ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುಟ್ಟಣ್ಣಯ್ಯ ಕುಟುಂಬದವರು ಚುನಾವಣೆ ಸ್ಪರ್ಧಿಸಿದರೆ ಕಾಂಗ್ರೆಸ್ ಬೆಂಬಲ

|
Google Oneindia Kannada News

ಮಂಡ್ಯ, ಮಾರ್ಚ್ 09 : 'ಕೆ.ಎಸ್.ಪುಟ್ಟಣ್ಣಯ್ಯ ಕುಟುಂಬದವರು ಚುನಾವಣೆಗೆ ಸ್ಪರ್ಧಿಸಿದರೆ ಕಾಂಗ್ರೆಸ್ ಬೆಂಬಲ ನೀಡಲಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪಾಂಡವಪುರದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ಮೇಲುಕೋಟೆ ಕ್ಷೇತ್ರದಲ್ಲಿ ಪುಟ್ಟಣ್ಣಯ್ಯ ಅವರ ಕುಟುಂಬದವರು ಚುನಾವಣೆ ಸ್ಪರ್ಧಿಸಿದರೆ ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತದೆ' ಎಂದರು.

ಕಾಂಗ್ರೆಸ್ ಸೇರುವ ಕುರಿತು ದರ್ಶನ್ ಪುಟ್ಟಣ್ಣಯ್ಯ ಹೇಳಿದ್ದೇನು?ಕಾಂಗ್ರೆಸ್ ಸೇರುವ ಕುರಿತು ದರ್ಶನ್ ಪುಟ್ಟಣ್ಣಯ್ಯ ಹೇಳಿದ್ದೇನು?

'ಪುಟ್ಟಣ್ಣಯ್ಯ ಅವರು ಬದುಕಿದ್ದಾಗ ಕಾಂಗ್ರೆಸ್ ಬೆಂಬಲಿಸಿದ್ದರು. ಜ್ಯಾತ್ಯಾತೀತ ನಿಲುವು ಹೊಂದಿದ್ದು, ಕೋಮುವಾದಿಗಳ ವಿರುದ್ಧ ಹೋರಾಡುತ್ತಿದ್ದರು. ಆದ್ದರಿಂದ, ಅವರ ಉತ್ತರಾಧಿಕಾರಿಗೆ ಕಾಂಗ್ರೆಸ್ ಬೆಂಬಲ ನೀಡಲಿದೆ' ಎಂದು ತಿಳಿಸಿದರು.

Congress will support KS Puttanaiah family says Siddaramaiah

ಪ್ರಕರಣ ವಾಪಸ್ : 'ರೈತ ಹೋರಾಟಗಾರರ ಮೇಲೆ ದಾಖಲು ಮಾಡಿರುವ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಎಂದು ಪುಟ್ಟಣ್ಣಯ್ಯ ಅವರು ಬಯಸಿದ್ದರು. ಈ ಕುರಿತು ಸಂಪುಟ ಉಪ ಸಮಿತಿಗೆ ಸೂಚನೆ ನೀಡಿದ್ದೇನೆ' ಎಂದು ಸಿದ್ದರಾಮಯ್ಯ ಹೇಳಿದರು.

ರೈತರ ಏಕೈಕ ಜನಪ್ರತಿನಿಧಿ ಕೆಎಸ್ ಪುಟ್ಟಣ್ಣಯ್ಯರೈತರ ಏಕೈಕ ಜನಪ್ರತಿನಿಧಿ ಕೆಎಸ್ ಪುಟ್ಟಣ್ಣಯ್ಯ

ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಚುನಾವಣಗೆ ಸ್ಪರ್ಧಿಸಿದರೆ ಸ್ವರಾಜ್ ಇಂಡಿಯಾ ಪಕ್ಷದಿಂದ ಸ್ಪರ್ಧಿಸುವೆ ಎಂದು ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ.

English summary
Karnataka Chief Minister Siddaramaiah said that, Congress party will support to late farmer leader, Melukote MLA K.S.Puttanaiah family member if they contest for Karnataka assembly elections 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X