BY Vijayendraa: ಬಿ ವೈ ವಿಜಯೇಂದ್ರ ಪದಗ್ರಹಣಕ್ಕೆ ಗೈರಾದವರ ಪಟ್ಟಿ! "ಸಂತೋಷ ಕೂಟ"ದ ಸಂಖ್ಯೆ ಹೆಚ್ಚಾಗುತ್ತಿದೆ
ಬೆಂಗಳೂರು, ನವೆಂಬರ್ 16: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ, ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ನೇಮಕವಾಗಿದ್ದಾರೆ. ಬುಧವಾರ ಪಕ್ಷದ ಕೇಂದ್ರ ಕಚೇರಿಯಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಮಕ್ಕೆ ಬಿಜೆಪಿ ಹಲವು ಹಿರಿಯ ನಾಯಕರು ಮತ್ತು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಬಣದ ಹಲವು ನಾಯಕರು ಗೈರಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಯಡಿಯೂರಪ್ಪನವರ ಮಗ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ" ಎಂದು ಕಾಲೆಳೆದಿದೆ.

ವಿಜಯೇಂದ್ರರ ಪದಗ್ರಹಣ, ಬಿಜೆಪಿಗೆ ಹಿಡಿದ ಗ್ರಹಣ!! ಬಿಜೆಪಿಯ ಮುಂದಿನ ಸಾಲಿನ ನಾಯಕರೇ ಪದಗ್ರಹಣ ಸಮಾರಂಭಕ್ಕೆ ಗೈರಾಗಿ ನೂತನ ಅಧ್ಯಕ್ಷರ ವಿರುದ್ಧ ಬಂಡಾಯ ಸಾರಿದ್ದಾರೆ.
ಸಮಾರಂಭಕ್ಕೆ ರಾಷ್ಟ್ರೀಯ ನಾಯಕರೂ ಪತ್ತೆ ಇಲ್ಲ, ರಾಜ್ಯದ ನಾಯಕರೂ ಪತ್ತೆ ಇಲ್ಲ. ವಿಜಯೇಂದ್ರ ಬಿಜೆಪಿಯೊಳಗಿನ ಕೆಜೆಪಿಯ ಅಧ್ಯಕ್ಷರೇ ಹೊರತು ಬಿಜೆಪಿಯ ಅಧ್ಯಕ್ಷರಲ್ಲ! ಗೈರಾದವರ ಪಟ್ಟಿ ನೋಡುತ್ತಿದ್ದರೆ "ಸಂತೋಷ ಕೂಟ"ದ ಸದಸ್ಯರ ಸಂಖ್ಯೆ ಹೆಚ್ಚುವ ಲಕ್ಷಣವಿದೆ ಎಂದು ಕಾಂಗ್ರೆಸ್ ಹೇಳಿದೆ.
ರಾಜ್ಯಾಧ್ಯಕ್ಷ ಹುದ್ದೆಯ ಘೋಷಣೆಯಾಗಿದ್ದಕ್ಕೆ ಬಿಜೆಪಿಯಲ್ಲಿ ಇಷ್ಟೊಂದು ಆಕ್ರೋಶ, ಅಸಹನೆ ತುಂಬಿ ತುಳುಕುತ್ತಿದೆ. ಇನ್ನು ವಿರೋಧ ಪಕ್ಷದ ನಾಯಕನ ಆಯ್ಕೆಯಾದರೆ ಬಿಜೆಪಿಯಲ್ಲಿ ಡೈನಾಮೈಟ್ ಬ್ಲಾಸ್ಟ್ ಆಗುವುದು ಖಂಡಿತ! ಈ ಲೋಕಸಭೆ ಚುನಾವಣೆಯಲ್ಲೇ ಕೇಶವ ಕೃಪಾದ ಬಿಜೆಪಿ, ದವಳಗಿರಿಯ ಬಿಜೆಪಿ ನಡುವೆ ಕುರುಕ್ಷೇತ್ರ ಯುದ್ಧ ಶುರುವಾಗುವುದು ಖಚಿತ ಎಂದು ರಾಜ್ಯ ಕಾಂಗ್ರೆಸ್ ಹೇಳಿದೆ.
ಇದುವರೆಗೆ ದಲಿತರಿಗೆ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಕುಳಿತುಕೊಳ್ಳುವ ಅವಕಾಶ ಕೊಟ್ಟಿಲ್ಲ ಬಿಜೆಪಿ ಪಕ್ಷ. ದಲಿತರಿಗೆ ಜಗನ್ನಾಥ ಭವನದ ಗರ್ಭಗುಡಿಗೆ ಪ್ರವೇಶ ನಿಷೇಧಿಸಲಾಗಿದೆಯೇ ಬಿಜಪಿ ಎಂದು ಪ್ರಶ್ನಿಸಿದೆ. ಬಿಜೆಪಿಯಲ್ಲಿ ದಲಿತ, ಹಿಂದುಳಿದ ವರ್ಗದ ರಾಜಕಾರಿಣಿಗಳನ್ನು ಬಳಸಿ ಬೀಸಾಡುವುದು ಪಾರಂಪರಿಕವಾಗಿ ನಡೆದುಬಂದ ಪದ್ಧತಿ ಎಂಬುದನ್ನ ಸ್ವತಃ ಬಿಜೆಪಿಯ ಸಂಸದರೇ ಹೇಳಿದ್ದಾರೆ.ಬಿಜೆಪಿ ದಲಿತ ವಿರೋಧಿ ಎಂಬುದಕ್ಕೆ ಸ್ಪಷ್ಟ ನಿದರ್ಶನವಿದು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬಿ ವೈ ವಿಜಯೇಂದ್ರ ಪದಗ್ರಹಣಕ್ಕೆ ಗೈರಾದವರ ಪಟ್ಟಿ!
ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರುದರ್ಶಿ ಬಿ ಎಲ್ ಸಂತೋಷ್
ಮಾಜಿ ಸಚಿವ ವಿ ಸೋಮಣ್ಣ
ಮಾಜಿ ಸಚಿವ ಸಿ ಟಿ ರವಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಸಂಸದ ಶಿವಕುಮಾರ ಉದಾಸಿ
ಮಂಗಳಾ ಅಂಗಡಿ
ಸಂಸದ ಪ್ರತಾಪ್ ಸಿಂಹ
ಶ್ರೀನಿವಾಸ್ ಪ್ರಸಾದ್
ಅನಂತ್ ಕುಮಾರ್ ಹೆಗ್ಡೆ
ರಾಜಾ ಅಮರೇಶ್ ನಾಯಕ್
ಸಂಗಣ್ಣ ಕರಡಿ
ರಮೇಶ್ ಜಿಗಜಿಣಗಿ
ಸಂಸದ ಬಿ.ಎನ್. ಬಚ್ಚೇಗೌಡ
ಅರವಿಂದ ಬೆಲ್ಲದ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಶಾಸಕ ಎಸ್ ಟಿ ಸೋಮಶೇಖರ್
ಮಾಜಿ ಸಚಿವ ರಮೇಶ್ ಜಾರಕಿಹೊಳಿ
ಶಾಸಕ ರವಿ ಸುಬ್ರಹ್ಮಣ್ಯ
ಮಾಜಿ ಸಚಿವ ಡಾ.ಕೆ ಸುಧಾಕರ್
ಶಿವರಾಮ್ ಹೆಬ್ಬಾರ್
ಎಂ ಟಿ ಬಿ ನಾಗರಾಜ್
ಶಂಕರ್ ಪಾಟೀಲ್ ಮುನೇನಕೊಪ್ಪ
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications