ಎಂದಿದೆ.
"ಕೇಂದ್ರ ಸರಕಾರದ ಬಜೆಟ್ "ಸೀಡ್ಲೆಸ್ ಕಡಲೆಕಾಯಿ" ಇದ್ದಂತಿದೆ!. 20 ಲಕ್ಷ ಕೋಟಿ ಪ್ಯಾಕೇಜ್' ಎಂಬ ಬಿಳಿಕಾಗೆ ತೋರಿಸಿದಂತೆಯೇ ಈ ಬಜೆಟ್ ಕೂಡ! ಉದ್ಯೋಗಕ್ಕಾಗಿ ಪರಿತಪಿಸುತ್ತಿರುವ ಯುವ ಸಮುದಾಯಕ್ಕೆ ಯಾವುದೇ ಭರವಸೆ ಇಲ್ಲ. ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮವಿಲ್ಲ. ಜನರ ಸಂಕಷ್ಟ ಕಡಿಮೆಯಾಗಬಹುದೆಂಬ ನಿರೀಕ್ಷೆ ಹುಸಿ ಮಾಡಿದೆ ಕೇಂದ್ರ ಸರ್ಕಾರ" ಎಂದು ಹಲವು ಆರೋಪಗಳನ್ನು ಮಾಡಿ ಕಿಡಿ ಕಾರಿದೆ.

"ಡಬಲ್ ಇಂಜಿನ್ ಸರ್ಕಾರ ಎಂದುಕೊಳ್ಳುವ ಕರ್ನಾಟಕ ಬಿಜೆಪಿ ಉತ್ತರಿಸಬೇಕು. ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಏನೂ ಸಿಗದಿರುವುದೇಕೆ? 23 ಸಾವಿರ ಕೋಟಿ ಅಗತ್ಯವಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇವಲ 5,300 ಕೋಟಿ ನೀಡಿ ಮೂಗಿಗೆ ತುಪ್ಪ ಸವರಿದ್ದೇಕೆ..?. ಮೇಕೆದಾಟು, ಮಹದಾಯಿ ಯೋಜನೆಗಳ ಬಗ್ಗೆ ಚಕಾರ ಎತ್ತದಿರುವುದೇಕೆ..?" ಎಂದು ಸರಣಿ ಪ್ರಶ್ನೆಗಳನ್ನು ಹಾಕಿದೆ.
ಕೇಂದ್ರ ಸರಕಾರದ ಬಜೆಟ್ "ಸೀಡ್ಲೆಸ್ ಕಡಲೆಕಾಯಿ" ಇದ್ದಂತಿದೆ!
— Karnataka Congress (@INCKarnataka) February 1, 2023
'20 ಲಕ್ಷ ಕೋಟಿ ಪ್ಯಾಕೇಜ್' ಎಂಬ ಬಿಳಿಕಾಗೆ ತೋರಿಸಿದಂತೆಯೇ ಈ ಬಜೆಟ್ ಕೂಡ!
ಉದ್ಯೋಗಕ್ಕಾಗಿ ಪರಿತಪಿಸುತ್ತಿರುವ ಯುವಸಮುದಾಯಕ್ಕೆ ಯಾವುದೇ ಭರವಸೆ ಇಲ್ಲ.
ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮವಿಲ್ಲ.
ಜನರ ಸಂಕಷ್ಟ ಕಡಿಮೆಯಾಗಬಹುದೆಂಬ ನಿರೀಕ್ಷೆ ಹುಸಿ ಮಾಡಿದೆ ಕೇಂದ್ರ ಸರ್ಕಾರ.
ಮುಂದುವರಿದು, "ಸಬ್ ಅರ್ಬನ್ ರೈಲು ಕಾಮಗಾರಿಗೆ ನಿಗದಿಪಡಿಸಿದ್ದ ಕಾಲಮಿತಿ ಮುಗಿಯುತ್ತಿದೆ. 18 ಸಾವಿರ ಕೋಟಿಯ ಯೋಜನೆಗೆ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಹಣ ನೀಡಿದ್ದು ಕರ್ನಾಟಕದೆಡೆಗೆ ಕೇಂದ್ರ ಸರ್ಕಾರಕ್ಕಿರುವ ತಾತ್ಸಾರ ಮನೋಭಾವಕ್ಕೆ ನಿದರ್ಶನ. ನಿಗದಿತ ಕಾಲಮಿತಿಯಲ್ಲಿ ಖಂಡಿತವಾಗಿಯೂ ಪೂರ್ಣಗೊಳಿಸುವ ಇರಾದೆ ಬಿಜೆಪಿಗಿಲ್ಲ" ಎಂದು ಕಿಡಿಕಾರಿದೆ.
ಕರ್ನಾಟಕ ರೈತರ ಆತ್ಮಹತ್ಯೆಯಲ್ಲಿ 2ನೇ ಸ್ಥಾನದಲ್ಲಿದೆ.
— Karnataka Congress (@INCKarnataka) February 1, 2023
ರಾಜ್ಯದ ರೈತರಿಗೆ ಬಜೆಟ್ನಲ್ಲಿ ಸಿಕ್ಕಿದ್ದೇನು @BJP4Karnataka?
ಕೃಷಿ ಡಿಜಿಟಲೀಕರಣ ಎಂಬ ಆಕರ್ಷಕ ಪದವನ್ನು ಪರಿಚಯಿಸಿದಾಕ್ಷಣ ರೈತರ ಸಮಸ್ಯೆ ಬಗೆಹರಿಯದು.
ಬೆಳೆಯನ್ನು ಡಿಜಿಟಲ್ ತಾಂತ್ರಿಕತೆಯಲ್ಲಿ ಬೆಳೆಯಲಾಗದು ಎಂಬ ವಾಸ್ತವು ಪ್ರಧಾನಿಗೆ ತಿಳಿದಂತಿಲ್ಲ!#Budget2023
ರಾಜ್ಯದ ರೈತರಿಗೆ ಬಜೆಟ್ನಲ್ಲಿ ಯಾವುದೇ ಕೊಡುಗೆಯಿಲ್ಲ ಎಂದು ಆರೋಪಿಸಿರುವ ಕಾಗ್ರೆಸ್, "ಕರ್ನಾಟಕ ರೈತರ ಆತ್ಮಹತ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ರಾಜ್ಯದ ರೈತರಿಗೆ ಬಜೆಟ್ನಲ್ಲಿ ಸಿಕ್ಕಿದ್ದೇನು ಬಿಜೆಪಿ..? ಕೃಷಿ ಡಿಜಿಟಲೀಕರಣ ಎಂಬ ಆಕರ್ಷಕ ಪದವನ್ನು ಪರಿಚಯಿಸಿದಾಕ್ಷಣ ರೈತರ ಸಮಸ್ಯೆ ಬಗೆಹರಿಯದು. ಬೆಳೆಯನ್ನು ಡಿಜಿಟಲ್ ತಾಂತ್ರಿಕತೆಯಲ್ಲಿ ಬೆಳೆಯಲಾಗದು ಎಂಬ ವಾಸ್ತವು ಪ್ರಧಾನಿಗೆ ತಿಳಿದಂತಿಲ್ಲ..!" ಎಂದು ಟೀಕಿಸಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications