ಸೋತವರು ಸಂಸತ್ ಚುನಾವಣೆಗೆ ಸಿದ್ಧರಾಗಿ: ಪರಮೇಶ್ವರ್‌ ಸಲಹೆ

Recommended Video

      ಕರ್ನಾಟಕ ವಿಧಾನಸಭೆ ಚುನಾವಣೆ 2018ರಲ್ಲಿ ಸೋತ ಕಾಂಗ್ರೆಸ್ ಶಾಸಕರಿಗೆ ಜಿ ಪರಮೇಶ್ವರ್ ಸಲಹೆ | Oneindia Kannada

      ಬೆಂಗಳೂರು, ಜು.9: ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ಕಾಂಗ್ರೆಸ್‌ ಶಾಸಕರೊಂದಿಗೆ ಲೋಕಸಭಾ ಚುನಾವಣೆ ಸಂಬಂಧ ಸೋಮವಾರ ಶಾಸಕಭವನ-2ರಲ್ಲಿ ಸಭೆ ನಡೆಸಲಾಯಿತು.

      ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಪರಾಭವಗೊಂಡ ಶಾಸಕರಿಗೆ ಧೈರ್ಯ ತುಂಬಿದರು. ರಾಜಕೀಯ ಬೆಳವಣಿಗೆಯಿಂದಾಗಿ ಗೆಲ್ಲುವ ಶಾಸಕರು ಸಹ ಕಡಿಮೆ ಅಂತರದಲ್ಲಿ ಪರಾಭವಗೊಂಡಿದ್ದಾರೆ.

      ಹಾಗೆಂದು ನಿರಾಶಭಾವ ತಳೆಯಬೇಡಿ. ಪಕ್ಷ‌ ಹಾಗೂ ಕಾರ್ಯಕರ್ತರು ಸದಾ ನಿಮ್ಮೊಂದಿಗಿದ್ದಾರೆ ಎಂದು ಆತ್ಮವಿಶ್ವಾಸ ತುಂಬಿದರು.ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ‌ನೇತೃತ್ವದಲ್ಲಿ‌ ಈ ಬಾರಿ ಲೋಕಸಭಾ ಚುನಾವಣೆ ಎದುರಿಸಲಿದ್ದೇವೆ.

       Congress should fight back in parliament poll: DCM Parameshwar

      ಹೀಗಾಗಿ, ಪ್ರತಿಯೊಬ್ಬರು ತಮ್ಮ ಕ್ಷೇತ್ರದಲ್ಲಿ ಹೆಚ್ಚು ಸಕ್ರಿಯವಾಗಿ ಕೆಲಸ ಮಾಡುವಂತೆ ಸೂಚಿಸಿದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ‌ ಕಾಂಗ್ರೆಸ್ ಸದೃಢಗೊಂಡು, ವಿಧಾನಸಭಾ ಚುನಾವಣೆಯಲ್ಲಿ ಆದ ಅಷ್ಟೂ ನಷ್ಟವನ್ನು ತುಂಬಬೇಕಿದೆ. ಈ ನಿಟ್ಟಿನಲ್ಲಿ‌ ಎಲ್ಲರೂ ಸಕ್ರಿಯರಾಗುವಂತೆ ಸಲಹೆ‌ ನೀಡಿದರು.

       Congress should fight back in parliament poll: DCM Parameshwar

      ಸಭೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ‌ ನಿಯೋಜಿತ ಅಧ್ಯಕ್ಷ ದಿನೇಶ್ ಗುಂಡೂರಾವ್, ನಿಯೋಜಿತ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಕಾಗೋಡು ತಿಮ್ಮಪ್ಪ ಉಪಸ್ಥಿತರಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+