ಫೆ 6ರಿಂದ 'ಕನ್ನಡ'ದಲ್ಲಿ ಹೊಸ ಪತ್ರಿಕೆ ಆರಂಭ: ಕೃಪೆ, ಕಾಂಗ್ರೆಸ್
ಬೆಂಗಳೂರು, ಫೆ 1: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್, 'ಕನ್ನಡ'ದಲ್ಲಿ ಹೊಸ ಪತ್ರಿಕೆ ಹೊರತರಲು ನಿರ್ಧರಿಸಿದೆ. 'ನಮ್ಮ ಕಾಂಗ್ರೆಸ್' ಎನ್ನುವ ಹೆಸರಿನಲ್ಲಿ ಈ ಪತ್ರಿಕೆ ಸದ್ಯದಲ್ಲೇ ಆರಂಭವಾಗಲಿದೆ.
ಚುನಾವಣೆಗೆ ಇನ್ನು ಮೂರು ತಿಂಗಳು ಬಾಕಿರುವ ಈ ಹೊತ್ತಿನಲ್ಲಿ, ತಮ್ಮ ಪಕ್ಷದ ಸಾಧನೆ ಮತ್ತು ಮೋದಿ ಸರಕಾರದ ವೈಫಲ್ಯತೆಯನ್ನು ಜನರಿಗೆ ತಲುಪಿಸುವಲ್ಲಿ ಈ ಪತ್ರಿಕೆ ಕೆಲಸ ಮಾಡಲಿದ್ದು, ಇದೇ ಬರುವ ಬುಧವಾರ (ಫೆ 6) ಮೊದಲ ಸಂಚಿಕೆ ಹೊರಬರಲಿದೆ.
ಕನ್ನಡದ ಕೆಲವು ಮಾಧ್ಯಮಗಳು ಬಿಜೆಪಿ ಪರ ನಿಲುವನ್ನು ಹೊಂದಿರುವುದರಿಂದ, ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆಯಾಗಬಾರದು ಎನ್ನುವ ನಿಟ್ಟಿನಲ್ಲಿ, ಪಕ್ಷದ ಒಡೆತನದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ರೀತಿಯಲ್ಲಿ, ಇದು ಕೆಲಸ ನಿರ್ವಹಿಸಲಿದೆ.

'ನಮ್ಮ ಕಾಂಗ್ರೆಸ್' ಪಾಕ್ಷಿಕವಾಗಿ (15 ದಿನಕ್ಕೊಮ್ಮೆ) ಹೊರಬರಲಿದ್ದು, ಪ್ರತೀ ಸಂಚಿಕೆಯಲ್ಲಿ ರಾಜ್ಯದ ಪ್ರಮುಖ ಕಾಂಗ್ರೆಸ್ ಮುಖಂಡರ ಅಭಿಪ್ರಾಯವನ್ನೂ ಹೊತ್ತು ತರಲಿದೆ. ಮೋದಿ ಸರಕಾರದ ವೈಫಲ್ಯವನ್ನು ಎತ್ತಿ ತೋರಿಸುವುದೇ ಪತ್ರಿಕೆಯ ಮೂಲ ಉದ್ದೇಶ.
ನಮ್ಮ ಕಾಂಗ್ರೆಸ್ ಪಾಕ್ಷಿಕವನ್ನು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು ಎನ್ನುವ ಫರ್ಮಾನನ್ನು ಕೆಪಿಸಿಸಿ ಅಧ್ಯಕ್ಷರು ಹೊರಡಿಸುವ ಸಾಧ್ಯತೆಯಿದೆ.
ಕಳೆದ ಏಳು ದಶಕಗಳಲ್ಲಿ ದೇಶಕ್ಕೆ ಮತ್ತು ರಾಜ್ಯಕ್ಕೆ ಕಾಂಗ್ರೆಸ್ ಸರಕಾರದ ಕೊಡುಗೆ, ಪಕ್ಷಕ್ಕಾಗಿ ದುಡಿದವರು, ರಾಜಕೀಯ ವಿಶ್ಲೇಷಣೆ, ವಿರೋಧ ಪಕ್ಷಗಳ ವೈಫಲ್ಯತೆ ಮುಂತಾದವುಗಳು, ಕಾಂಗ್ರೆಸ್ಸಿನ ಹೊಸ ಪಾಕ್ಷಿಕ ಪತ್ರಿಕೆಯಲ್ಲಿ ಇರಲಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ












Click it and Unblock the Notifications