ಚಂದ್ರಯಾನ 3 ಕುರಿತ ಪೋಸ್ಟ್ಗೆ ಕಾಮೆಂಟ್: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು
ಬೆಂಗಳೂರು, ಆಗಸ್ಟ್ 24: ಬುಧವಾರ ಯಶಸ್ವಿಯಾದ ಭಾರತೀಯ ಚಂದ್ರಯಾನ 3 ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಲಾಗಿತ್ತು. ಇದಕ್ಕೆ ಕಾಮೆಂಟ್ ಮಾಡಿದ್ದ ಚಿಂತಕ ಮತ್ತು ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ನಾಯಕಿ ಒಬ್ಬರು ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದಾರೆ ಎಂದು ಆರೋಪಿ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚಂದ್ರಯಾನ 3 ಭಾರತೀಯರ ಕನಸು, ಅದರ ಯಶಸ್ವಿಗೆ ಎಲ್ಲರು ಪ್ರಾರ್ಥಿಸಿದ್ದರು. ಇದೇ ನಿಟ್ಟಿನಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ (Facebook) ಪೋಸ್ಟ್ ಹಾಕಿದ್ದರು. ಅದಕ್ಕೆ ಕಾಮೆಂಟ್ ಮಾಡಿದ್ದಕ್ಕೆ ಪ್ರತಿಯಾಗಿ ಸೂಲೆಬೆಲೆ ಅವರು ಅವಹೇಳನಕಾರಿಯಾಗಿ ಪ್ರತಿಕ್ರಿಯಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿ ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್ ಎಂಬವರು ದೂರು ಕೊಟ್ಟಿದ್ದಾರೆ.
ಏನದು ಕಾಮೆಂಟ್?
ಫೇಸ್ಬುಕ್ನಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಎಲ್ಲರಿಗೂ ದೇವಸ್ಥಾನಗಳಿಗೆ ಹೋಗಿ ಕೈಮುಗಿದು ಚಂದ್ರಯಾನ 3 ಯಶಸ್ವಿಯಾಗಲಿ ಎಂದು ಫೋಟೋ ಹಾಕಿ ಪ್ರಾರ್ಥಿಸಿ ಎಂದು ಪೋಸ್ಟ್ವೊಂದನ್ನು ಮಾಡಿದ್ದರು.

ಅವರ ಪೋಸ್ಟ್ಗೆ ದೇವಸ್ಥಾನಕ್ಕೆ ಪೂಜೆ ಮಾಡೋದು, ಪ್ರಾರ್ಥನೆ ಮಾಡುವುದು ತಪ್ಪಲ್ಲ. ಆದರೆ ಫೋಟೋ ಹಾಕಿ ಅಂತ ಹೇಳುವುದು ತಪ್ಪು. ಅವರ ಪರಿಶ್ರಮ ಫಲಿಸಲಿ ಎಂದು ಪ್ರಾರ್ಥಿಸಿದರೆ ಬೇಡಿಕೊಂಡರೆ ಸಾಕು ಎಂದು ಕಾಂಗ್ರೆಸ್ ನ ಸೌಗಂಧಿಕಾ ಕಾಮೆಂಟ್ ಮಾಡಿದ್ದರು.
ಸೌಗಂಧಿಕಾ ಅವರ ಕಾಮಂಟ್ ಗೆ ಪ್ರತಿಕ್ರಿಯಿಸಿರುವ ಚಕ್ರವರ್ತಿ ಸೂಲಿಬೆಲೆ ಅವರು, 'ನಿನಗೆ ಎಲ್ಲಿ ಯಾಕೆ ಉರಿ ಬಂತೋ ಗೊತ್ತಿಲ್ಲ' ಎಂದು ಮರುಕಾಮೆಂಟ್ ಮಾಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸೌಗಂಧಿಕಾ ಅವರು ಅವಾಚ್ಯವಾಗಿ ಹೀಗೆ ಕಾಮೆಂಟ್ ಮಾಡಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗದ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದಾರೆ. ಜೊತೆಗೆ ನಕಲಿ ಸಾಮಾಜಿ ಜಾಲತಾಣಗಳ ಖಾತೆಯಿಂದಲೂ ನನ್ನ ತೇಜೋವಧೆಗೆ ಯತ್ನಿಸಲಾಗಿದೆ ಎಂದು ಸಹ ಹೇಳಿಕೊಂಡಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications