Get Updates
Get notified of breaking news, exclusive insights, and must-see stories!

BY Vijayendraa: ಬಿ ವೈ ವಿಜಯೇಂದ್ರ ಪದಗ್ರಹಣಕ್ಕೆ ಗೈರಾದವರ ಪಟ್ಟಿ! "ಸಂತೋಷ ಕೂಟ"ದ ಸಂಖ್ಯೆ ಹೆಚ್ಚಾಗುತ್ತಿದೆ

ಬೆಂಗಳೂರು, ನವೆಂಬರ್‌ 16: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಪುತ್ರ, ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ನೇಮಕವಾಗಿದ್ದಾರೆ. ಬುಧವಾರ ಪಕ್ಷದ ಕೇಂದ್ರ ಕಚೇರಿಯಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಮಕ್ಕೆ ಬಿಜೆಪಿ ಹಲವು ಹಿರಿಯ ನಾಯಕರು ಮತ್ತು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್​ ಸಂತೋಷ್​ ಬಣದ ಹಲವು ನಾಯಕರು ಗೈರಾಗಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ಯಡಿಯೂರಪ್ಪನವರ ಮಗ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ" ಎಂದು ಕಾಲೆಳೆದಿದೆ.

Congress Slams BJP By Twitter For Bjp Leaders Not Attending By Vijayendra Oath Program

ವಿಜಯೇಂದ್ರರ ಪದಗ್ರಹಣ, ಬಿಜೆಪಿಗೆ ಹಿಡಿದ ಗ್ರಹಣ!! ಬಿಜೆಪಿಯ ಮುಂದಿನ ಸಾಲಿನ ನಾಯಕರೇ ಪದಗ್ರಹಣ ಸಮಾರಂಭಕ್ಕೆ ಗೈರಾಗಿ ನೂತನ ಅಧ್ಯಕ್ಷರ ವಿರುದ್ಧ ಬಂಡಾಯ ಸಾರಿದ್ದಾರೆ.
ಸಮಾರಂಭಕ್ಕೆ ರಾಷ್ಟ್ರೀಯ ನಾಯಕರೂ ಪತ್ತೆ ಇಲ್ಲ, ರಾಜ್ಯದ ನಾಯಕರೂ ಪತ್ತೆ ಇಲ್ಲ. ವಿಜಯೇಂದ್ರ ಬಿಜೆಪಿಯೊಳಗಿನ ಕೆಜೆಪಿಯ ಅಧ್ಯಕ್ಷರೇ ಹೊರತು ಬಿಜೆಪಿಯ ಅಧ್ಯಕ್ಷರಲ್ಲ! ಗೈರಾದವರ ಪಟ್ಟಿ ನೋಡುತ್ತಿದ್ದರೆ "ಸಂತೋಷ ಕೂಟ"ದ ಸದಸ್ಯರ ಸಂಖ್ಯೆ ಹೆಚ್ಚುವ ಲಕ್ಷಣವಿದೆ ಎಂದು ಕಾಂಗ್ರೆಸ್‌ ಹೇಳಿದೆ.

ರಾಜ್ಯಾಧ್ಯಕ್ಷ ಹುದ್ದೆಯ ಘೋಷಣೆಯಾಗಿದ್ದಕ್ಕೆ ಬಿಜೆಪಿಯಲ್ಲಿ ಇಷ್ಟೊಂದು ಆಕ್ರೋಶ, ಅಸಹನೆ ತುಂಬಿ ತುಳುಕುತ್ತಿದೆ. ಇನ್ನು ವಿರೋಧ ಪಕ್ಷದ ನಾಯಕನ ಆಯ್ಕೆಯಾದರೆ ಬಿಜೆಪಿಯಲ್ಲಿ ಡೈನಾಮೈಟ್ ಬ್ಲಾಸ್ಟ್ ಆಗುವುದು ಖಂಡಿತ! ಈ ಲೋಕಸಭೆ ಚುನಾವಣೆಯಲ್ಲೇ ಕೇಶವ ಕೃಪಾದ ಬಿಜೆಪಿ, ದವಳಗಿರಿಯ ಬಿಜೆಪಿ ನಡುವೆ ಕುರುಕ್ಷೇತ್ರ ಯುದ್ಧ ಶುರುವಾಗುವುದು ಖಚಿತ ಎಂದು ರಾಜ್ಯ ಕಾಂಗ್ರೆಸ್‌ ಹೇಳಿದೆ.

