‘ವಿಜಯೇಂದ್ರ ಒಬ್ಬನೇ ಎಲ್ಲವೂ ಅಲ್ಲ - ಈಶ್ವರಪ್ಪ’
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಕರ್ನಾಟಕ ಬಿಜೆಪಿ ಘಟಕಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದ ನಂತರ, ಬಿಜೆಪಿ ಮತ್ತು ಕಾಂಗ್ರೆಸ್ ಕಿತ್ತಾಟವೂ ತಾರಕಕ್ಕೆ ಏರಿದೆ. ಅದರಲ್ಲೂ, ಬಿಜೆಪಿ ಆಂತರಿಕ ಕಿತ್ತಾಟದ ವಿಚಾರವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್ ಹೊಸ ಬಾಂಬ್ ಸಿಡಿಸಿದೆ. ಹಾಗೇ ಈ ವಿಚಾರದಲ್ಲಿ ಈಶ್ವರಪ್ಪ ಹೆಸರನ್ನು ಮತ್ತೆ ಮತ್ತೆ ಎಳೆದು ತರುತ್ತಿದೆ ಕರ್ನಾಟಕದ 'ಕೈ' ಪಾಳಯ!
ಅಷ್ಟಕ್ಕೂ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕರ್ನಾಟಕ ಕಾಂಗ್ರೆಸ್ ಹಲವು ಆರೋಪ ಮಾಡಿದೆ. ಬಿಜೆಪಿ ಕರ್ನಾಟಕ ಘಟಕಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದ ನಂತರ, ಪಕ್ಷದ ಒಳಗೆ ಅಸಮಾಧಾನ ಭುಗಿಲೆದ್ದಿದೆ ಅಂತ ಹೇಳುತ್ತಿದೆ ಕರ್ನಾಟಕ ಕಾಂಗ್ರೆಸ್. ಹೀಗೆ ತನ್ನ ಆರೋಪದ ಸರಪಳಿಯ ಮುಂದುವರಿದ ಭಾಗವಾಗಿ ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಯಾವೆಲ್ಲಾ ನಾಯಕರು ಹೇಗೆ ಪ್ರತಿಕ್ರಿಯೆ ನೀಡಿದ್ದಾರೆ? ಅನ್ನೋ ವಿಚಾರ ಇಟ್ಟುಕೊಂಡು ಹೊಸ ಅಸ್ತ್ರ ಹೂಡಿದೆ ಕಾಂಗ್ರೆಸ್.

'ವಿಜಯೇಂದ್ರ ಒಬ್ಬನೇ ಎಲ್ಲವೂ ಅಲ್ಲ'
ಕರ್ನಾಟಕ ಕಾಂಗ್ರೆಸ್ ಇದೀಗ ಬಿಜೆಪಿಯ ವಿರುದ್ಧ ಮಾಡಿದ ಟ್ವೀಟ್ನಲ್ಲಿ, '◆ವಿಜಯೇಂದ್ರ ಒಬ್ಬನೇ ಎಲ್ಲವೂ ಅಲ್ಲ - ಈಶ್ವರಪ್ಪ ◆ವಿಜಯೇಂದ್ರ 3 ವರ್ಷ ಮಾತ್ರ ಅಧ್ಯಕ್ಷ - ಪೇಶ್ವೆ ಜೋಷಿಗಳು (ಕುಮಾರಸ್ವಾಮಿಯವರು ಕೊಟ್ಟ ಹೆಸರು!) ◆ವಿಜಯೇಂದ್ರರ ಪದಗ್ರಹಣಕ್ಕೆ ನಾನು ಹೋಗುವುದಿಲ್ಲ - ಸಿ. ಟಿ ರವಿ ◆ - ವಿ. ಸೋಮಣ್ಣ ◆ವಿಜಯೇಂದ್ರ ಬಗ್ಗೆ ನೋ ಕಾಮೆಂಟ್ಸ್ - ಬೆಲ್ಲದ್ ◆ @blsanthosh, @BasanagoudaBJP ಗಾಢ ಮೌನ. ಇಷ್ಟು ದಿನ #FamilyJanataParty ಒಡೆದ ಮನೆಯಾಗಿತ್ತು, ಇನ್ಮುಂದೆ ಯುದ್ಧಕಣವಾಗುವುದು ನಿಶ್ಚಿತ, ಸಂತೋಷ ಕೂಟ ರಣವಿಳ್ಯ ನೀಡಲು ತಾಯರಾಗುತ್ತಿದೆ!' ಎಂದು ಹೊಸ ಆರೋಪ ಮಾಡಿದೆ.
