Get Updates
Get notified of breaking news, exclusive insights, and must-see stories!

ಆಪರೇಷನ್‌ ಹಸ್ತ; ಮುಂದಿನ ಬಾರಿ ಪದ್ಮನಾಭನಗರದಲ್ಲಿ ಕಾಂಗ್ರೆಸ್‌ ಗೆಲ್ಲಬೇಕು: ಡಿ ಕೆ ಶಿವಕುಮಾರ್‌

ಬೆಂಗಳೂರು,ಸೆಪ್ಟೆಂಬರ್‌ 15: 2028 ರಲ್ಲಿ ಪದ್ಮನಾಭನಗರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆಯಾಗುತ್ತಾರೆ. ಮುಂದಿನ ಚುನಾವಣೆಯಲ್ಲಿ ಪದ್ಮನಾಭನಗರದಲ್ಲಿ ನೀವು ಕೊಟ್ಟ ಅಭ್ಯರ್ಥಿ ಗೆಲ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಈ ಕುರುತು ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಶುಕ್ರವಾರ ನಡೆದ ಪದ್ಮನಾಭನಗರದ ವಿವಿಧ ಪಕ್ಷಗಳ ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿವಿಧ ಪಕ್ಷಗಳ ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ವಿಶ್ವ ಪ್ರಜಾಪ್ರಭುತ್ವ ದಿನ ಸಾಕ್ಷಿಯಾಗಿದೆ. ಇಂತಹ ಪವಿತ್ರವಾದ ದಿನದಂದು ಸಂವಿಧಾನದ ಪೀಠಿಕೆ ಓದಿ ನಾನು ಮತ್ತು ರಾಮಲಿಂಗಾರೆಡ್ಡಿ ಅವರು ಈ ಶುಭ ಕಾರ್ಯಕ್ಕೆ ಬಂದಿದ್ದೇವೆ.

Congress Should Win In Padmanabhanagar Next Time Said DK Shivakumar

ಸಂಘಟನೆ ಮಾಡುವುದು, ಪಕ್ಷ ಕಟ್ಟುವುದು ಅತ್ಯಂತ ಕಷ್ಟದ ಕೆಲಸ ಎಂಬುದು ನನಗೆ ಅರಿವಿಗೆ ಬಂದಿದೆ. ಇಂದು ಪಕ್ಷ ಸೇರಿದವರು ಬೆಂಗಳೂರಿನಲ್ಲಿ ಹಾಗೂ ಪದ್ಮನಾಭನಗರದಲ್ಲಿ ದೊಡ್ಡ ಸಂಘಟನ ಶಕ್ತಿಗಳು. ಸೂಕ್ತ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಸೇರಿರುವ ನಿಮ್ಮ ನಿರ್ಧಾರ ಸರಿಯಾಗಿದೆ. ಇದು ಭಾಗ್ಯ, ಇದು ಭಾಗ್ಯ ಇದು ಭಾಗ್ಯವಯ್ಯ ಪದುಮನಾಭನ ಪಾದ ಭಜನೆ ಪರಮಸುಖವಯ್ಯಾ ಎನ್ನುವ ಪುರಂದರದಾಸರ ಕೀರ್ತನೆಯಂತೆ ಪದ್ಮನಾಭನಗರದ ನಾಯಕರನ್ನು ಅಪ್ಪಿಕೊಳ್ಳುವ ಭಾಗ್ಯ ಸಿಕ್ಕಿದ್ದು ನಮ್ಮ ಪುಣ್ಯ ಎಂದು ಹೇಳಿದರು.

ತಮ್ಮ ಸರ್ಕಾರ ಉರುಳಿಸಿದವರನ್ನೇ ಜೊತೆಯಲ್ಲೇ ಕೂರಿಸಿಕೊಂಡು ಈಗಿನ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ಹಾಗೂ ಅವರನ್ನು ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಅವರು ಇಳಿದಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನವರು ಮೈತ್ರಿ ಆದರೂ ಮಾಡಿಕೊಳ್ಳಲಿ, ಏನನ್ನಾದರೂ ಜೋಡಿಸಿಕೊಳ್ಳಲಿ, ಅದು ನಮಗೆ ಸಂಬಂಧಪಟ್ಟಿದ್ದಲ್ಲ.

ನಾನು ಅನೇಕ ಜೆಡಿಎಸ್ ನಾಯಕರು ಮತ್ತು ಕಾರ್ಯಕರ್ತರನ್ನು ಮೈತ್ರಿ ಬಗ್ಗೆ ಕೇಳಿದೆ. ಅದಕ್ಕೆ ಅವರುಗಳು "ನಮ್ಮ ಸರ್ಕಾರ ಬೀಳಿಸಿದವರ ಹತ್ತಿರವೇ ಕುಮಾರಸ್ವಾಮಿ ಅವರಿಗೆ ಮತ್ತೆ ಏಕೆ ನೆಂಟಸ್ತನ? ಹಾಗಾದರೆ ಪಕ್ಷದ ನೀತಿ ಏನು? ನಾವು ಕಾರ್ಯಕರ್ತರಿಗೆ ಏನು ಹೇಳುವುದು ಎಂದು ಕೇಳುತ್ತಿದ್ದಾರೆ, ನಮಗೆ ಉತ್ತರ ನೀಡಲು ಆಗುತ್ತಿಲ್ಲ" ಎಂದು ಹೇಳುತ್ತಿದ್ದಾರೆ. ವಿರೋಧ ಪಕ್ಷಗಳಿಗೆ ನಾವು ಉತ್ತರ ಕೊಡುವುದಿಲ್ಲ, ಅವರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉತ್ತರ ಕೊಡುತ್ತಾರೆ.

ಚುನಾವಣೆ ಮುಗಿದು 110 ದಿನಗಳಾದರೂ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡದ ದುಸ್ಥಿತಿಗೆ ಬಿಜೆಪಿ ಪಕ್ಷ ಬಂದಿದೆ. ಅವರವರ ಅನುಕೂಲಕ್ಕೆ ಬಿಜೆಪಿ- ಜೆಡಿಎಸ್ ರಾಜಕಾರಣ ಮಾಡುತ್ತಿವೆ. ಯಾರ ವಯಸ್ಸೂ ಕಡಿಮೆಯಾಗುವುದಿಲ್ಲ, ದೊಡ್ಡ- ದೊಡ್ಡ ನಾಯಕರು ಮೇಲೆಯೇ ಕುಳಿತಿರುತ್ತಾರೆ. ಕಾರ್ಯಕರ್ತರು ಹಾಗೂ ಮುಖಂಡರುಗಳು ನೆಲದಲ್ಲೇ ಕುಳಿತಿರುತ್ತಾರೆ.

ಈ ಭಾರತ್ ಜೋಡೋ ಸಭಾಂಗಣದಲ್ಲಿ ಎಲ್ಲಾ ಮನಸ್ಸುಗಳು ಒಂದಾಗುತ್ತಿವೆ. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ಕಾಂಗ್ರೆಸ್ ಪಕ್ಷ ನಿಮ್ಮನ್ನು ನಡೆಸಿಕೊಳ್ಳುತ್ತದೆ. ತಾಳ್ಮೆಯಿಂದ ಇದ್ದರೆ ನಿಮಗೂ ಒಂದಲ್ಲ ಒಂದು ದಿನ ಸೂಕ್ತ ಸ್ಥಾನಮಾನ ದೊರೆಯುತ್ತದೆ. ಸಾಕಷ್ಟು ಸಮಿತಿಗಳು, ನಿಗಮ ಮಂಡಲಿಗಳು ಇದ್ದಾವೆ, ಅವಸರ ಬೇಡ ಎಂದು ಕಿವಿ ಮಾತು ಹೇಳಿದರು.

ರಾಮಲಿಂಗಾರೆಡ್ಡಿ ಅವರು ಹಾಗೂ ನಾವು ಪದ್ಮನಾಭನಗರದ ನಾಯಕರ ಜೊತೆಗಿದ್ದೇವೆ. ಪಕ್ಷದ ಹಳಬರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಬೇಕು, ಪದ್ಮನಾಭನಗರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲದೇ ಇರಬಹುದು ಆದರೆ ಕಾರ್ಯಕರ್ತರು ಪಕ್ಷದ ಭಾವುಟ ಹಿಡಿದಿದ್ದಾರೆ "ಹೆಣ, ಪಲ್ಲಕ್ಕಿ ಹೊತ್ತಿದ್ದಾರೆ" ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ.

ಕಾಂಗ್ರೆಸ್ ಪಕ್ಷ ಸೇರುವವರನ್ನು ತಡೆದರು, ಅಡ್ಡಿಪಡಿಸಿದರು. ಈಗ ಬಿಜೆಪಿಗೆ ಕಾರ್ಯಕರ್ತರು ನೆನಪಾಗುತ್ತಿದ್ದಾರೆ. ಅಶೋಕಣ್ಣನಿಗೆ ಅನೇಕ ಕ್ಷೇತ್ರಗಳು ಇದ್ದವು ಅಲ್ಲೆ ಎಲ್ಲಾದರೂ ನಿಲ್ಲಬಹುದಿತ್ತು, ಯಾಕೋ ಇಲ್ಲೇ ಬಂದು ನಿಂತು ನಿಷ್ಟಾವಂತ ಕಾರ್ಯಕರ್ತರ ಬೆಳವಣಿಗೆಗೆ ಅಡ್ಡಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ನೋಡೋಣ. ಕನಕಪುರದಿಂದ ಬಂದು ನೆಲೆ ನಿಂತಿರುವ 35 ಸಾವಿರ ಮತದಾರರು ಕ್ಷೇತ್ರದಲ್ಲಿ ಇದ್ದಾರೆ. ನಾವೆಲ್ಲಾ ಒಟ್ಟಿಗೆ ಸೇರೋಣ, ಚರ್ಚೆ ಮಾಡೋಣ, ಕೆಲಸ ಮಾಡೋಣ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+