ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋತವರು ಸಂಸತ್ ಚುನಾವಣೆಗೆ ಸಿದ್ಧರಾಗಿ: ಪರಮೇಶ್ವರ್‌ ಸಲಹೆ

By Nayana
|
Google Oneindia Kannada News

Recommended Video

ಕರ್ನಾಟಕ ವಿಧಾನಸಭೆ ಚುನಾವಣೆ 2018ರಲ್ಲಿ ಸೋತ ಕಾಂಗ್ರೆಸ್ ಶಾಸಕರಿಗೆ ಜಿ ಪರಮೇಶ್ವರ್ ಸಲಹೆ | Oneindia Kannada

ಬೆಂಗಳೂರು, ಜು.9: ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ಕಾಂಗ್ರೆಸ್‌ ಶಾಸಕರೊಂದಿಗೆ ಲೋಕಸಭಾ ಚುನಾವಣೆ ಸಂಬಂಧ ಸೋಮವಾರ ಶಾಸಕಭವನ-2ರಲ್ಲಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಪರಾಭವಗೊಂಡ ಶಾಸಕರಿಗೆ ಧೈರ್ಯ ತುಂಬಿದರು. ರಾಜಕೀಯ ಬೆಳವಣಿಗೆಯಿಂದಾಗಿ ಗೆಲ್ಲುವ ಶಾಸಕರು ಸಹ ಕಡಿಮೆ ಅಂತರದಲ್ಲಿ ಪರಾಭವಗೊಂಡಿದ್ದಾರೆ.

ಕಾಂಗ್ರೆಸ್‌ ಸಚಿವರ ಬಾಯಿಗೆ ಬೀಗ: ಹೈಕಮಾಂಡ್‌ ಸಂದೇಶ ರವಾನಿಸಿದ ಪರಮೇಶ್ವರ್ಕಾಂಗ್ರೆಸ್‌ ಸಚಿವರ ಬಾಯಿಗೆ ಬೀಗ: ಹೈಕಮಾಂಡ್‌ ಸಂದೇಶ ರವಾನಿಸಿದ ಪರಮೇಶ್ವರ್

ಹಾಗೆಂದು ನಿರಾಶಭಾವ ತಳೆಯಬೇಡಿ. ಪಕ್ಷ‌ ಹಾಗೂ ಕಾರ್ಯಕರ್ತರು ಸದಾ ನಿಮ್ಮೊಂದಿಗಿದ್ದಾರೆ ಎಂದು ಆತ್ಮವಿಶ್ವಾಸ ತುಂಬಿದರು.ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ‌ನೇತೃತ್ವದಲ್ಲಿ‌ ಈ ಬಾರಿ ಲೋಕಸಭಾ ಚುನಾವಣೆ ಎದುರಿಸಲಿದ್ದೇವೆ.

 Congress should fight back in parliament poll: DCM Parameshwar

ಹೀಗಾಗಿ, ಪ್ರತಿಯೊಬ್ಬರು ತಮ್ಮ ಕ್ಷೇತ್ರದಲ್ಲಿ ಹೆಚ್ಚು ಸಕ್ರಿಯವಾಗಿ ಕೆಲಸ ಮಾಡುವಂತೆ ಸೂಚಿಸಿದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ‌ ಕಾಂಗ್ರೆಸ್ ಸದೃಢಗೊಂಡು, ವಿಧಾನಸಭಾ ಚುನಾವಣೆಯಲ್ಲಿ ಆದ ಅಷ್ಟೂ ನಷ್ಟವನ್ನು ತುಂಬಬೇಕಿದೆ. ಈ ನಿಟ್ಟಿನಲ್ಲಿ‌ ಎಲ್ಲರೂ ಸಕ್ರಿಯರಾಗುವಂತೆ ಸಲಹೆ‌ ನೀಡಿದರು.

 Congress should fight back in parliament poll: DCM Parameshwar

ಸಭೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ‌ ನಿಯೋಜಿತ ಅಧ್ಯಕ್ಷ ದಿನೇಶ್ ಗುಂಡೂರಾವ್, ನಿಯೋಜಿತ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಕಾಗೋಡು ತಿಮ್ಮಪ್ಪ ಉಪಸ್ಥಿತರಿದ್ದರು.

English summary
Deputy chief minister Dr. G. Parameshwar insisted congress defeated candidates to be prepared for upcoming parliament elections and should win highest number of constituencies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X