◆ವಿಜಯೇಂದ್ರ ಒಬ್ಬನೇ ಎಲ್ಲವೂ ಅಲ್ಲ - ಈಶ್ವರಪ್ಪ
— Karnataka Congress (@INCKarnataka) November 14, 2023
◆ವಿಜಯೇಂದ್ರ 3 ವರ್ಷ ಮಾತ್ರ ಅಧ್ಯಕ್ಷ - ಪೇಶ್ವೆ ಜೋಷಿಗಳು (ಕುಮಾರಸ್ವಾಮಿಯವರು ಕೊಟ್ಟ ಹೆಸರು!)
◆ವಿಜಯೇಂದ್ರರ ಪದಗ್ರಹಣಕ್ಕೆ ನಾನು ಹೋಗುವುದಿಲ್ಲ - ಸಿ. ಟಿ ರವಿ
◆................... - ವಿ. ಸೋಮಣ್ಣ
◆ವಿಜಯೇಂದ್ರ ಬಗ್ಗೆ ನೋ ಕಾಮೆಂಟ್ಸ್ - ಬೆಲ್ಲದ್
◆ @blsanthosh ,…
'ಯಡಿಯೂರಪ್ಪನವರ ಮಗ ನಿಮ್ಮ ಮಗನ..'
ನಿನ್ನೆ ಕೂಡ ಕಾಂಗ್ರೆಸ್ ಈ ಕುರಿತು ಟ್ವೀಟ್ ಮಾಡಿ ಈಶ್ವರಪ್ಪ ಅವರ ಹೆಸರು ಪ್ರಸ್ತಾಪಿಸಿತ್ತು, 'ರಿಟೈರ್ಡ್ ರಾಜಾಕಾರಿಣಿ @ikseshwarappa ಅವರೇ, ಇದೆಂತಹಾ ದುಸ್ಥಿತಿ ನಿಮ್ಮದು, ಬಿಜೆಪಿ ನಿಮ್ಮ ಮಂತ್ರಿಗಿರಿ ಕಿತ್ತುಕೊಂಡಿತು, ನಿಮ್ಮನ್ನು ಸಿಎಂ ಮಾಡದೆ ವಂಚಿಸಿತು, ಕೊನೆಗೆ ಟಿಕೆಟ್ ನಿರಾಕರಿಸಿ ರಾಜಕೀಯ ಭವಿಷ್ಯವನ್ನೂ ಕಸಿಯಿತು. ಈಗ ಯಡಿಯೂರಪ್ಪನವರ ಮಗ ನಿಮ್ಮ ಮಗನ ರಾಜಕೀಯ ಭವಿಷ್ಯಕ್ಕೂ ಕಲ್ಲು ಹಾಕುವುದು ಖಚಿತ. ಬಿಜೆಪಿ ಕಾರ್ಯಕ್ರಮದಲ್ಲಿ ನಿಮಗೊಂದು ಕುರ್ಚಿಯೂ ಇಲ್ಲ ಈಗ, ನಿಮ್ಮ ವ್ಯರ್ಥಪ್ರಲಾಪದ ಬಗ್ಗೆ ನಮಗೆ ಮರುಕವಿದೆ!' ಅಂತಾ ಹೇಳಿತ್ತು. ಈಗ ಮತ್ತೊಂದು ಗಂಭೀರ ಆರೋಪ ಮಾಡಿದೆ.
ರಿಟೈರ್ಡ್ ರಾಜಾಕಾರಿಣಿ @ikseshwarappa ಅವರೇ,
— Karnataka Congress (@INCKarnataka) November 13, 2023
ಇದೆಂತಹಾ ದುಸ್ಥಿತಿ ನಿಮ್ಮದು, ಬಿಜೆಪಿ ನಿಮ್ಮ ಮಂತ್ರಿಗಿರಿ ಕಿತ್ತುಕೊಂಡಿತು, ನಿಮ್ಮನ್ನು ಸಿಎಂ ಮಾಡದೆ ವಂಚಿಸಿತು, ಕೊನೆಗೆ ಟಿಕೆಟ್ ನಿರಾಕರಿಸಿ ರಾಜಕೀಯ ಭವಿಷ್ಯವನ್ನೂ ಕಸಿಯಿತು.
ಈಗ ಯಡಿಯೂರಪ್ಪನವರ ಮಗ ನಿಮ್ಮ ಮಗನ ರಾಜಕೀಯ ಭವಿಷ್ಯಕ್ಕೂ ಕಲ್ಲು ಹಾಕುವುದು ಖಚಿತ.
ಬಿಜೆಪಿ ಕಾರ್ಯಕ್ರಮದಲ್ಲಿ… pic.twitter.com/EzZwQfvKc7
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications