Get Updates
Get notified of breaking news, exclusive insights, and must-see stories!

ಶಿವಮೊಗ್ಗದಲ್ಲಿ ಮತ್ತೆ ಬೆಂಕಿ ಕಡ್ಡಿ ಗೀರಲು ಬಿಜೆಪಿ ತೆರಳಿದೆ: ಕಾಂಗ್ರೆಸ್ ಕೆಂಡ

ಬೆಂಗಳೂರು, ಅಕ್ಟೋಬರ್ 05: ರಾಜ್ಯಾದ್ಯಂತ ಸುದ್ದಿ ಮಾಡುತ್ತಿರುವ ಶಿವಮೊಗ್ಗ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿನ ಗಲಾಟೆ ಸ್ಥಳಕ್ಕೆ ಬಿಜೆಪಿ ಸತ್ಯಶೋಧನಾ ತಂಡ ತೆರಳಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿ ಕಾರಿದೆ. ಬಿಜೆಪಿ ಶಿವಮೊಗ್ಗದಲ್ಲಿ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲು ಹೋಗಿದೆ ಎಂದು ಆರೋಪಿಸಿದೆ.

ಬಿಜೆಪಿ ವಿರುದ್ಧ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಶಾಂತ ಸ್ಥಿತಿಗೆ ಬಂದಿರುವ ಶಿವಮೊಗ್ಗಕ್ಕೆ ಬಿಜೆಪಿ ನಾಯಕರು ಹೋಗಿರುವುದು ಸತ್ಯ ಶೋಧನೆಗಲ್ಲ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲು ಎಂದು ಹೇಳಿದೆ.

congress-slams-on-bjp

ಸತ್ಯ ಶೋಧನೆ ಮಾಡುವುದಕ್ಕೆ ಪೊಲೀಸರಿದ್ದಾರೆ, ಕಾನೂನು ಇದೆ. ಬಿಜೆಪಿ ನಾಯಕರ ಅಗತ್ಯವಿಲ್ಲ, ಬಿಜೆಪಿ ಯಾವುದೇ ಯಾವ ತನಿಖಾ ಏಜೆನ್ಸಿಯೂ ಅಲ್ಲ. ಪರಿಸ್ಥಿತಿಯನ್ನು ಹದಗೆಡಿಸಲು ಹೊಂಚು ಹಾಕಿರುವ ಬಿಜೆಪಿಗರ ಸಂಚನ್ನು ಯಶಸ್ವಿಯಾಗಲು ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ಕಾಂಗ್ರೆಸ್ ಗುಡುಗಿದೆ.

ಶಿವಮೊಗ್ಗದ ರಾಗಿಗುಡ್ಡಲ್ಲಿ ಈದ ಮಿಲಾದ್ ಬೃಹತ್ ಮೆರವಣಿಗೆ ವೇಳೆ ಗಲಾಟೆ ನಡೆದಿತ್ತು. ತಲ್ವಾರ್ ಪ್ರದರ್ಶಿಸಲಾಗಿತ್ತು. ಮೆರವಣಿಗೆ ವೇಳೆ ಮುಸ್ಲಿಂ ಯುವಕರ ಗುಂಪೊಂದು ಪೊಲೀಸರ ವಿರುದ್ಧ ಕೈ ತೂರಾಟ ಆರಂಭಿಸಿದ್ದರು. ನೋಡು ನೋಡುತ್ತಿದ್ದಂತೆ ಪರಿಸ್ಥಿತಿ ಹತೋಟಿ ಮೀರಿ ಹೋಗಿತ್ತು.

ರಾಗಿಗುಡ್ಡದ ಸ್ಥಳೀಯರಿಂದ ಬಿಜೆಪಿಗೆ ಮಾಹಿತಿ

ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ ಕಾರಿತು. ಈ ಸಂಬಂಧ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ಸತ್ಯಶೋಧನಾ ತಂಡ ಶಿವಮೊಗ್ಗಕ್ಕೆ ಬೆಳಗ್ಗೆ 11 ಗಂಟೆಗೆ ತೆರಳಿದೆ.

ಅಲ್ಲಿ ಖುದ್ದು ಗಲಭೆ ವೇಳೆ ತೊಂದರೆಗೀಡಾದ ಸಂತ್ರಸ್ತರ ಮನೆಗೆ ಭೇಟಿ ನೀಡಿದೆ. ಘಟನೆ ನಡೆದ ಕುರಿತು ಸ್ಥಳೀಯರಿಂದ ನೈಜ ಮಾಹಿತಿ ಸಂಗ್ರಹಿಸುವಲ್ಲಿ ಬಿಜೆಪಿ ನಾಯಕರು ನಿರತರಾಗಿದ್ದಾರೆ.

congress-slams-on-bjp

ಸತ್ಯ ಶೋಧನಾ ತಂಡದಲ್ಲಿ ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಡಾ.ಸಿ.ಎನ್. ಅಶ್ವಥ್ ನಾರಾಯಣ, ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ, ಸ್ಥಳಿಯ ಶಾಸಕರು ಹಾಗೂ ಇನ್ನಿತರ ಮುಖಂಡರು ಶಿವಮೊಗ್ಗದ ರಾಗಿಗುಡ್ಡದ ಬೀದಿಗಳಲ್ಲಿ ಸಂಚರಿಸಿದ್ದಾರೆ. ಗಲಭೆ ಕುರಿತು ವಾಸ್ತವಾಂಸ ಸಂಗ್ರಹಿಸುತ್ತಿದ್ದಾರೆ.

ಸರ್ಕಾರದ ವಿರುದ್ಧ ಎಂಪಿ ರೇಣುಕಾಚಾರ್ಯ ಆಕ್ರೋಶ

ಈ ಮಧ್ಯೆ ಗಲಭೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು, ಗಲಭೆ ಕಾರಣರಾದವರನ್ನು ಬಂಧಿಸಿದರೆ ಮಾತ್ರವೇ ಸಾಲದು ಅವರನ್ನು ಎನ್‌ಕೌಂಟರ್ ಮಾಡಬೇಕು ಎಂದು ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಇತ್ತ ರಾಜ್ಯ ಬಿಜೆಪಿಯು ಟ್ವೀಟ್ ಮೂಲಕ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಆಡಳಿತಾವಧಿಯಲ್ಲಿ ಕರ್ನಾಟಕ/ಶಿವಮೊಗ್ಗವು 1990ರ ಅವಧಿಯಲ್ಲಿನ ಜಮ್ಮು ಮತ್ತು ಕಾಶ್ಮೀರದಲ್ಲಿನ ಘಟನೆಗಳನ್ನು ಹೋಲುತ್ತವೆ. ಹಿಂದುಗಳ ಮೇಲಿನ ಜಿಹಾದಿಗಳ ದಾಳಿ, ಸೈನಿಕರ ಮೇಲಿನ ಕಲ್ಲು ತೂರಾಟ, ಒಕ್ಕಲೆಬ್ಬಿಸುವುದು, ಸ್ಥಳೀಯರನ್ನು ಭಯ ಭೀತಗೊಳಿಸುವ ಘಟನೆಗಳು ಜಮ್ಮು ಕಾಶ್ಮೀರದಲ್ಲಿ ನಡೆದಿದ್ದು, ಅಂತದ್ದೇ ಘಟನೆಗಳು ಶಿವಮೊಗ್ಗದಲ್ಲಿ ನಡೆದಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ಪ್ರತಿಪಾದಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+