ಇದುವರೆಗೆ ದಲಿತರಿಗೆ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಕುಳಿತುಕೊಳ್ಳುವ ಅವಕಾಶ ಕೊಟ್ಟಿಲ್ಲ ಬಿಜೆಪಿ ಪಕ್ಷ. ದಲಿತರಿಗೆ ಜಗನ್ನಾಥ ಭವನದ ಗರ್ಭಗುಡಿಗೆ ಪ್ರವೇಶ ನಿಷೇಧಿಸಲಾಗಿದೆಯೇ ಬಿಜಪಿ ಎಂದು ಪ್ರಶ್ನಿಸಿದೆ. ಬಿಜೆಪಿಯಲ್ಲಿ ದಲಿತ, ಹಿಂದುಳಿದ ವರ್ಗದ ರಾಜಕಾರಿಣಿಗಳನ್ನು ಬಳಸಿ ಬೀಸಾಡುವುದು ಪಾರಂಪರಿಕವಾಗಿ ನಡೆದುಬಂದ ಪದ್ಧತಿ ಎಂಬುದನ್ನ ಸ್ವತಃ ಬಿಜೆಪಿಯ ಸಂಸದರೇ ಹೇಳಿದ್ದಾರೆ.ಬಿಜೆಪಿ ದಲಿತ ವಿರೋಧಿ ಎಂಬುದಕ್ಕೆ ಸ್ಪಷ್ಟ ನಿದರ್ಶನವಿದು ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

ಬಿ ವೈ ವಿಜಯೇಂದ್ರ ಪದಗ್ರಹಣಕ್ಕೆ ಗೈರಾದವರ ಪಟ್ಟಿ!

ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರುದರ್ಶಿ ಬಿ ಎಲ್‌ ಸಂತೋಷ್‌

ಮಾಜಿ ಸಚಿವ ವಿ ಸೋಮಣ್ಣ

ಮಾಜಿ ಸಚಿವ ಸಿ ಟಿ ರವಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಸಂಸದ ಶಿವಕುಮಾರ ಉದಾಸಿ

ಮಂಗಳಾ ಅಂಗಡಿ

ಸಂಸದ ಪ್ರತಾಪ್ ಸಿಂಹ

ಶ್ರೀನಿವಾಸ್ ಪ್ರಸಾದ್

ಅನಂತ್ ಕುಮಾರ್ ಹೆಗ್ಡೆ

ರಾಜಾ ಅಮರೇಶ್ ನಾಯಕ್

ಸಂಗಣ್ಣ ಕರಡಿ

ರಮೇಶ್ ಜಿಗಜಿಣಗಿ

ಸಂಸದ ಬಿ.ಎನ್. ಬಚ್ಚೇಗೌಡ

ಅರವಿಂದ ಬೆಲ್ಲದ್

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

ಶಾಸಕ ಎಸ್ ಟಿ ಸೋಮಶೇಖ‌ರ್‌

ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಶಾಸಕ ರವಿ ಸುಬ್ರಹ್ಮಣ್ಯ

ಮಾಜಿ ಸಚಿವ ಡಾ.ಕೆ ಸುಧಾಕರ್

ಶಿವರಾಮ್‌ ಹೆಬ್ಬಾರ್‌

ಎಂ ಟಿ ಬಿ ನಾಗರಾಜ್‌

ಶಂಕರ್‌ ಪಾಟೀಲ್‌ ಮುನೇನಕೊಪ್ಪ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+